Mysore
ನಂಜನಗೂಡು ಕ್ಷೇತ್ರ ಶಾಸಕರಾದ ದರ್ಶನ್ ಧ್ರುವ ನಾರಾಯಣ್ ಮತದಾನ ಚಲಾಯಿಸಿದರು.
ಚಾಮರಾಜನಗರ ಜಿಲ್ಲೆಯ ಸ್ವಗ್ರಾಮ ಹೆಗ್ಗವಾಡಿ ಗ್ರಾಮದ ಮತಗಟ್ಟೆ ಸಂಖ್ಯೆ 65 ರಲ್ಲಿ ನಂಜನಗೂಡು ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ತನ್ನ ಸಹೋದರ ಧೀರನ್ ಧ್ರುವನಾರಾಯಣ್ ಅವರ ಜೊತೆಗೂಡಿ ಕುಟುಂಬದ ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ತೆರಳಿ ಮತದಾನ ಚಲಾಯಿಸಿದರು.
ಬಳಿಕ ಶಾಸಕರು ಅಭ್ಯರ್ಥಿ ಸುನೀಲ್ ಬೋಸ್ ಜೊತೆಗೂಡಿಕೊಂಡು ನಂಜನಗೂಡು ಕ್ಷೇತ್ರದ ವ್ಯಾಪ್ತಿಯ ಭೂತ್ ಗಳಿಗೆ ಭೇಟಿ ನೀಡಿದರು.
ನಂಜನಗೂಡು ಟೌನ್ ಶ್ರೀರಾಂಪುರ ,ಶಂಕರಪುರ, ಆನಂದಪುರ, ನೀಲಕಂಠನ ನಗರ, ವಾಡ್೯ ಗಳಿಗೆ
ಭೇಟಿ ನೀಡಿ ಮತದಾರರು ಮತವನ್ನು ಹಾಕುತ್ತಿದ್ದಾರ ಎಂದು ಪರಿಶೀಲಿಸಿದರು.
ಶಾಸಕ ದರ್ಶನ್ , ಅಭ್ಯರ್ಥಿ ಸುನೀಲ್ ಬೋಸ್
ವಾರ್ಡ್ಗಳನ್ನು ಭೇಟಿ ನೀಡಿದಾಗ ಸಂದರ್ಭದಲ್ಲಿ ಯುವಕರು, ಪಕ್ಷದ ಮುಖಂಡರುಗಳು ಸೆಲ್ಫಿ ತೆಗೆದುಕೊಳ್ಳುವುದಕ್ಕೆ ಮುಂದಾದರು.
ನಂಜನಗೂಡು ಮಹದೇವಸ್ವಾಮಿ ಪಟೇಲ್.
ಪಿರಿಯಾಪಟ್ಟಣ: ದಂಪತಿಗಳು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಪಟ್ಟಣದ ಗೊಲ್ಲರ ಬೀದಿಯಲ್ಲಿ ನಡೆದಿದೆ.
ಪಟ್ಟಣದ ಬಿ.ಎಂ ರಸ್ತೆಯ ಪ್ರವಾಸಿ ಮಂದಿರ ಬಳಿ ಕ್ಯಾಂಟೀನ್ ವ್ಯಾಪಾರ ನಡೆಸುತ್ತಿದ್ದ ಪ್ರಕಾಶ್ (51) ಹಾಗೂ ಚಿಲ್ಲರೆ ಅಂಗಡಿ ಮತ್ತು ಹಲ್ಲರ್ ಮಿಲ್ ಇಟ್ಟುಕೊಂಡು ಜೀವನ ಮಾಡುತ್ತಿದ್ದ ಪ್ರಕಾಶ್ ಅವರ ಪತ್ನಿ ಯಶೋದ (48) ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ದಂಪತಿಗಳು,
ಗುರುವಾರ ರಾತ್ರಿ ಸಂಬಂಧಿಕರ ಮನೆಯಲ್ಲಿ ಊಟ ಮುಗಿಸಿ ಮನೆಗೆ ತೆರಳಿದ್ದ ದಂಪತಿಗಳು
ಶುಕ್ರವಾರ ಬೆಳಗ್ಗೆ ಮೈಸೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಮಗಳು ತನುಶ್ರೀ ಕರೆ ಮಾಡಿದಾಗ ಕರೆ ಸ್ವೀಕರಿಸಿಲ್ಲ ರಾತ್ರಿವರೆಗೂ ಹಲವಾರು ಬಾರಿ ಕರೆ ಮಾಡಿ ಕರೆ ಸ್ವೀಕರಿಸದ ಕಾರಣ ಸಂಬಂಧಿಕರಿಗೆ ಫೋನ್ ಮೂಲಕ ಮನೆಯ ಬಳಿ ತೆರಳಿ ನೋಡುವಂತೆ ಕೋರಿದಾಗ ಸಂಬಂಧಿಕರು ಮನೆಯ ಬಳಿ ತೆರಳಿ ಕಿಟಕಿ ತೆರೆದು ನೋಡಿದಾಗ ಅನುಮಾನ ರೀತಿಯಲ್ಲಿ ಇಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ, ತಕ್ಷಣ ಪೊಲೀಸರಿಗೆ ಕರೆ ಮಾಡಿ ಪೊಲೀಸರು ಬಾಗಿಲು ಮುರಿದು ಮನೆ ಒಳಗಡೆ ಪ್ರವೇಶಿಸಿ ಶವಗಳನ್ನು ಪಟ್ಟಣದ ಶವಗಾರಕ್ಕೆ ಸಾಗಿಸಿದ್ದಾರೆ.
ಘಟನೆ ಸಂಭಂದ ಅನುಮಾನ ವ್ಯಕ್ತಪಡಿಸಿ ಮೃತ ದಂಪತಿ ಪುತ್ರಿ ತನುಶ್ರೀ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Mysore
ಗ್ರಾ. ಪಂ. ಅಧ್ಯಕ್ಷೆಯ ಪತಿ ಶಿಕ್ಷಕ ನಿಂದ ಪಿ ಡಿ ಒ ಮೇಲೆ ಹಲ್ಲೆ : ದೂರು ದಾಖಲು
ಸಾಲಿಗ್ರಾಮ : ಗ್ರಾಮ ಪಂಚಾಯತಿ ಅಧ್ಯಕ್ಷೆ ಯೊಬ್ಬರ ಪತಿ, ಕರ್ತವ್ಯ ನಿರತ ಪಿ ಡಿ ಒ ಮೇಲೆ ಹಲ್ಲೆ ಮಾಡಿ. ಅವಾಚ್ಯ ಶಬ್ದಗಳಿಂದ ನಿಂದನೆ ಹಾಗೂ ದೌರ್ಜನ್ಯ ಮಾಡಿರುವ ಹಿನ್ನಲೆಯಲ್ಲಿ ಸಾಲಿಗ್ರಾಮ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿತ್ತು .
ಸಾಲಿಗ್ರಾಮ ತಾಲೂಕಿನ ಭೇರ್ಯ ಗ್ರಾಮ ಪಂಚಾಯತಿಯಲ್ಲಿ ನಡೆದಿರುವ ಘಟನೆಯಾಗಿದೆ. ಈ ಘಟನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀರ್ವ ಚರ್ಚೆ ಯಾಗುತ್ತಿದ್ದು, ದೂರು ನೀಡುವಂತೆ ಜನರ ಆಕ್ರೋಶ ವ್ಯಕ್ತಪಡಿಸಿದ್ದರು, ಗುರುವಾರ ಭೇರ್ಯ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಈ ಘಟನೆ ನಡೆದಿದೆ.
ಭೇರ್ಯ ಗ್ರಾಮ ಪಂಚಾಯತಿ ಅಧ್ಯಕ್ಷೆ ಜಯಲಕ್ಷ್ಮಿ ಎಂಬುವರ ಪತಿ ಕೃಷ್ಣೇಗೌಡ, ಇವರು ಶಿಕ್ಷಕರಾಗಿದ್ದು ಈ ರೀತಿಯ ವರ್ತನೆ ಹಾಗೂ ದೌರ್ಜನ್ಯ ವನ್ನು ಸಾಮಾಜಿಕ ಜಾಲತಾಣದಲ್ಲಿ ನೋಡಿರುವ ಸಾರ್ವಜನಿಕರು ಕೃಷ್ಣೇಗೌಡರ ವಿರುದ್ದ ದೂರು ದಾಖಲಿಸುವಂತೆ ಪಿ ಡಿ ಒ ಮಂಜುನಾಥ್ ಅವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ತಂಡ ಕೊನೆಗೂ ಎಚ್ಛೆದ್ದುಕೊಂಡು ಸಾಲಿಗ್ರಾಮ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
ಸಾಲಿಗ್ರಾಮ ಮತ್ತು ಕೆ ಆರ್ ನಗರ ತಾಲೂಕಿನ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಂಘ ಮತ್ತು ಪಿ ಡಿ ಒ ಗಳಾದ ಚಿದಾನಂದ್,ಯೋಗಾನಂದ, ರಾಜೇಶ್,ಮೋಹನ್, ತಿಲಕ್ ರಾಜ್,ಚಂದ್ರಶೇಖರ, ಪ್ರತಾಪ್ ಅವರುಗಳು ಈ ಘಟನೆಯನ್ನು ಖಂಡಿಸಿದೆ. ಹಲ್ಲೆ ಹಾಗೂ ನಿಂದನೆ ಮಾಡಿರುವ ಪಂಚಾಯತಿ ಅಧ್ಯಕ್ಷೆಯ ಪತಿ ಶಿಕ್ಷಕ ಕೃಷ್ಣೇಗೌಡ ನನ್ನು ಕೂಡಲೇ ಬಂದಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿ ಅವರಲ್ಲಿ ಮನವಿ ಮಾಡಿದ್ದಾರೆ.
Mysore
ಪಿರಿಯಾಪಟ್ಟಣ: ತಾಲೂಕಿನ ಕಿರನಲ್ಲಿ ಗೇಟ್ ನಿವಾಸಿ ಮಧುಸೂದನ್ ನಾಪತ್ತೆಯಾಗಿದ್ದಾರೆ.
ಪಿರಿಯಾಪಟ್ಟಣ: ತಾಲೂಕಿನ ಕಿರನಲ್ಲಿ ಗೇಟ್ ನಿವಾಸಿ ಮಧುಸೂದನ್ ನಾಪತ್ತೆಯಾಗಿದ್ದಾರೆ.
ಏಪ್ರಿಲ್ 4ನೇ ತಾರೀಕಿನಂದು ಬೆಂಗಳೂರಿನಲ್ಲಿನ ಸಹೋದರನ ಮನೆಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಹೋದವರು ಇದುವರೆಗೂ ಪತ್ತೆಯಾಗಿಲ್ಲ ಸಂಬಂಧಿಕರು ಸ್ನೇಹಿತರ ಬಳಿ ವಿಚಾರಿಸಿದರೂ ಯಾವುದೇ ಮಾಹಿತಿ ದೊರೆಯದ ಕಾರಣ ಆತನ ತಾಯಿ ಲಕ್ಷ್ಮಮ್ಮ ಮಗ ಕಾಣೆಯಾಗಿರುವ ಬಗ್ಗೆ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಕಾಣೆಯಾದ ವ್ಯಕ್ತಿ ಚಹರೆ: ಅಂದಾಜು 30 ವರ್ಷ, ಕೋಲು ಮುಖ, ಸಾಧಾರಣ ಮೈಕಟ್ಟು, ಬೆಳಗಿನ ಮೈಬಣ್ಣ, ಕನ್ನಡ ಉರ್ದು ಮಲಯಾಳಂ ಭಾಷೆ ಮಾತನಾಡುತ್ತಾರೆ, ಈತನ ಬಗ್ಗೆ ಸುಳಿವು ದೊರೆತವರು ಪಿರಿಯಾಪಟ್ಟಣ ಪೊಲೀಸ್ ಠಾಣೆ ದೂರವಾಣಿ 08223-273100 ಅಥವಾ ಹತ್ತಿರದ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಇನ್ಸ್ಪೆಕ್ಟರ್ ರಾಘವೇಂದ್ರ ಕೋರಿದ್ದಾರೆ
.
-
Mysore3 weeks ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State3 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
Hassan3 weeks ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
State4 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health4 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Uncategorized5 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State3 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.
-
Education3 months ago
ಎಸ್ಎಸ್ಎಲ್ಸಿ. PUC ವಿದ್ಯಾರ್ಥಿಗಳ ʼMarks Card’ ನಲ್ಲಿ ಮಹತ್ವದ ಬದಲಾವಣೆ