Cinema
ಮನೆಯ ಅಂಗಳದಲ್ಲಿ ಗಾಂಜಾ ಬೆಳೆದ ಆರೋಪಿ ಬಂಧನ

ವಿರಾಜಪೇಟೆ : ಗಾಂಜಾ ವ್ಯಸನಿಯಾಗಿ, ಮನೆಯ ಅಂಗಳದಲ್ಲಿ ಗಾಂಜ ಗಿಡಗಳನ್ನು ಬೆಳೆದು ಪೊಲೀಸರ ಅತಿಥಿಯಾಗಿರುವ ಘಟನೆ ವಿರಾಜಪೇಟೆ ಗ್ರಾಮಾಂತರ ಪ್ರದೇಶವಾದ ಕಂಡAಗಾಲ ಗ್ರಾಮದಲ್ಲಿ ನಡೆದಿದೆ.
ವಿರಾಜಪೇಟೆ ತಾಲೂಕು ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿ.ಬಾಡಗ ಗ್ರಾಮ ಕಂಡAಗಾಲ ನಿವಾಸಿ ನಂಬುಡುಮಾಡ ವಿಜಯ್ ಭಿಮಯ್ಯ ಅಲಿಯಾಸ್ (ಚಿಂಡ) (39) ಮನೆಯ ಅಂಗಳದಲ್ಲಿ ಗಾಂಜಾ ಬೆಳೆದು ಬಂಧಿತನಾದ ವ್ಯಕ್ತಿ.
ವಿಜಯ್ ಮನೆಯ ಅಂಗಳದಲ್ಲಿ ಹೂವಿನ ಗಿಡದ ಕುಂಡಗಳಲ್ಲಿ ಹೂಗಿಡಗಳ ಮಧ್ಯೆ ಯಾರಿಗೂ ಸಂಶಯ ಬಾರದಂತೆ ಗಾಂಜಾ ಗಿಡಗಳನ್ನು ಬೆಳೆಸಿದ್ದಾನೆ. ಇತನ ಮೇಲೆ ಪೊಲೀಸರಿಗೆ ಮೊದಲೇ ಗುಮಾನಿ ಇದ್ದಿತ್ತು. ಮಾಹಿತಿದಾರರು ನೀಡಿರುವ ಮಾಹಿತಿ ಅನ್ವಯ ವಿರಾಜಪೇಟೆ ಗ್ರಾಮಾಂತರ ಪೊಲೀಸು ಠಾಣೆಯ ಸಿಬ್ಬಂದಿಗಳು ಭಾನುವಾರ ಬೆಳಿಗ್ಗೆ ಆರೋಪಿಯು ವಾಸವಾಗಿದ್ದ ಕಂಡAಗಾಲ ಗ್ರಾಮದ ಮನೆಯ ಮೇಲೆ ಧಾಳಿ ನಡೆಸಿದ್ದಾರೆ. ಧಾಳಿಯ ವೇಳೆಯಲ್ಲಿ ಹೂವಿನ ಕುಂಡದಲ್ಲಿ ಬೆಳೆಯಲಾಗಿದ್ದ ಒಟ್ಟು ಆರು ಗಾಂಜಾ ಗಿಡಗಳು ಪತ್ತೆಯಾಗಿದೆ. ಗಾಂಜಾ ಗಿಡಗಳು ಹುಲುಸಾಗಿ ಬೆಳೆದಿದ್ದು ಸುಮಾರು 5 ಅಡಿ ಎತ್ತರವಾಗಿದೆ. ಹಸಿ ಗಾಂಜಾ ಗಿಡಗಳು 01 ಕೆ.ಜಿ. 600 ಗ್ರಾಂ ತೂಕ ಹೊಂದಿದೆ. ಗಾಂಜಾ ಗಿಡಗಳನ್ನು ವಶಕ್ಕೆ ಪಡೆದುಕೊಂಡು ಅರೋಪಿ ವಿಜಯ್ ಮೇಲೆ ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ ಅನ್ವಯ ಎನ್.ಡಿ.ಪಿ.ಎಸ್ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.
ವಿರಾಜಪೇಟೆ ಉಪ ವಿಭಾಗ ಡಿವೈಎಸ್ಪಿ ಮೋಹನ್ ಕುಮಾರ್ ಮತ್ತು ವಿರಾಜಪೇಟೆ ವೃತ್ತ ನಿರೀಕ್ಷಕರಾದ ಬಿ.ಎಸ್.ಶಿವರುದ್ರ ಅವರುಗಳ ಮಾರ್ಗದರ್ಶನದಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸು ಠಾಣೆಯ ಠಾಣಾಧೀಕಾರಿಗಳಾದ ಸಿ. ಮಂಜುನಾಥ್ ಮತ್ತು ಸಿಬ್ಬಂದಿಗಳಾದ ಗಿರೀಶ್, ನಂಜುAಡ ಹಾಗೂ ಬೋಪಣ್ಣ ಅವರುಗಳು ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.
Chikmagalur
ಕಳೆದು ಹೋಗಿದ್ದ ಮೊಬೈಲ್ ಪತ್ತೆಹಚ್ಚಿ ಹಿಂತಿರುಗಿಸುತ್ತಿರುವ ಸೆನ್ ಠಾಣೆಯ ಪೊಲೀಸರ ಕಾರ್ಯ ಶ್ಲಾಘನೀಯ : ಎಸ್ಪಿ ವಿಕ್ರಮ ಅಮಟೆ

ಚಿಕ್ಕಮಗಳೂರು: ಕದ್ದ ಮತ್ತು ಕಳೆದುಹೋದ ಮೊಬೈಲ್ ಫೋನ್ ಗಳನ್ನು ಸಿಇಐಆರ್ ವ್ಯವಸ್ಥೆಯ ಮೂಲಕ ಪತ್ತೆಹಚ್ಚಿ, ಮೊಬೈಲ್ಗಳನ್ನು ಮಾಲೀಕರಿಗೆ ಹಿಂತಿರುಗಿಸುವಲ್ಲಿ ಪೊಲೀಸ್ ಇಲಾಖೆಯ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ವಿಕ್ರಮ ಅಮಟೆ ತಿಳಿಸಿದರು.
ಇಂದು ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ CEIR ಪೋರ್ಟಲ್ ಗೆ ಸಂಬಂಧಿಸಿದಂತೆ ವಶಪಡಿಸಿಕೊಂಡ ಮೊಬೈಲ್ ಫೋನ್ ಗಳನ್ನು ವಾರಸುದಾರರಿಗೆ ಹಿಂದಿರುಗಿಸುವ ಸಂಬಂಧ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಫೋನ್ಗಳನ್ನು ಪತ್ತೆ ಹಚ್ಚುವಲ್ಲಿ ಕೇಂದ್ರ ಸಲಕರಣೆ ಗುರುತಿಸುವಿಕೆ ನೋಂದಣಿ (Central Equipment Identity Register- CEIR) ವ್ಯವಸ್ಥೆ ಸಹಕಾರಿಯಾಗಿದ್ದು, ಈ ಸೇವೆಯನ್ನು ಬಳಸಿಕೊಂಡು ಪೊಲೀಸರು ಇಂತದ್ದೊಂದು ಯಶಸ್ವಿ ಕಾರ್ಯಚರಣೆ ಮಾಡಿದ್ದಾರೆ. ಅದಲ್ಲದೇ ಈ ತಂತ್ರಜ್ಞಾನ ಫೋನ್ ಕಳ್ಳರಿಗೆ ಒಂದು ಎಚ್ಚರಿಕೆಯ ಗಂಟೆಯಾಗಿದೆ ಎಂದು ಹೇಳಿದರು.
ಈ ಪೋರ್ಟಲ್ ಮೂಲಕ ಕಳೆದು ಹೋದ 200 ಮೊಬೈಲ್ ಗಳನ್ನು ಪತ್ತೆ ಹಚ್ಚಿದ ನಮ್ಮ ಎಲ್ಲಾ ಠಾಣಾಧಿಕಾರಿಗಳು, ಅದರಲ್ಲೂ ಮುಖ್ಯವಾಗಿ CEIR ಠಾಣೆಯ ಪೊಲೀಸರು ಮೊಬೈಲ್ ಟ್ರೇಸ್ ಮಾಡುವುದಲ್ಲಿ ಯಶಸ್ವಿಯಾಗಿದ್ದಾರೆ. 2022 ರ ನಂತರ CEIR ಪೋರ್ಟಲ್ ನಲ್ಲಿ ಕಳೆದುಹೋದ ಮೊಬೈಲ್ ನ ದಾಖಲೆಗಳನ್ನು ಹಾಕಿದರೆ ಆ ದಾಖಲೆಗಳ ಅನುಸಾರ ಮೊಬೈಲ್ ನನ್ನು ಹುಡುಕಲು ಸಹಾಯ ಆಗುತ್ತದೆ. ಈ ಮೂಲಕ ಕಳೆದುಹೋದ ಮೊಬೈಲ್ ನನ್ನ ಟ್ರೇಸ್ ಮಾಡಬಹುದು ಅಲ್ಲದೆ ಅದು ಯಾವುದೇ ಕ್ರಿಮಿನಲ್ ಪ್ರಕರಣಗಳಿಗೆ ಬಳಸಿದಂತೆ ಅದನ್ನು ಬ್ಲಾಕ್ ಮಾಡಬಹುದು ಎಂದು ತಿಳಿಸಿದರು.
ಹಿಂದೆ ಮೊಬೈಲ್ ಕಳೆದುಕೊಂಡವರಿಗೆ ಮೊಬೈಲ್ ಫೋನ್ ಮರಳಿ ಸಿಗುವುದೇ ಕಷ್ಟ ಆಗಿತ್ತು ಆದರೆ ಈ ವಿಶೇಷವಾದ ಪೋರ್ಟಲ್ ನಿಂದ ಪೊಲೀಸರು ಮೊಬೈಲ್ ಗಳನ್ನ ಟ್ರೇಸ್ ಮಾಡಿ ವಾರಸುದಾರರಿಗೆ ಹಿಂತಿರುಗಿಸುತ್ತಿದ್ದಾರೆ. ಒಂದು ವೇಳೆ ಯಾವುದಾದರೂ ಮೊಬೈಲ್ ಕಳ್ಳತನವಾದರೆ ಅಥವಾ ಕಳೆದು ಹೋದರೆ ಅದರ ವಾರಸುದಾರರು ತಕ್ಷಣ CEIR ಪೋರ್ಟಲ್ ನಲ್ಲಿ ಮೊಬೈಲ್ ಮಾಹಿತಿಯನ್ನು ದಾಖಲಿಸಬೇಕು. ಅವರಿಗೆ ಅದು ಸಾಧ್ಯವಾಗದಿದ್ದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಬಂದು ದೂರನ್ನು ನೀಡಬೇಕು. ಅದನ್ನು ಹುಡುಕಿ ಕೊಡುವುದರ ಜೊತೆಗೆ ಅದು ಯಾವುದೇ ಅಪರಾಧ ಕೃತ್ಯಗಳಿಗೆ ಬಳಸಿಕೊಳ್ಳದಂತೆ ನೋಡಿಕೊಳ್ಳುವುದು ನಮ್ಮ ಪೊಲೀಸ್ ಇಲಾಖೆಯ ಜವಾಬ್ದಾರಿ ಎಂದು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದರು.
ಈ ಕಾರ್ಯಾಚರಣೆಯಲ್ಲಿ ಪಿಐ ಗವಿರಾಜ್, ಪಿಎಸ್ ಐ ಗಳಾದ ರಘುನಾಥ್, ವಿಶ್ವನಾಥ್, ಸಿಬ್ಬಂದಿಗಳಾದ ಅನ್ವರ್, ಹರಿಪ್ರಸಾದ್, ಹರೀಶ್, ಮಹೇಂದ್ರ, ರಮೇಶ್, ಶಿವು, ಧರ್ಮರಾಜ್, ಶೀಲಾ, ಮಾನಸ, ಸವಿತ ಪಾಲ್ಗೊಂಡಿದ್ದರು.
Chikmagalur
ಅಂಗಡಿ ಕಳ್ಳತನ ಮಾಡಿದ್ದ ಆರೋಪಿ ಸೆರೆ

ಬಣಕಲ್ : ಕಳೆದ ಕೆಲವು ತಿಂಗಳುಗಳ ಹಿಂದೆ ಬಣಕಲ್ ಪಟ್ಟಣದ ಮೊಬೈಲ್ ಅಂಗಡಿಗಳಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಮಂಗಳೂರಿನಲ್ಲಿ ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬಣಕಲ್ ಪೊಲೀಸ್ ಠಾಣೆಯ ಪಿಎಸ್ಐ ಜಂಬೂರಾಜ್ ಮಹಾಜನ್, ರನ್ನಗೌಡ ಪಾಟೀಲ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಬಣಕಲ್ನ ಮೊಬೈಲ್ ಹಾಗೂ ಇತರ ಅಂಗಡಿಗಳಿಗೆ ನುಗ್ಗಿ ಕಳ್ಳತನ ಮಾಡಿ, ಕಳ್ಳರು ಪರಾರಿಯಾಗಿದ್ದರು. ಆದರೆ, ಕಳ್ಳರ ಜಾಡು ಹಿಡಿದು ಕಾರ್ಯಾಚರಣೆಗಿಳಿದ ಪೊಲೀಸರು ದಾವಣಗೆರೆ ಮೂಲದ ಆರೋಪಿ ಹುಸೇನ್ ಸಾಬ್ ಎಂಬ ಆರೋಪಿಯನ್ನು ಮಂಗಳೂರಿನಲ್ಲಿ ಬಂಧಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಬಣಕಲ್ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಜಗದೀಶ್, ಮೆಹಬೂಬ್, ದಿಲೀಪ್, ಕಿರಣ್ ಪಾಲ್ಗೊಂಡಿದ್ದರು.
Cinema
ಅಭಿಷೇಕ್ ಅಂಬರೀಶ್ರಿoದ ಕಾವೇರಿಮಾತೆಗೆ ವಿಶೇಷ ಪೂಜೆ

ಮಡಿಕೇರಿ : ಸ್ಯಾಂಡಲ್ ವುಡ್ ನಟ ಅಭಿಷೇಕ್ ಅಂಬರೀಷ್ ತಮ್ಮ ಪತ್ನಿ ಅವಿವಾ ಜೊತೆಕಾವೇರಿ ಉಗಮ ಸ್ಥಾನ ತಲಕಾವೇರಿಗೆ ಭೇಟಿ ನೀಡಿ ಕಾವೇರಿಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು. ಪೂಜೆ ವೇಳೆ ಕಾವೇರಿ ನದಿ ಪಾತ್ರದಲ್ಲಿ ಮಳೆಯಾಗಿ ಕಾವೇರಿ ವಿವಾದ ಬಗೆಹರಿಯಲೆಂದು ಪ್ರಾರ್ಥಿಸಿದ್ದಾರೆ. ಮಳೆ ಬರಲಿ ಜೊತೆಗೆ ಕಾವೇರಿ ವಿವಾದ ಬಗೆಹರಿಯಲೆಂದು ಪ್ರಾರ್ಥನೆ ಸಲ್ಲಿಸಿದ್ದಾರೆ.
-
Hassan1 month ago
ಮಲಗಿದಲ್ಲಿಯೇ ವ್ಯಕ್ತಿ ಸಾವು
-
Mysore1 month ago
KSRTC BUS – ಚಲಿಸುವಾಗ ನಿಯಂತ್ರಣ ತಪ್ಪಿ ಅಪಘಾತ
-
Crime2 weeks ago
ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
Hassan2 months ago
ಹಾಸನ-ಅರ್ಧ ಗಂಟೆಯಲ್ಲಿ 1 ಲೀಟರ್ ಮದ್ಯ ಕುಡಿಯುವ ಚಾಲೆಂಜ್- ಓರ್ವ ಸಾವು
-
Hassan6 days ago
ಜಿಲ್ಲಾಧಿಕಾರಿ ಕಛೇರಿ ಎಸ್ಡಿಎ ಆತ್ಮಹತ್ಯೆ
-
Mysore1 month ago
ಮಾಂಗಲ್ಯ ಸರ ಅಪಹರಣ, ಪೊಲೀಸ್ ವತಿಯಿಂದ ತಪಾಸಣೆ
-
Crime1 month ago
ಕ್ಷುಲ್ಲಕ ಕಾರಣಕ್ಕೆ ಪೆಟ್ರೋಲ್ ಬಂಕ್ಗೆ ನುಗ್ಗಿ ಯುವಕನ ಮಚ್ಚಿನಿಂದ ಹಲ್ಲೆ
-
State1 month ago
ರೇಷನ್ ಕಾರ್ಡ್ ತಿದ್ದುಪಡಿಗೆ ಅವಧಿ ವಿಸ್ತರಸಿದ ಸರಕಾರ