Connect with us

Kodagu

ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿಗೆ ಕೊಡಗು ವಿಶ್ವವಿದ್ಯಾಲಯದ ನೂತನ ಕುಲ ಸಚಿವ ಪ್ರೊ. ಸುರೇಶ ಭೇಟಿ

Published

on

ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾಲೇಜಿಗೆ ಭೇಟಿ ನೀಡಿ ಎಲ್ಲಾ ಕೊಠಡಿಗಳು ಮತ್ತು ಮೌಲ್ಯಮಾಪನ ಕೇಂದ್ರ, ಗ್ರಂಥಾಲಯ, ವಿಜ್ಞಾನ ಲ್ಯಾಬ್ ಮತ್ತು ಕಂಪ್ಯೂಟರ್ ಲ್ಯಾಬ್ ಗಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ನೋಡಿ ಕೊಠಡಿಗಳಲ್ಲಿ ನೀರು ಸುರಿಯುತ್ತಿದ್ದು ತಕ್ಷಣ ಕೊಠಡಿಗಳ ನವೀಕರಣ ಆಗಬೇಕು ನಾನು ಮತ್ತು ಕುಲಪತಿ ಗಳ ಜೊತೆ ಗೂಡಿ ಸ್ಥಳೀಯ ಶಾಸಕರಾದ ಮಂಥರ್ ಗೌಡ ಹಾಗೂ ಮುಖ್ಯ ಮಂತ್ರಿಗಳು ಕಾನೂನು ಸಲಹೆ ಗಾರರು ಮತ್ತು ವಿರಾಜಪೇಟೆ ಶಾಸಕರಾದ ಪೊನ್ನಣ್ಣ ಮತ್ತು ವಿಧಾನ ಪರಿಷತ್ ಸದಸ್ಯರ ಹಾಗೂ ಮೈಸೂರು ಮತ್ತು ಕೊಡಗು ಲೋಕಸಭಾ ಸದಸ್ಯರರಿಗೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಪರಿಸ್ಥಿತಿಯನ್ನ ತಿಳಿಸಿ ಸರ್ಕಾರದಿಂದ ನೆರವನ್ನ ಕಲ್ಪಿಸುತ್ತೇವೆ.
ಈ ಕಾಲೇಜಿಗೆ ತುಂಬಾ ಚರಿತ್ರೆ ಇರುವುದರಿಂದ 75ನೇ ಸುವರ್ಣ ಮಹೋತ್ಸವ ಆಚರಿಸುವ ಸನಿಹ ಹತ್ತಿರ ಆಗುತ್ತಿದ್ದು. ಅದರಿಂದ ಸರ್ಕಾರಕ್ಕೆ ಗಮನ ತಂದು ಸರಿಪಡಿಸುತ್ತೇನೆ ಕೊಡಗಿನ ಜಿಲ್ಲೆ ಹಾಗೂ ರಾಜ್ಯದ ವಿದ್ಯಾರ್ಥಿಗಳಿಗೆ ಉತ್ಕೃಷ್ಟ ಶಿಕ್ಷಣ ಕೊಡುವಲ್ಲಿ ಕೊಡಗು ವಿಶ್ವವಿದ್ಯಾಲಯ ಪ್ರಾಮಾಣಿಕವಾಗಿ ಪ್ರಯತ್ನ ಪಡುತ್ತದೆ.


ವಿಶ್ವವಿದ್ಯಾನಿಲಯಕ್ಕೆ ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರಿಗೆ ಸರ್ಕಾರದಿಂದ ಯಾವ ಸೌಲಭ್ಯಗಳು ಇರುತ್ತದೆ ಅಂತಹ ಸೌಲಭ್ಯಗಳನ್ನ ಸರ್ಕಾರ ಮಟ್ಟದಲ್ಲಿ ಗಮನ ಸೆಳೆದು ಕಲ್ಪಿಸಲಾಗುವುದು. ಹಾಗೂ ಪರೀಕ್ಷೆಗಳನ್ನ ಕಟ್ಟುನಿಟ್ಟಾಗಿ ನಡೆಸಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಬೇಗಬೇಗನೆ ಮೌಲ್ಯಮಾಪನ ಮಾಡಿಸಿ ಪರೀಕ್ಷೆಯ ಫಲಿತಾಂಶವನ್ನು ಬಿಡುತ್ತೇನೆ ಎಂದು ನೂತನ ಕುಲ ಸಚಿವ (ಮೌಲ್ಯಮಾಪನ ) ಪ್ರೊಫೆಸರ್ ಸುರೇಶ ಹೇಳಿದರು,
ನೂತನ ಕುಲ ಸಚಿವರಾಗಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿಗೆ ಪ್ರಥಮವಾಗಿ ಭೇಟಿ ನೀಡಿದ್ದರಿಂದ ಪ್ರಾಂಶುಪಾಲರಾದ ಮೇಜರ್ ಡಾ.ರಾಘವಾ.ಬಿ ಮತ್ತು ಪ್ರಾಧ್ಯಾಪಕರ ನೇತೃತ್ವದಲ್ಲಿ ಸನ್ಮಾನಿಸಲಾಯಿತು
ಈ ಸಂದರ್ಭದಲ್ಲಿ ಸಂಯೋಜಕರಾದ ಡಾ. ರವಿಶಂಕರ್ ಡಾ. ತಿಪ್ಪೇ ಸ್ವಾಮಿ, ಡಾ ನಾಗರಾಜ್ ಕೆ.ಟಿ, ಡಾ. ಎಂ ಪಿ ಕೃಷ್ಣ, ಡಾ. ಮಂಜುನಾಥ್. ಡಾ ಅರುಣ್ ಕುಮಾರ್ ಹಾಗೂ ಕಾಲೇಜಿನ ಎಲ್ಲಾ ವಿಭಾಗದ ಪ್ರಾಧ್ಯಾಪಕರು ಮತ್ತು ಅತಿಥಿ ಉಪನ್ಯಾಸಕರು ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.

Continue Reading

Kodagu

ಚಿಕ್ಕಮ್ಮನ ಮೇಲೆ ಗುದ್ದಲಿಯಿಂದ ಹಲ್ಲೆ: ಆರೋಪಿ ಆರೆಸ್ಟ್‌

Published

on

ಮಡಿಕೇರಿ: ಪೊನ್ನಂಪೇಟೆ ತಾಲೂಕಿನ ಬೆಸಗೂರು ಗ್ರಾಮದಲ್ಲಿ ಸ್ವಂತ ಚಿಕ್ಕಮ್ಮನನ್ನೇ ಗುದ್ದಲಿಯಿಂದ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊನ್ನಂಪೇಟೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಏನಿದು ಪ್ರಕರಣ?

ಅರಮಣಮಾಡ ಸಚಿನ್‌(42) ಎಂಬಾತ ಅರಮಣಮಾಡ ಬಾಗು(56) ಎಂಬುವವರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದನು. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ಮಧ್ಯೆ ಹಿಂದಿನಿಂದಲೂ ಪರಸ್ಪರ ವೈಶ್ಯಮ್ಯವಿದ್ದು, ಇಂದು ಗದ್ದೆಗೆ ತೆರಳುವ ಹಾದಿಗಾಗಿ ಇವರಿಬ್ಬರ ಮಧ್ಯೆ ಗಲಾಟೆ ನಡೆದು ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿತ್ತು. ಹೀಗಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

 

Continue Reading

Kodagu

ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರ ಮೇಲೆ ಎಫ್ಐಆರ್ ದಾಖಲು

Published

on

ಮಡಿಕೇರಿ: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜನಿಕಂಡ ಮಹೇಶ್ ನಾಚಯ್ಯ ಅವರ ಮೇಲೆ ಬ್ರಹ್ಮಗಿರಿ ಕೊಡವ ವಾರ ಪತ್ರಿಕೆಯ ಸಂಪಾದಕಿ ಉಳಿಯಂಡ ಡಾಟಿ ಪೂವಯ್ಯ ಅವರು ನೀಡಿದ ದೂರಿನ್ವಯ ಭಾರತೀಯ ನ್ಯಾಯ ಸಂಹಿತೆ (BNS) U\S 75(1)(iv) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.


ಶುಕ್ರವಾರ(ಜು.18) ಪಿರ್ಯಾದಿಯವರು ಮಡಿಕೇರಿ ನಗರ ಮಹಿಳಾ ಠಾಣೆಗೆ ಹಾಜರಾಗಿ ನೀಡಿದ ಪುಕಾರಿನ ಸಾರಾಂಶವೇನೆಂದರೆ,ಪಿರ್ಯಾದಿಯವರ 38 ವರ್ಷಗಳಿಂದ ಬ್ರಹ್ಮಗಿರಿ ಕೊಡವ ವಾರ ಪತ್ರಿಕೆಯಲ್ಲಿ ಉಪಸಂಪಾದಕಿಯಾಗಿ ಕಾರ್ಯನಿರ್ವಹಿಸಿಕೊಂಡಿದ್ದು, ವೈಯಕ್ತಿಕ ದ್ವೇಷ ಎಂಬಂತೆ ಮಾನಹಾನಿ ಮಾಡುವ ಉದ್ದೇಶದಿಂದ ಪೂಮಾಲೆ ಪತ್ರಿಕೆಯ ಸಂಪಾದಕ ಮತ್ತು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಅಜ್ಜನಿಕಂಡ ಮಹೇಶ್ ನಾಚಯ್ಯ ಅವರ ವ್ಯಾಟ್ಸ್ ಅಪ್ ನಂಬರ್ ನಿಂದ ದಿನಾಂಕ 6-07-2025ರಂದು ಸಾಮಾಜಿಕ ಜಾಲತಾಣವಾದ ವ್ಯಾಟ್ಸ್ ಅಪ್ ಗುಂಪುಗಳಲ್ಲಿ ಹಾಗೂ ಬೇರೆಯವರ ವೈಯಕ್ತಿಕ ವ್ಯಾಟ್ಸ್ ಅಪ್ ನಂಬರ್ ಳಿಗೆ ಪಿರ್ಯಾದಿಯವರನ್ನು ಕೊಡವ ಭಾಷೆಯಲ್ಲಿ “ಎಲ್ಲಾ ಬೆತ್ತಲೆ ಆನವಡ ಕೊಣಿ ನೋಟಿಯಪ್ಪ(ಎಲ್ಲಾ ಬೆತ್ತಲಾದವಳ ಚೆಲ್ಲಾಟ ನೋಡ್ರಪ್ಪಾ) ಎಂಬುದಾಗಿ ತೀರಾ ಆಕ್ಷೇಪಕಾರಿಯಾಗಿಯೂ ಆಘಾತಕಾರಿಯಾಗಿಯೂ ಟಿಪ್ಪಣಿ ಬರೆದು ಸುಮಾರು20 ವರ್ಷಗಳ ಹಿಂದೆ ಆಗಿಹೋದ ಘಟನೆಯನ್ನೂ,ಅಂದೂ ನ್ಯಾಯಾಲಯ ನಿರಪರಾಧಿ ಎಂದು ಘೋಷಿಸಿರುವುದನ್ನು ಲೆಕ್ಕಿಸದೆ ವ್ಯಾಪಕ ಅಪಪ್ರಚಾರ ಮಾಡಿ ತೇಜೋವಧೆ ಮಾಡಿ ಪಿರ್ಯಾದಿಯವರಿಗೆ ಮಾನಸಿಕ ಹಿಂಸೆ ಅನುಭವಿಸುವಂತೆ ಮಾಡಿರುತ್ತಾರೆ.

ತಪ್ಪಿತಸ್ಥೆ ಅಲ್ಲವೆಂದು ಘನವೆತ್ತ ಮಡಿಕೇರಿ ನ್ಯಾಯಾಲಯ ತೀರ್ಪು ಹೊರಡಿಸಿರುವುದನ್ನು ಮರೆಮಾಚಿ ಕುತಂತ್ರಿಗಳು ಪಿರ್ಯಾದಿಯವರ ಮೇಲೆ ಆರೋಪಿಸಿದ್ದ ಹಳೆ ವದಂತಿಗಳನ್ನು ಫೋಟೋ ಸಹಿತ ಪ್ರಕಟಿಸಿ ಎಲ್ಲಾ ಗ್ರೂಪ್ ಗಳಿಗೆ ಹರಡಿ ಆರೋಪ ,ಅಸಹ್ಯಕರ ಲೈಂಗಿಕ ಅರ್ಥ ಛಾಯೆ ಬರುವಂತೆ ಶಬ್ದ ಬಳಸಿ ಆಕ್ಷೇಪವಾದ ವಾಕ್ಯಗಳನ್ನು ದುರುದ್ದೇಶದಿಂದ ಬಳಸಿ ಲೈಂಗಿಕವಾಗಿ ಬಣ್ಣದ ಟೀಕೆಗಳ ಪದಗಳನ್ನು ಉಪಯೋಗಿಸಿ ಕಿರುಕುಳ ಕೊಟ್ಟದ್ದು ಪಿರ್ಯಾದಿಯವರನ್ನು ಕಳಂಕಿತ ಮಹಿಳೆ ಎಂಬಂತೆ ಬಿಂಬಿಸಿ ಮಾನಸಿ ಆಘಾತ ಉಂಟುಮಾಡಿರುತ್ತಾರೆ.

ಇದರಿಂದ ಮಾನಸಿಕವಾಗಿ ಬಹಳಷ್ಟು ನೊಂದಿರುವ ಪಿರ್ಯಾದಿ ತುಂಬಾ ಕುಗ್ಗಿ ಹೋಗಿರುತ್ತೇನೆ.ಆದ್ದರಿಂದ ಅಜ್ಜನಿಕಂಡ ಮಹೇಶ್‌ ನಾಚಯ್ಯವರ ಮೇಲೆ ಕಾನೂನು ಕ್ರಮಕೈಗೊಳ್ಳಬೇಕಾಗಿ ಕೊಟ್ಟ ಪುಕಾರಿಗೆ FIR ದಾಖಲಾಗಿದೆ.

Continue Reading

Kodagu

ಸ್ಟಾರ್ ಆಫ್ ಕರ್ನಾಟಕ ಪ್ರಶಸ್ತಿ ಗರಿಯನ್ನು ತನ್ನ ಮುಡಿಗೇರಿಸಿಕೊಂಡ ಭರತನಾಟ್ಯ ಕಲಾವಿದೆ ಕೊಂಪುಳಿರ ಪಿ.ದಿಥ್ಯ

Published

on

ಮಡಿಕೇರಿ: ಬೆಳೆಯುವ ಸಿರಿ ಮೊಳಕೆಯಲ್ಲೇ ಎನ್ನುವಂತೆ ವಿರಾಜಪೇಟೆಯ ಪುಟ್ಟ ಪೋರಿ ಭರತನಾಟ್ಯ ಕಲಾವಿದೆ ಕೊಂಪುಳಿರ.ಪಿ.ದಿಥ್ಯ ಗೆ ಸ್ಟಾರ್ ಆಫ್ ಕರ್ನಾಟಕ-2025 ರ ಪ್ರಶಸ್ತಿ ಗರಿಯನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ.

ವಿರಾಜಪೇಟೆಯ ನಾಟ್ಯಾಂಜಲಿ ನಾಟ್ಯ ನೃತ್ಯ ಶಾಲೆಯಲ್ಲಿ ತನ್ನ ಚಿಕ್ಕ ವಯಸ್ಸಿಗೆ ಅಮೋಘ ಪ್ರತಿಭೆ ಮಾಡಿರುವ ಇವರು ತನ್ನ ಗುರುಗಳಾದ ವಿದುಷಿ ಹೇಮಾವತಿ ಮತ್ತು ಕಾವ್ಯ ಇವರ ಮಾರ್ಗದರ್ಶನದಲ್ಲಿ ಈ ಸಾಧನೆ ಮಾಡಿದ್ದಾರೆ.

ಈ ಸಾಧನೆಯನ್ನು ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದಿಥ್ಯಳ ಪ್ರತಿಭೆಯನ್ನು ಗಣ್ಯರು ಗುರುತಿಸಿದ್ದು, ಬಳಿಕ ಈ ರಾಜ್ಯಮಟ್ಟದ ಪ್ರಶಸ್ತಿಗೆ ತನ್ನ ಸಣ್ಣ ವಯಸ್ಸಿನಲ್ಲೇ ಆಯ್ಕೆಯಾದರು.

ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್, ರೋಟರಿ ಕ್ಲಬ್ ಹಾಗೂ ದಿನೇಶ್ ಫೌಂಡೇಶನ್ ಸಹಯೋಗದೊಂದಿಗೆ ಬೆಂಗಳೂರಿನ ಬನಶಂಕರಿ 2ನೇ ಹಂತದಲ್ಲಿರುವ ಜೆಎಸ್‍ಎಸ್ ಶಾಲಾ ಆವರಣದಲ್ಲಿರುವ ಶ್ರೀ ಘನಲಿಂಗ ಶಿವಯೋಗಿ ಸಭಾಂಗಣದಲ್ಲಿ ನಡೆದ ಕನ್ನಡ ಸಾಹಿತ್ಯ ಸಂಭ್ರಮ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಕೊಂಪುಳಿರ.ಪಿ.ದಿಥ್ಯ ಗೆ ಸ್ಟಾರ್ ಆಫ್ ಕರ್ನಾಟಕ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದಿಥ್ಯ ವಿರಾಜಪೇಟೆ ಪಟ್ಟಣದ ವಿನಾಯಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎರಡನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಇಲ್ಲಿನ ಚಿಕ್ಕಪೇಟೆಯ ನಿವಾಸಿ ನಿವೃತ್ತ ಶಿಕ್ಷಕರುಗಳಾದ ಕೊಂಫುಳಿರ ಯು ಪಳಂಗಪ್ಪ, ತಾರಾಮಣಿ ಅವರ ಮೊಮ್ಮಗಳು ಹಾಗೂ ಪೃಥ್ವಿ ಕುಮಾರ್ ಮತ್ತು ಭವ್ಯ ದಂಪತಿಯ ಪುತ್ರಿಯಾಗಿದ್ದಾರೆ.

Continue Reading

Trending

error: Content is protected !!