Chamarajanagar
ಇಂಡಿಗನತ್ತದಲ್ಲಿ ಶಾಂತಿಯುತ ಮರು ಮತದಾನ
ಹನೂರು : ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಲೋಕ ಸಭಾ ಚುನಾವಣೆಯ ಮರು ಮತದಾನ ಶಾಂತಿಯುತವಾಗಿ ನಡೆಯುತ್ತಿದೆ.
ಇಂಡಿಗನತ್ತ ಗ್ರಾಮದ ಮತಗಟ್ಟೆ ಸಂಖ್ಯೆ 146 ರಲ್ಲಿ ಮರು ಮತದಾನ ನಡೆಯುತ್ತಿದ್ದು, ಇಲ್ಲಿ ಒಟ್ಟು 528 ಮತದಾರರಿದ್ದಾರೆ. ಇವರಲ್ಲಿ ಪುರುಷರು 279, ಮಹಿಳೆಯರು 249 ಇದ್ದಾರೆ. ಇಂದು ಬೆಳಿಗ್ಗೆ 7 ಕ್ಕೆ ಮತದಾನ ಆರಂಭವಾಯಿತು. ಮಧ್ಯಾಹ್ನ 2 ಗಂಟೆ ವೇಳೆಗೆ 67 ಮಂದಿ ಮತ ಚಲಾಯಿಸಿದ್ದರು. ಇದು ವರೆಗೆ ಮೆಂದಾರೆಯ 58 ಮಂದಿ ಹಾಗೂ ಇಂಡಿಗನತ್ತ ಗ್ರಾಮದ 9 ಮಂದಿ ಮತ ಚಲಾಯಿಸಿದ್ದಾರೆ.
ಏ.26ರಂದು ನಡೆದ ಸಾರ್ವತ್ರಿಕ ಚುನಾವಣೆ ಮತದಾನದ ಸಂದರ್ಭದಲ್ಲಿ ಇಂಡಿಗನ ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡಿದ್ದರು. ಈ ಸಂದರ್ಭದಲ್ಲಿ ಮೆಂದಾರೆ ಗ್ರಾಮದ ಕೆಲವರು ಮತದಾನ ಮಾಡಲು ಹೋದಾಗ, ಇಂಡಿಗನತ್ತ ಗ್ರಾಮಸ್ಥರು ಪ್ರತಿರೋಧ ತೋರಿದ್ದರು. ಈ ವೇಳೆ ಘರ್ಷಣೆ, ಕಲ್ಲು ತೂರಾಟ ನಡೆದು, ಮತಗಟ್ಟೆ ಸಿಬ್ಬಂದಿ ಸೇರಿ ಕೆಲವರಿಗೆ ಗಾಯಗಳಾಗಿತ್ತು. ಮತಯಂತ್ರಗಳನ್ನು ಒಡೆದು ಹಾಕಲಾಗಿತ್ತು. ಮತಗಟ್ಟೆಯನ್ನೂ ಧ್ವಂಸ ಮಾಡಲಾಗಿತ್ತು. ಈ ಸಂಬಂಧ 30 ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ಕಾರಣ, ಇಂದು ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶ ಹೊರಡಿಸಿತ್ತು. ಇಂದಿನ ಮತದಾನಕ್ಕೆ ಇಂಡಿಗನತ್ತ ಗ್ರಾಮಸ್ಥರು ವಿರಳ ಸಂಖ್ಯೆಯಲ್ಲಿ ಬರುತ್ತಿದ್ದಾರೆ.
ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು ಎಎಸ್ಪಿ ಉದೇಶ್, ಸಹಾಯಕ ಚುನಾವಣಾಧಿಕಾರಿ ಮಲ್ಲಿಕಾರ್ಜುನ, ಡಿವೈಎಸ್ಪಿ ಧರ್ಮೇಂದ್ರ, ಪಿಎಸೈಗಳಾದ ಶಶಿಕುಮಾರ್, ಮನೋಜ್ ಕುಮಾರ್, ಜಗದೀಶ್, ಹಾಜರಿದ್ದು, ಗ್ರಾಮದಲ್ಲಿ ಟಾಂಟಾಂ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಗಿದ್ದು ಮತದಾನ ಮಾಡಲು ಜನರಿಗೆ ಧೈರ್ಯ ತುಂಬಲಾಗಿದೆ.
Chamarajanagar
ಯಳಂದೂರು ತಾಪಂ ವತಿಯಿಂದ 15ನೇ ರಾಷ್ಟ್ರೀಯ ಮತದಾನ ದಿನಾಚರಣೆ
ಯಳಂದೂರು ಜನವರಿ 25
ಯಳಂದೂರು ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ 15ನೇ ರಾಷ್ಟ್ರೀಯ
ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿವಿಲ್ ನ್ಯಾಯಾಧೀಶರಾದ ಆರ್ಕಶ್ ಎಂ ರವರು 15ನೇ ರಾಷ್ಟ್ರೀಯ ಮತದಾರರ ದಿನಾಚರಣೆಯ ಶುಭಾಶಯ ತಿಳಿಸಿ ಈಗಿನ ಯುವಕರಿಗೆ ಮತದಾನದ ಅರಿವು ಅಗತ್ಯ 18 ವಯಸ್ಸು ಮೀರಿದವರು ಮಾತ ದಾರರಗೆ ನೋಂದಣಿ ಮಾಡುವುದು ಅಗತ್ಯ, ಎಂದು
ತಿಳಿಸಿದರು,
ಮುಖ್ಯ ಭಾಷಣಕಾರರಾಗಿ ಮಾತನಾಡಿದ ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲರಾದ ನಂಜುಂಡಯ್ಯ ರವರು ಚುನಾವಣೆ ಸಂದರ್ಭದಲ್ಲಿ ನಿಮ್ಮ ಮತ ವನು ಮಾರಿಕೊಳ್ಳಬೇಡಿ , ಯುವಕರು ಹೆಚ್ಚಿನ ಪ್ರಮಾಣದಲ್ಲಿ ಒಂದಾಯಿಸಬೇಕು, ರಾಷ್ಟ್ರೀಯ ಮತದಾನ ದ ಬಗ್ಗೆ ತಿಳಿಸಿದರು,
ಕಾರ್ಯಕ್ರಮದಲ್ಲಿ ತಾಲ್ಲೂಕು ದಂಡಾಧಿಕಾರಿ ಗಳದ ಜಯಪ್ರಕಾಶ್, ತಾಲ್ಲೂಕು ಪಂಚಾಯಿತಿ ಸಾಹಯಕ ನಿರ್ದೇಶಕ ರಾದ ಗುರು ಮಲ್ಲು, ಭೂ ದಾಖಲೆಗಳ ನಿರ್ದೇಶಕ ರಾದ ಉಮೇಶ್, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ವಿಜಯ ಹನೂರು, ಸಾಹಯಕ ಪ್ರಾದ್ಯಾಪಕರದ ಶ್ವೇತ ಕೆ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಅಮೃತೇಷ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಗೇಂದ್ರ, ಶಾಲೆಯ ಶಿಕ್ಷಕರು, ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು
Chamarajanagar
ಗಿರಿಜನರು ಸಮಾಜದ ಮುಖ್ಯವಾಹಿನಿಗೆ ಬಂದು ಮೌಲ್ಯಯುತ ಬದುಕನ್ನು ಕಟ್ಟಿಕೊಳ್ಳಬೇಕು: ಟಿ ಹಿರಲಾಲ್
ಚಾಮರಾಜನಗರ: ಗಿರಿಜನರು ಉತ್ತಮ ಶಿಕ್ಷಣ ಪಡೆದು ಸಮಾಜದ ಮುಖ್ಯವಾಹಿನಿಗೆ ಬಂದು ಮೌಲ್ಯಯುತ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ.ಹಿರಲಾಲ್ ಕರೆ ನೀಡಿದರು.
ಕೆರೆದಿಂಬ ಪೋಡಿನಲ್ಲಿ ಬಿಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ಚಾಮರಾಜನಗರ ವಿಭಾಗದ ವತಿಯಿಂದ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ, ಬೆಂಕಿ ಅರಿವು ಮತ್ತು ಹಸಿರು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ವಿವಿಧ ವಲಯಗಳ ವ್ಯಾಪ್ತಿಯಲ್ಲಿ ಬರುವ ಪೋಡುಗಳ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದ 13 ಗಿರಿಜನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಪಡೆದ ಅಂಕಗಳ ಆಧಾರದ ಮೇಲೆ 10 ಸಾವಿರ ರೂ, 7,000 ಮತ್ತು 5000 ಚೆಕ್ಕನ್ನು ವಿತರಿಸಲಾಯಿತು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕ ಶ್ರೀಪತಿ ಬಿ,ಎಸ್.ಮಾತನಾಡಿ, ಅರಣ್ಯ ಮತ್ತು ಗಿರಿಜನರ ನಡುವೆ ಅವಿನಾಭಾವ ಸಂಬಂಧವಿದ್ದು, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ಸಹಕರಿಸುವಂತೆ ತಿಳಿಸಿದರು.
ಗಿರಿಜನರು ಪೂಜ್ಯನಿಯ ಭಾವನೆಯಿಂದ ಅರಣ್ಯ ಮತ್ತು ವನ್ಯಜೀವಿಯನ್ನು ಗೌರವಿಸುತ್ತಿದ್ದು, ಅರಣ್ಯ ಇಲಾಖೆಯ ಉತ್ತಮ ಸಹಕಾರದಿಂದ ಅರಣ್ಯ ಮತ್ತು ವನ್ಯಜೀವಿಯನ್ನು ಸಂರಕ್ಷಿಸಬೇಕೆಂದು ಹೇಳಿದರು.
ಮಾದೇಗೌಡ ಮಾತನಾಡಿ, ಗಿರಿಜರು ಶಿಕ್ಷಣವನ್ನು ಶ್ರದ್ಧೆಯಿಂದ ಕಲಿತು ವಿವಿಧ ಇಲಾಖೆಗಳಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಬೇಕು. ಗಿರಿಜನರ ಮುಗ್ಧತೆಯನ್ನು ಬಳಸಿಕೊಂಡು ಹಣ ಹಾಗೂ ಇತರ ಆಮಿಷಗಳನ್ನು ಒಡ್ಡಿ ಯಾವುದೇ ಅರಣ್ಯ ಅಪರಾಧಗಳಲ್ಲಿ ಪಾಲ್ಗೊಳ್ಳುವಂತೆ ಯಾರಾದರೂ ಪ್ರೇರೇಪಿಸಿದಲ್ಲಿ ಇಲಾಖೆಯವರಿಗೆ ಮಾಹಿತಿಯನ್ನು ನೀಡುವಂತೆ ತಿಳಿಸಿದರು
ಕಾರ್ಯಕ್ರಮದಲ್ಲಿ ವಲಯ ಅರಣ್ಯ ಅಧಿಕಾರಿಗಳಾದ ವಾಸು.ಬಿ.ಎಸ್ ನಾಗೇಂದ್ರ ನಾಯಕ್, ಪ್ರಮೋದ್, ಗಿರಿಜನ ಮುಖಂಡರಾದ ಬೊಮ್ಮಯ್ಯ, ಕೇತೇಗೌಡ, ಉಪವಲಯ ಅರಣ್ಯ ಅಧಿಕಾರಿ ಭಾನುಪ್ರಕಾಶ್, ಮೂರ್ತಿ, ಅನಂತರಾಮು, ಗಣೇಶ್ ಪ್ರಸಾದ್, ಮುಖ್ಯಪೇದೆ ನಂಜುಂಡ, ರಾಚಪ್ಪ ಕೆರೆದಿಂಬ ಮತ್ತು ಗೊಂಬಗಲ್ಲು ಮುಖಂಡರು ಅರಣ್ಯ ಇಲಾಖೆಯ ವಿವಿಧ ವೃಂದದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.
Chamarajanagar
ಅಂಬಳೆ ಗ್ರಾಮ ಪಂಚಾಯಿತಿಯ ನೂತನ ಕಟ್ಟಡದ ಶಂಕುಸ್ಥಾಪನೆ
ಯಳಂದೂರು: ರಾಜೀವ್ ಗಾಂಧಿ ಪಂಚಾಯತ್ ಸಶಕ್ತೀಕರಣ ಅಭಿಯಾನದಡಿ ಅಂದಾಜು 15 ಲಕ್ಷ ರೂಪಾಯಿ ವೆಚ್ಚದಲ್ಲಿ ಯಳಂದೂರು ತಾಲ್ಲೂಕಿನ ಅಂಬಳೆ ಗ್ರಾಮ ಪಂಚಾಯಿತಿಯ ನೂತನ ಕಟ್ಟಡದ ಶಂಕುಸ್ಥಾಪನೆಗೆ ಶುಕ್ರವಾರ (ಜ.24) ಶಾಸಕ ಎ.ಆರ್ ಕೃಷ್ಣಮೂರ್ತಿ ಭೂಮಿ ಪೂಜೆ ನೆರವೇರಿಸಿದರು
ಜಿಲ್ಲಾ ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್ವಿ. ಚಂದ್ರು‚ ನಿರ್ಮಿತಿ ಕೇಂದ್ರ ಇಂಜಿನಿಯರ್ ನಂದಿಶ್, ಗ್ರಾ.ಪಂ ಅಧ್ಯಕ್ಷ ನಂಜುಂಡಸ್ವಾಮಿ ಉಪಾಧ್ಯಕ್ಷೆ ಮಹದೇವಮ್ಮ ತಾ.ಪಂ ಇಒ ಉಮೇಶ್ ಅಗರ ಲಿಂಗರಾಜ್ ಹಾಗೂ ಪಿಡಿಒ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
-
Mysore17 hours ago
ಹೃದಯಾಘಾತದಿಂದ ಯುವರಾಜ ಕಾಲೇಜಿನ ಪ್ರಾಂಶುಪಾಲ ನಿಧನ
-
Kodagu18 hours ago
ಎ.ಸಿ.ಎಫ್ ಆಗಿ ವಾಟೇರಿರ ಕಾರ್ಯಪ್ಪ ಅಧಿಕಾರ ಸ್ವೀಕಾರ
-
Mysore15 hours ago
ಲೋಕಾಯುಕ್ತ ಸರ್ಕಾರದ ಕೈಗೊಂಬೆ: ಸಿಎಂ ಕ್ಲೀನ್ ಚೀಟ್ಗೆ ಹಳ್ಳಿಹಕ್ಕಿ ಪ್ರತಿಕ್ರಿಯೆ
-
Kodagu16 hours ago
ಕಡಂಗ ಪ್ರೀಮಿಯರ್ ಲೀಗ್ ಕ್ರಿಕೆಟ್ ಬಿಡ್ಡಿಂಗ್ ಪ್ರಕ್ರಿಯೆ
-
Kodagu18 hours ago
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತರಿಗೆ ದಕ್ಕಬೇಕು
-
Kodagu14 hours ago
ಬೆಂಗಳೂರು ಒಕ್ಕಲಿಗ ಸಂಘದ ಸಹಯೋಗದೊಂದಿಗೆ ಪ್ರತಿಭಟನೆ ಸಿದ್ದತೆ
-
Hassan12 hours ago
ಈ ಸಲದ ಗಣರಾಜ್ಯೋತ್ಸವ ಸನ್ಮಾನಕ್ಕೆ ಅಪರೂಪದ ವೈದ್ಯ ಡಾ.ನಿತಿನ್ ಆಯ್ಕೆ
-
Mysore14 hours ago
ಸುತ್ತೂರು ಜಾತ್ರಾ ಮಹೋತ್ಸದಂದು ಹಸೆಮಣೆ ಏರಲಿದ್ದಾರೆ 155 ಜೋಡಿಗಳು