Connect with us

Hassan

ದುರುದ್ದೇಶದಿಂದ ವ್ಯಕ್ತಿ ಹತ್ಯೆ, ಓರ್ವ ಆರೋಪಿಯ ಬಂಧನ ಎಸ್ಪಿ ಸುಜೀತಾ

Published

on

ಹಾಸನ: ಬಡಾವಣೆ ಠಾಣೆಯ ಎಎಸ್‌ಐ, ಪರಮೇಶ್ ರವರು ಸಿಬ್ಬಂದಿಗಳೊಂದಿಗೆ ಗಸ್ತಿನಲ್ಲಿದ್ದಾಗ ನಗರದ ಬುಸ್ತೇನಹಳ್ಳಿ ರೈಲ್ವೇ ಟ್ರ್ಯಾಕ್ ಹಾಗೂ ಬಿಜಿಎಸ್ ಲೇಔಟ್ ನಡುವಿನ ಸ್ಥಳದಲ್ಲಿ ಜಯಣ್ಣ ಎನ್ನುವ ಮೃತದೇಹ ದೊರಕಿದ್ದು, ವರದಿ ಆಧಾರದ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ಆರೋಪಿ ಅಣ್ಣಯ್ಯ ಎಂಬುವನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತಾ ತಿಳಿಸಿದರು.

ಎಸ್ಪಿ ಕಛೇರಿ ಸಭಾಂಗಣದಲ್ಲಿ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಫೆಬ್ರವರಿ ೨ ರಂದು ಬೆಳಗಿನ ಸಮಯದಲ್ಲಿ ಹಾಸನ ಬಡಾವಣೆ ಠಾಣೆಯ ಪರಮೇಶ, ಎಎಸ್‌ಐ, ರವರು ಸಿಬ್ಬಂದಿಗಳೊಂದಿಗೆ ರೌಡ್‌ನಲ್ಲಿದ್ದಾಗ ಹಾಸನ ನಗರದ ಬುಸ್ತೇನಹಳ್ಳಿ ರೈಲ್ವೇ ಟ್ರ್ಯಾಕ್ ಹಾಗೂ ಬಿಜಿಎಸ್ ಲೇಔಟ್ ನಡುವಿನ ಸ್ಥಳದಲ್ಲಿ ಒಂದು ಮೃತದೇಹ ಇರುವುದಾಗಿ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ ಹೋಗಿ ನೋಡಲಾಗಿ ಸುಮಾರು ೨೫-೩೫ ವಯಸ್ಸಿನ ಗಂಡಸಿನ ಮೃತದೇಹವಿದ್ದು, ಯಾರೋ ದುಷ್ಕರ್ಮಿಗಳು ಯಾವುದೋ ದುರುದ್ದೇಶದಿಂದ ಒಂದು ದಪ್ಪ ಕಲ್ಲಿನಿಂದ ತಲೆ ಮೇಲೆ ಎತ್ತಿಹಾಕಿ ಕೊಲೆ ಮಾಡಿದ್ದು, ನೀಡಿದ ವರದಿಯನ್ನು ಸ್ವಿಕರಿಸಿ ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಯಿತು. ಮೃತನ ವಾರಸುದಾರರ ಪತ್ತೆಗಾಗಿ ಇ-ಮೇಲ್ ಮುಖಾಂತರ ಮಾಹಿತಿಯನ್ನು ಎಲ್ಲಾ ಪೊಲೀಸ್ ಠಾಣೆಗೆ ಕಳುಹಿಸಲಾಯಿತು ಎಂದರು. ಮಾರನೆ ದಿವಸದಂದು ಮೃತನ ತಾಯಿ ನನ್ನೀ ಅವರು ಹೇಳುವಂತೆ ಜನವರಿ ೩೧ ರಂದು ತನ್ನ ಮಗ ನ್ಯಾಯಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವನು ವಾಪಸ್ ಬಂದಿರುವುದಿಲ್ಲ. ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಗೆ ಹೋಗಿ ವಿಚಾರ ಮಾಡಿದಾಗ ಠಾಣಾಧಿಕಾರಿಯವರು ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಒಂದು ಮೃತದೇಹ ದೊರೆತಿರುವುದಾಗಿ ನೀಡಿದ ಮಾಹಿತಿಯನ್ನು ಪಡೆದು ಹಾಸನ ಬಡಾವಣೆ ಪೊಲೀಸ್ ಠಾಣೆಗೆ ಹಾಜರಾಗಿ ಮೃತದೇಹವನ್ನು ಗುರುತಿಸಿ ನೀಡಿದ ಹೇಳಿಕೆಯನ್ನು ಪಡೆಯಲಾಯಿತು ಎಂದು ಹೇಳಿದರು. ಮೃತರ ತಾಯಿ ತನ್ನ ಮೊಮ್ಮಗಳಾದ ಶಿಲ್ಪಳು ಅಪ್ರಾಪ್ತಯಾಗಿದ್ದಗ ಆರೋಪಿ ಅಣ್ಣಯ್ಯ ಅವಳನ್ನು ಅಪಹರಿಸಿಕೊಂಡು ಹೋಗಿದ್ದರಿಂದ ಆತನ ಮೇಲೆ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪೋಕೋ ಆಕ್ಟ್ ಮತ್ತು ಚೈಲ್ಡ್ ಮ್ಯಾರೇಜ್ ಆಕ್ಟ್ ರೀತ್ಯಾ ಕೇಸು ದಾಖಲಿಸಿ ಜೈಲಿಗೆ ಕಳುಹಿಸಿದ್ದರು.

ನನ್ನ ಮಗ ಕೇಸಿನಲ್ಲಿ ಸಾಕ್ಷಿ ನುಡಿಯಲು ಕೋರ್ಟಿಗೆ ಹೋಗುತ್ತಿದ್ದರಿಂದ ಕೋರ್ಟಿನಲ್ಲಿ ಶಿಕ್ಷೆಯಾಗಬಹುದೆಂದು ಮಗನಿಗೆ ಮದ್ಯಪಾನ ಮಾಡಿಸಿ ರಾಜಿ ಮಾಡಿಕೊಳ್ಳೋಣವೆಂದು ಆಗಾಗ ಕೇಳುತ್ತಿದ್ದರು. ನನ್ನ ಮಗ ಒಪ್ಪದಿದ್ದಾಗ ಹಾಸನದ ನ್ಯಾಯಾಲಯಕ್ಕೆ ಬಂದ ಸಮಯದಲ್ಲಿ ಕೊಲೆ ಮಾಡಿರುವ ಬಗ್ಗೆ ಆತನ ಮೇಲೆ ಅನುಮಾನ ಇರುತ್ತದೆಂದು ನೀಡಿದ ಹೇಳಿಕೆ ಮೇರೆಗೆ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಮಾಹಿತಿ ನೀಡಿದರು. ಮೃತಗೊಂಡವರು ಅರಸೀಕೆರೆ ತಾಲೂಕಿನ ತೂಬಿನಕೆರೆ ಭೋವಿ ಕಾಲೋನಿಯ ಕೂಲಿ ಕೆಲಸ ಮಾಡುವ ಜಯಣ್ಣ ೩೪ ವರ್ಷ ಎಂದು ತಿಳಿದು ಬಂದಿದೆ. ಇನ್ನು ಕೊಲೆಯ ಆರೋಪಿ ಅರಸೀಕೆರೆ ತಾಲೂಕಿನ ಕಾಳೇನಹಳ್ಳಿ ಹಟ್ಟಿ ಗ್ರಾಮದ ಅಣ್ಣಯ್ಯ ೨೪ ವರ್ಷ ಇತನ್ನು ದಸ್ತಗಿರಿ ಮಾಡಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದರು.

Continue Reading
Click to comment

Leave a Reply

Your email address will not be published. Required fields are marked *

Hassan

MLA ಸಿಮೆಂಟ್ ಮಂಜು ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಾಮೆಂಟ್‌: ಕಾನೂನು ಕ್ರಮಕ್ಕೆ ಆಗ್ರಹ

Published

on

ಸಕಲೇಶಪುರ: ಆಲೂರು, ಕಟ್ಟಾಯ -ಸಕಲೇಶಪುರ,ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಅವರು ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಾಮೆಂಟ್‌ ಮಾಡಿರುವ ವಿರುದ್ಧ ಕಾನೂನು ಕ್ರಮಕ್ಕೆ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಹಾಸನ ಜಿಲ್ಲಾಡಳಿತದ ವತಿಯಿಂದ ಶನಿವಾರದಂದು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ  ಸಿಎಂ ಸಿದ್ದರಾಮಯ್ಯ, ಡಿಸಿಎಂ  ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಸರ್ಕಾರದ ಸಚಿವರು ಶಾಸಕರು ಅಧಿಕಾರಿಗಳು ಆಗಮಿಸಿದ್ದರು.

ಈ ಕಾರ್ಯಕ್ರಮವನ್ನು ಉದ್ದೇಶಿಸಿ ಶಾಸಕ ಸಿಮೆಂಟ್ ಮಂಜು ಕಾರ್ಯಕ್ರಮದ ವೇದಿಕೆಯಲ್ಲಿ ಭಾಷಣ ಮಾಡಿದ್ದರು. ಈ ಭಾಷಣದ ತುಣುಕನ್ನು Hassan News ಹಾಸನ್ ನ್ಯೂಸ್ ಫೇಸ್ಬುಕ್ ಪೇಜ್ ನಲ್ಲಿ ಬಿತ್ತರಿಸಲಾಗಿತ್ತು. ಸದರಿ ಪೇಜ್ ನಲ್ಲಿ vasanth kumar ಎಂಬ ಹೆಸರಿನ ಫೇಸ್ ಬುಕ್ ಖಾತೆಯುಳ್ಳ ವ್ಯಕ್ತಿಯು  ಶಾಸಕರ ವಿರುದ್ಧ “ಸಿಮೆಂಟ್ ಮಂಜಣ್ಣ ಹುಟ್ಟು ಕಳ್ಳನ್ ಮಗ” ಎಂದು ಕಾಮೆಂಟ್ ಮಾಡಿದ್ದು ಈ ರೀತಿಯ ಕಾಮೆಂಟ್ ನಿಂದ ಶಾಸಕರ ಘನತೆಗೆ ಧಕ್ಕೆ ಯಾವುದರ ಜೊತೆಗೆ ಕ್ಷೇತ್ರದ ಜನತೆಗೆ ಹಾಗೂ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಿಗೆ ನೋವುಂಟು ಮಾಡಿದ್ದು ಕಾಮೆಂಟ್ ಮಾಡಿದ ವ್ಯಕ್ತಿಯನ್ನು ಪತ್ತೆ ಮಾಡಿ ಬಂಧಿಸಿ ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಗರ ಠಾಣೆಗೆ ಬಾಳ್ಳುಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಂ. ಎಸ್. ಶಿವಕುಮಾರ್ ದೂರು ನೀಡಿದ್ದಾರೆ.

ಈ ಸಂದರ್ಭದಲ್ಲಿ ಬೆಳಗೋಡು ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರದೀಪ್, ಮುಖಂಡರಾದ ನವೀನ್ ಶೆಟ್ಟಿ. ಕಿಟ್ಟಿ ಪುಟ್ಟರಾಜು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Continue Reading

Hassan

ದೆಹಲಿ ನೋಟಿಸ್‌, ಕಾರ್ಟಿಯರ್ ವಾಚ್‌ ವಿವಾದದ ಬಗ್ಗೆ ಆತ್ಮವಿಶ್ವಾಸದ ನಿಲುವು ಘೋಷಿಸಿದ ಡಿಸಿಎಂ ಡಿಕೆಶಿ

Published

on

ಹಾಸನ: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ ಪ್ರಕರಣದಲ್ಲಿ ದೆಹಲಿ ಪೊಲೀಸರು ಪ್ರಕರಣ ದಾಖಲಿಸುವ ಅಗತ್ಯವಿರಲಿಲ್ಲ. ನಮಗೆ ಕಿರುಕುಳ ನೀಡಲು ಈ ಸಮನ್ಸ್ ನೀಡಲಾಗಿದೆ. ಇದು ಸರಿಯಲ್ಲ, ನಾನು ಖಂಡಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಹಾಸನದಲ್ಲಿ ಇಂದು ಈ ಕುರಿತು ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದ ಅವರು, ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಥಿಕ ಅಪರಾಧಗಳ ವಿಭಾಗದ ದೆಹಲಿ ಪೊಲೀಸರು ಸಮನ್ಸ್ ನೀಡಿರುವ ಬಗ್ಗೆ ಕೇಳಿದಾಗ, “ಇದು ನಮಗೆ ಆಘಾತ ತಂದಿದೆ. ನನಗೆ ಹಾಗೂ ಸಹೋದರ ಸುರೇಶ್ ಅವರಿಗೆ ನೋಟೀಸ್ ನೀಡುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಈ ಹಿಂದೆ ಇಡಿ ನಮಗೆ ಸಮನ್ಸ್ ನೀಡಿತ್ತು ಎಂದರು.

ನಾವು ಮೊದಲಿನಿಂದಲೂ ಇಡಿ ತನಿಖೆಗೆ ಸಹಕಾರ ನೀಡಿ ಎಲ್ಲಾ ದಾಖಲೆಗಳನ್ನು ಒದಗಿಸಿದ್ದೇವೆ. ಇದು ನಮ್ಮ ಪಕ್ಷದ ಸಂಸ್ಥೆ, ಕಾಂಗ್ರೆಸಿಗರಾಗಿ ಆ ಸಂಸ್ಥೆಗೆ ಬೆಂಬಲ ನೀಡಲು ದೇಣಿಗೆ ನೀಡುವುದರಲ್ಲಿ ತಪ್ಪಿಲ್ಲ. ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಈ ಸಂಸ್ಥೆ ಕಷ್ಟಕಾಲದಲ್ಲಿದ್ದಾಗ ನಮ್ಮ ಟ್ರಸ್ಟ್ ಗಳಿಂದ ನೆರವು ನೀಡಿದ್ದು, ನನ್ನಂತೆ ಅನೇಕರು ದೇಣಿಗೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಇಡಿ ಚಾರ್ಜ್ ಶೀಟ್ ಹಾಕಿದ್ದು, ಅದರಲ್ಲಿ ನಮ್ಮ ಹೆಸರನ್ನು ಸೇರಿಸಿರಲಿಲ್ಲ. ನಮ್ಮ ಬಳಿ ಹೇಳಿಕೆ ಪಡೆದು, ಬಿಟ್ಟಿದ್ದರು. ಹೀಗಿರುವಾಗ ದೆಹಲಿ ಪೊಲೀಸರು ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ. ನಮ್ಮ ಎಲ್ಲಾ ವ್ಯವಹಾರ ಪಾರದರ್ಶಕವಾಗಿದೆ. ನಾವು ನ್ಯಾಯಲಯದಲ್ಲಿ ಹೋರಾಟ ಮುಂದುವರೆಸುತ್ತೇವೆ. ನಾವು ಸರಿಯಾಗಿ ತೆರಿಗೆ ಕಟ್ಟಿದ್ದು, ನಮ್ಮ ಹಣವನ್ನು ನಾವು ಇಷ್ಟಪಡುವ ಯಾರಿಗೆ ಬೇಕಾದರೂ ನೀಡಬಹುದು” ಎಂದು ಹೇಳಿದರು.

ನನ್ನ ವಿರುದ್ಧ ಪಿಎಎಲ್ಎ ಪ್ರಕರಣ ದಾಖಲಿಸಿ, ಆರೋಪ ಪಟ್ಟಿ ಸಲ್ಲಿಸಿದ್ದರು. ಇಷ್ಟಾದ ಮೇಲೂ ಯಾವ ಕಾರಣಕ್ಕೆ ಸಮನ್ಸ್ ನೀಡಿದ್ದಾರೆ? ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬೆಂಬಲಿಗರಿಗೆ ಕಿರುಕುಳ ನೀಡುವುದು, ಗೊಂದಲ ಮೂಡಿಸುವುದು ಇದರ ಉದ್ದೇಶ ” ಎಂದು ತಿಳಿಸಿದರು.

ನನ್ನನ್ನು ಬೆದರಿಸುವ ಪ್ರಯತ್ನ ಮಾಡಿದರೆ, ನಾನು ಬಗ್ಗುವುದಿಲ್ಲ

“ನನಗೆ ಶುಕ್ರವಾರ ನೋಟೀಸ್ ಸಿಕ್ಕಿದ್ದು, ಇದನ್ನು ವಕೀಲರ ಜತೆ ಚರ್ಚೆ ಮಾಡುತ್ತೇನೆ. ನನ್ನ ಸಹೋದರ ಕೂಡ ಸಂಸದನಾಗಿದ್ದಾಗ ಈ ಸಂಸ್ಥೆಗೆ ದೇಣಿಗೆ ನೀಡಿದ್ದ. ದೆಹಲಿ ಪೊಲೀಸರು ಡಿ.19 ರ ಒಳಗೆ ಮಾಹಿತಿ ನೀಡಬೇಕು ಎಂದು ಹೇಳಿದ್ದಾರೆ. ನಾನು ಸಮಯ ನೋಡಿಕೊಂಡು ಒಂದು ದಿನ ಹೋಗಿ, ಅವರ ನೋಟೀಸ್ ಗೆ ಯಾವ ರೀತಿ ಉತ್ತರ ನೀಡಬೇಕೋ ನೀಡುತ್ತೇನೆ. ಅವರು ನನ್ನನ್ನು ಬೆದರಿಸುವ ಪ್ರಯತ್ನ ಮಾಡಿದರೆ ನಾನು ಬಗ್ಗುವುದಿಲ್ಲ” ಎಂದು ಹೇಳಿದರು

 

Continue Reading

Hassan

ಕ್ರೀಡೆಯು ಪರಿಪೂರ್ಣ ವ್ಯಕ್ತಿತ್ವಕ್ಕೆ ನಾಂದಿಯಾಗಬಲ್ಲದು : ಡಾ. ಅಕ್ಷಯ್ ಎಸ್. ಗೌಡ.

Published

on

ಹಾಸನ: ಕ್ರೀಡೆಯು ಕೇವಲ ಮನರಂಜನೆಗೋ ಅಥವಾ ಆರೋಗ್ಯ ವರ್ಧನೆಗೂ ಮಾತ್ರವಲ್ಲ. ವಿದ್ಯಾರ್ಥಿಗಳು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತಮ್ಮಿಷ್ಟದ ಹೊರಾಂಗಣದ ಆಟವೊಂದನ್ನು ಅಳವಡಿಸಿಕೊಂಡರೆ, ಅದು ಅವರ ಪರಿಪೂರ್ಣ ವ್ಯಕ್ತಿತ್ವಕ್ಕೆ ನಾಂದಿಯಾಗಬಲ್ಲದು ಎಂದು ಚನ್ನರಾಯಪಟ್ಟಣದ ಆಯುರ್ವೇದ ತಜ್ಞ ವೈದ್ಯ ಡಾ. ಅಕ್ಷಯ್ ಎಸ್. ಗೌಡ ತಿಳಿಸಿದರು.

ನಗರದ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜ್ ನಲ್ಲಿ ನಡೆದ ವಾರ್ಷಿಕ ಕ್ರೀಡಾ ಸ್ಪರ್ಧೆಗಳ “ ಕ್ರೀಡಾ ತರಂಗ-2025 ಉದ್ಘಾಟಿಸಿ, ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಿದ್ದರು.

ಯುವಜನರು ಅನಾರೋಗ್ಯಕರ ಆಹಾರ, ದುಶ್ಚಟಗಳು, ಮೊಬೈಲ್ ದುರ್ಬಳಕೆಯಿಂದ ತಮ್ಮ ಅರೋಗ್ಯವನ್ನು ಹಾಳುಮಾಡಿಕೊಳ್ಳುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ನಿತ್ಯವೂ ನಡಿಗೆ, ಲಘುವ್ಯಾಯಾಮ, ಆಟ, ಯೋಗದಂತಹ ಕ್ರಿಯೆಗಳು ನಮ್ಮ ದಿನಚರಿಯ ಅವಿಭಾಜ್ಯ ಅಂಗವಾಗಲೇಬೇಕಿದೆ. ಆಯುರ್ವೇದದ ಚಿಕಿತ್ಸೆಗಳು ಕ್ರೀಡಾಳುಗಳ ಆರೋಗ್ಯದ ಸಮಸ್ಯೆಗಳಿಗೆ ಅತ್ಯುತ್ತಮ ಚಿಕಿತ್ಸಾ ವಿಧಾನಗಳನ್ನು ಒಳಗೊಂಡಿದ್ದು, ಈವರೆಗೂ 1000 ಕ್ಕೂ ಹೆಚ್ಚು ಕ್ರೀಡಾಪಟುಗಳ ವಿವಿಧ ನೋವಿನ ಸಮಸ್ಯೆಗಳನ್ನು ಆಯುರ್ವೇದ ಚಿಕಿತ್ಸಾ ಕ್ರಮಗಳ ಮೂಲಕವೇ ಚಿಕಿತ್ಸೆ ನೀಡಿರುವುದನ್ನು ನೆನೆಸಿಕೊಂಡರು. ತಾವು ವ್ಯಕ್ತಿಯಲ್ಲಿ ವೈದ್ಯರಾದರೂ ತಮ್ಮಲ್ಲಿ ಇಂದಿಗೂ ಕಡಾ ಆಸಕ್ತಿ ಇರಲು ಎಸ್.ಡಿ.ಎಂ.ಶಿಕ್ಷಣ ಸಂಸ್ಥೆ ಒಂದು ಬಲವಾದ ಕಾರಣ ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲೆ ಡಾ.ಶೈಲಜಾ.ಉಪ್ಪಿನಕುದುರು ಅವರು ಮಾತನಾಡಿ, ಇತರ ವೃತ್ತಿಗಳಂತೆ ಆರೋಗ್ಯ ಕ್ಷೇತ್ರದ ವೃತ್ತಿಗಳಲ್ಲೂ ಒತ್ತಡ ಇರುತ್ತದೆ. ಹಾಗಾಗಿ ವಿದ್ಯಾರ್ಥಿ ದೆಸೆಯಲ್ಲೇ ಕ್ರೀಡೆಯನ್ನು ನಮ್ಮ ದಿನಚರಿಯ ಭಾಗವಾಗಿಸಬೇಕು ಎಂದರು. ಎಸ್.ಡಿ.ಎಂ.ಅಯುರ್ವೇದ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಡಾ.ಪ್ರಸನ್ನ ನರಸಿಂಹ ರಾವ್ ಅವರು ಮಾತನಾಡಿ ಎಲ್ಲ ಕ್ರೀಡಾಳುಗಳಿಗೆ ಶುಭಹಾರೈಸಿದರು.

ಆ ಸಮಾರಂಭದಲ್ಲಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ಮುರಲೀಧರ್.ಪಿ.ಪೂಜಾರ್, ಉಪಪ್ರಾಂಶುಪಾಲರಾದ ಡಾ.ಅಶ್ವಿನಿಕುಮಾ‌ರ್.ಎಂ ಮತ್ತು ಡಾ.ಪ್ರಕಾಶ್. ಎಲ್. ಹೆಗಡೆ ಹಾಗು ದೈಹಿಕ ನಿರ್ದೇಶಕ ಶ್ರೀ ಗಣೇಶ್ ಉಪಸ್ಥಿತರಿದ್ದರು. ವಿವಿಧ ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಪಾರಿತೋಷಕಗಳನ್ನು ವಿತರಿಸಲಾಯಿತು.

Continue Reading

Trending

error: Content is protected !!