Connect with us

State

ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ: ಸಿ.ಎಂ.ಸಿದ್ದರಾಮಯ್ಯ

Published

on

ತುಮಕೂರು : ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ.
ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿ.ಎಂ. ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ಪತ್ರಿಕಾ ವೃತ್ತಿಯ ಕರ್ತವ್ಯ. ಧ್ವನಿ ಇಲ್ಲದವರ ಪರವಾಗಿ ವೃತ್ತಿ ಇದ್ದಾಗ ಸಮಾಜಕ್ಕೆ ಅನುಕೂಲ. ಸಮಾಜದಲ್ಲಿರುವ ಮೇಲು, ಕೆಳ ಜಾತಿಗಳ ನಡುವಿನ ತಾರತಮ್ಯ ಮತ್ತು ಅಸಮಾನತೆ ಕೊನೆಯಾಗುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸಿ ಎಂದು ಕರೆ ನೀಡಿದರು.

ನಿಮ್ಮ ವಿಶೇಷ ಸಂಚಿಕೆ ನೀವೂ ಓದಿ

ಈಗ ವೇದಿಕೆಯಲ್ಲಿ ಬಿಡುಗಡೆಯಾದ ನಿಮ್ಮದೇ ವಿಶೇಷ ಸಂಚಿಕೆ ನೀವೂ ಓದಿ. ಪತ್ರಕರ್ತರ ಕರ್ತವ್ಯ , ಸವಾಲುಗಳ ಪಟ್ಟಿ ಇದೆ. ಅದನ್ನು ಓದಿ, ಪಾಲಿಸಿ ಎಂದರು,

ಜನ ಪತ್ರಕರ್ತರ ಮೇಲೆ ನಂಬಿಕೆ ಇಟ್ಟಿದ್ದಾರೆ. ಮೌಡ್ಯದ ಸುದ್ದಿಗಳನ್ನು , ಚರ್ಚೆಗಳನ್ನು ನಡೆಸಿ ನೋಡುಗರ, ಓದುಗರ ದಾರಿ ತಪ್ಪಿಸಬೇಡಿ ಎಂದರು.

ವಿಜ್ಞಾನ, ತಂತ್ರಜ್ಞಾನದ ವೇಗದಲ್ಲೇ ಪತ್ರಿಕೋದ್ಯಮ ಬೆಳೆಯುತ್ತಿದೆ. ಇದು ಅವಕಾಶ , ಸವಾಲು ಎರಡೂ ಆಗಿದೆ ಎಂದರು.

ದೇಶದ ಪ್ರತಿಯೊಬ್ಬರೂ ಸಂವಿಧಾನ ಓದಬೇಕು. ಆಗ ಹಕ್ಕು-ಕರ್ತವ್ಯ ಎರಡೂ ಗೊತ್ತಾಗುತ್ತದೆ. ನಿಮ್ಮದು ಶಕ್ತಿಯುತ ಮಾಧ್ಯಮ. ಜನ ನಿಮ್ಮ ಕಡೆ ನೋಡ್ತಾ ಇದ್ದಾರೆ. ಈ ಎಚ್ಛರಿಕೆ ಸದಾ ಇರಲಿ ಎಂದರು.

ಕೆಲವೇ ದಿನದಲ್ಲಿ ಬಸ್ ಪಾಸ್

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಸದ್ಯದಲ್ಲೇ ನಿಮ್ಮ ಕೈ ಸೇರಲಿದೆ, ಪತ್ರಕರ್ತರ ಕುಟುಂಬಕ್ಕೆ ಆರೋಗ್ಯ ವಿಮೆ ನೀಡುವ ಬಗ್ಗೆ ತೀರ್ಮಾನ ಮಾಡಲಾಗುವುದು. ಪತ್ರಕರ್ತರ ಮಾಸಾಶನವನ್ನೂ 3 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದರು.

ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್, ಗೃಹ ಸಚಿವ ಜಿ.ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ರಾಜ್ಯ ಸರಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿ ಜಿಲ್ಲೆಯ ಶಾಸಕರುಗಳು ಹಾಗೂ ಹಲವು ಪ್ರಮುಖರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

ಮೊದಲಿಗೆ ಸಮ್ಮೇಳನದ ಆವರಣದಲ್ಲಿ ಆಯೋಜಿಸಿದ್ದ ಸ್ಟಾಲ್ ಗಳನ್ನು ವೀಕ್ಷಿಸಿದ ಮುಖ್ಯಮಂತ್ರಿಗಳು ಮಹಿಳಾ ಸ್ವ ಸಹಾಯ ಸಂಘಗಳು ಸಿದ್ದಪಡಿಸಿದ ತಿಂಡಿ ಸವಿದರು.

 

ಕೆ.ವಿ.ಪ್ರಭಾಕರ್ ಅವರಿಗೆ ಅಭಿನಂಧಿಸಿದ ಸಮ್ಮೇಳನ

ರಾಜ್ಯದ ಪತ್ರಕರ್ತ ಸಮುದಾಯದ ವೃತ್ತಿಪರ ಸಮಸ್ಯೆಗಳಿಗೆ ಅತ್ಯಂತ ಸಹೃದಯತೆಯಿಂದ ಸ್ಪಂದಿಸಿ, ಪರಿಹಾರ ಒದಗಿಸಿಕೊಡುತ್ತಿರುವುದರ ಜೊತೆಗೆ ಸಮ್ಮೇಳನದ ಯಶಸ್ಸಿಗೆ ಸಕಲ ರೀತಿಯಲ್ಲಿ ಸಂಪೂರ್ಣ ಸಹಕಾರ ನೀಡಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಸಮ್ಮೇಳನ ವಿಶೇಷ ಅಭಿನಂದನೆ ಸಲ್ಲಿಸಿತು.

Continue Reading

Special

ಸ್ತ್ರೀ ಶಕ್ತಿ ಪ್ಯಾಕೇಜ್: ಮಹಿಳೆಯರಿಗೆ ಭದ್ರತೆಯಿಲ್ಲದೇ 10 ಲಕ್ಷದವರೆಗೆ ಸಾಲ!

Published

on

ಮಹಿಳೆಯರನ್ನು ಸ್ವಾವಲಂಬಿಯನ್ನಾಗಿ ಮಾಡಲು ಭಾರತೀಯ ಸ್ಟೇಟ್ ಬ್ಯಾಂಕ್‌ (SBI) ಹೊಸ ‘ಸ್ತ್ರೀ ಶಕ್ತಿ ಪ್ಯಾಕೇಜ್’ ಆದ ಸಾಲದ ಯೋಜನೆಯನ್ನು ಮಹಿಳಾ ಉದ್ಯಮಶೀಲತೆಯನ್ನು ಪ್ರೋತ್ಸಾಹಿಸಲು ಜಾರಿ ಮಾಡಿದೆ. ಇದು ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿ ಮಾಡಿ, ಸ್ವಂತ ಉದ್ಯಮ ಆರಂಭಿಸಲು ಸಹಾಯಮಾಡುವುದಾಗಿದೆ.

ಸಾಲದ ಷರತ್ತುಗಳು:
* ಮಹಿಳೆಯರು ಕನಿಷ್ಟ 50 % ಪಾಲುದಾರಿಕೆ ಹೊಂದಿರಬೇಕು.
* ಸಾಲದ ಮೊತ್ತ ₹50,000 ರಿಂದ ₹25 ಲಕ್ಷದವರೆಗೆ ಇರಬಲ್ಲದು.
* ಕೆಲವು ಸಂದರ್ಭಗಳಲ್ಲಿ ಗರಿಷ್ಠ ₹50 ಲಕ್ಷವರೆಗೆ ಸಹ ವಿಸ್ತರಣೆ ಸಾಧ್ಯವಾಗಿದೆ.
* ₹10 ಲಕ್ಷವರೆಗೆ ಯಾವುದೇ ಭದ್ರತೆ ಅಗತ್ಯವಿಲ್ಲ — ಇದರಿಂದ ಆಸ್ತಿ ಇಲ್ಲದವರಿಗೂ ಸಾಲ ಸಿಗುವುದು ಸುಲಭ.
* 2 ಲಕ್ಷಕ್ಕಿಂತ ಹೆಚ್ಚು ಸಾಲಕ್ಕೆ ಬಡ್ಡಿ ದರದಲ್ಲಿ 0.5% ರಿಯಾಯಿತಿ ನೀಡಲಾಗುತ್ತದೆ.
•MSME ಅಡಿಯಲ್ಲಿ ನೋಂದಾಯಿತ ವ್ಯವಹಾರಗಳಾಗಿರಬೇಕು.

ಯಾರು ಅರ್ಹರು?
•ಚಿಲ್ಲರೆ ವ್ಯಾಪಾರಿಗರು, ಸಣ್ಣ ಕೈಗಾರಿಕೆ, ಸೇವಾ ವಲಯ, ಗೃಹ ಉತ್ಪಾದನೆ, ಹಾಲು ಉತ್ಪಾದನೆ ಮುಂತಾದ ಉದ್ಯಮಗಳು.
•ವೃತ್ತಿಪರ ಮಹಿಳೆಯರು (ಡಾಕ್ಟರ್, CA, ಆರ್ಕಿಟೆಕ್ಟ್, ಬ್ಯೂಟಿ ಪಾರ್ಲರ್ ಮುಂತಾದವರು) ಸಹ ಅರ್ಹತೆ ಹೊಂದಿದ್ದಾರೆ.

ಮುಖ್ಯ ಪ್ರಯೋಜನಗಳು:
* ಮಹಿಳಾ ಉದ್ಯಮಕ್ಕೆ ಬೇಕಾದ ಆರಂಭಿಕ ಬಂಡವಾಳಕ್ಕೆ ಹಣಕಾಸು ಪಡೆಯಬಹುದು.
* ಬಡ್ಡಿ ದರದಲ್ಲಿ ರಿಯಾಯಿತಿ ಮತ್ತು ಭದ್ರತೆ ರಹಿತ ಸಾಲ ಮಾರುಕಟ್ಟೆಯಲ್ಲಿ ಸಿಗುವುದು ವಿರಳ.
* ವ್ಯಾಪಾರ ವಿಸ್ತರಣೆ, ಕೈಗಾರಿಕೆ ಸಾಮಗ್ರಿ ಖರೀದಿಗೆ ಹಣ ಬಳಸಬಹುದು.

ಈ ಸ್ತ್ರೀ ಶಕ್ತಿ ಪ್ಯಾಕೇಜ್ ಯಾರು ಬಿಸಿನೆಸ್ ಪ್ರಾರಂಭಿಸಲು ಯೋಚಿಸುತ್ತಿದ್ದಾರೋ, ಅವರಿಗೆ ಹಣಕಾಸಿನ ಬೆಂಬಲವಾಗಿ ಅವರ ಕನಸುಗಳನ್ನು ನನಸು ಮಾಡಿಕೊಳ್ಳಲು ಉತ್ತಮ ಸಾಧನವಾಗಿದೆ. ಇದರ ಉಪಯೋಗವನ್ನು ಎಲ್ಲಾ ಮಹಿಳೆಯರು ಪಡೆಯಬೇಕು.

Continue Reading

Special

ಪ್ರಧಾನ ಮಂತ್ರಿ ಸಣ್ಣ ಆಹಾರ ಸಂಸ್ಕರಣಾ ಉದ್ಯಮ (PMFME) – 15 ಲಕ್ಷ ರೂ. ಸಹಾಯಧನ

Published

on

ಭಾರತ ಸರ್ಕಾರವು ಗ್ರಾಮೀಣ ಹಳ್ಳಿಗಳಲ್ಲಿ ಸ್ವತಂತ್ರ ಉದ್ದಿಮೆ ಸ್ಥಾಪಿಸಲು ಪ್ರಧಾನ ಮಂತ್ರಿ ಸಣ್ಣ ಆಹಾರ ಸಂಸ್ಕರಣಾ ಉದ್ಯಮಗಳ ನಿಯಮಬದ್ಧಗೊಳಿಸುವಿಕೆ (PMFME) ಯೋಜನೆಯನ್ನು ಜಾರಿಗೆ ತಂದಿದೆ.

ಯೋಜನೆಯ ಉದ್ದೇಶ:
ಇದರ ಪ್ರಮುಖ ಉದ್ದೇಶ ರೈತರು, ಮಹಿಳೆಯರು ಮತ್ತು ಯುವಕರಿಗೆ ಆಹಾರ ಪೂರೈಕೆಯಲ್ಲಿ ಸ್ವಯಂ ಉದ್ಯೋಗ ಸೃಷ್ಟಿಸಲು ಸಹಾಯ ಮಾಡುವುದು. ಈ ಯೋಜನೆಯಡಿ ಗರಿಷ್ಠ ₹15,00,000 ವರೆಗೆ ಸಹಾಯಧನ (ಸಬ್ಸಿಡಿ) ಲಭಿಸುತ್ತದೆ.

ಸಹಾಯಧನದ ಬಗ್ಗೆ ಮಾಹಿತಿ:
ಈ ಯೋಜನೆಯಡಿ ಒಟ್ಟು ₹15 ಲಕ್ಷದವರೆಗೆ ಸಹಾಯಧನ ದೊರೆಯುತ್ತದೆ. ಇದನ್ನು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಶೇ. 60:40 ದರದಲ್ಲಿ ಹಂಚಿಕೊಳ್ಳುತ್ತಿದ್ದು, ಕೇಂದ್ರದಿಂದ ₹6 ಲಕ್ಷ ಮತ್ತು ರಾಜ್ಯದಿಂದ ₹9 ಲಕ್ಷ ವರ್ಷಕ್ಕೆ ನೀಡಲಾಗುತ್ತದೆ.

ಯಾರು ಅರ್ಹರು?
ಸಹಾಯಧನ ಪಡೆಯಲು ಯಾವುದೇ ವಿಶೇಷ ವಿದ್ಯಾರ್ಹತೆ ಅಗತ್ಯವಿಲ್ಲ; 18 ವರ್ಷ ಮೇಲ್ಪಟ್ಟ ಯಾವುದೇ ಭಾರತೀಯ ನಾಗರಿಕರು ಅರ್ಜಿ ಸಲ್ಲಿಸಬಹುದು ಮತ್ತು ಬ್ಯಾಂಕ್ ಸಾಲ ಪಡೆದವರಿಗೂ ಅರ್ಜಿ ಸಲ್ಲಿಸಲು ಅವಕಾಶವಿದೆ.

ಅರ್ಜಿ ಸಲ್ಲಿಕೆಯನ್ನು ಅಧಿಕೃತ ಪೋರ್ಟ್‌ಲ್‌ ಮೂಲಕ ಆನ್‌ಲೈನ್‌ನಲ್ಲಿ ಮಾಡಬೇಕು.

ಯಾರು ಲಾಭ ಪಡೆಯಬಹುದು?
* ವೈಯಕ್ತಿಕ ಉದ್ಯಮಿಗಳು
* ರೈತರು ಹಾಗೂ ಯೂವಕರು
* ಮಹಿಳಾ ಉದ್ಯಮಿಗಳು
* ಸ್ವ ಸಹಾಯ ಸಂಘಗಳು (SHG)
* ರೈತ ಉತ್ಪಾದಕ ಸಂಘಗಳು (FPO)

ಯಾವ ಉದ್ಯಮಗಳಿಗೆ ಸಹಾಯಧನ?
ಸಹಾಯಧನಕ್ಕಾಗಿ ವಿವಿಧ ಬಗೆಯ ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಬಹುದು.
* ಸಿರಿಧಾನ್ಯ (ಮಿಲೆಟ್ಸ್) ಸಂಸ್ಕರಣಾ ಘಟಕ
* ಬೆಲ್ಲ, ಸಕ್ಕರೆ ಹಾಗೂ ನಿಂಬೆ ಉತ್ಪನ್ನ ಘಟಕಗಳು
* ಬೇಕರಿ ಅಥವಾ ಮಸಾಲಾ ಘಟಕ
* ಎಣ್ಣೆ (ಕೋಲ್ಡ್-ಪ್ರೆಸ್) ಘಟಕ
* ಹಣ್ಣು ಮತ್ತು ತರಕಾರಿ ಸಂಸ್ಕರಣಾ ಘಟಕ
* ಕೋಳಿ, ಮೀನು ಮತ್ತು ಇತರ ಆಹಾರ ಘಟಕಗಳು.

ಯೋಜನೆಯ ಪ್ರಗತಿ:
ಕಳೆದ ಕೆಲವು ವರ್ಷಗಳಲ್ಲಿ ಈ ಯೋಜನೆ ಮೂಲಕ ಸಾವಿರಾರು ಆಹಾರ ಸಂಸ್ಕರಣಾ ಘಟಕಗಳು ಸ್ಥಾಪನೆಯಾಗಿವೆ. ಉದಾ., ಸಿರಿಧಾನ್ಯ, ಎಣ್ಣೆ, ಬೆಲ್ಲ ಮತ್ತು ಮಸಾಲಾ ಘಟಕಗಳು ದೇಶಾದ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ.

ಈ ಯೋಜನೆ ಗ್ರಾಮೀಣ ಭಾರತೀಯರಿಗೆ ಉದ್ಯಮ ಸ್ಥಾಪನೆಯಲ್ಲಿ ಬೃಹತ್ ಅವಕಾಶ ಒದಗಿಸುತ್ತದೆ ಮತ್ತು ಕಳೆದ ವರ್ಷಕ್ಕಿಂತ ಹೆಚ್ಚು ಹೊಸ ಅರ್ಜಿಗಳನ್ನು ಸ್ವೀಕರಿಸಲು ಮುಂದುವರಿಸಿದೆ. ರೈತರು, ಮಹಿಳೆಯರು ಮತ್ತು ಯುವಕರು ತಮ್ಮ ಹಳ್ಳಿಯಲ್ಲೇ ಸ್ವಂತ ಆಹಾರ ಸಂಸ್ಕರಣಾ ಉದ್ಯಮ ಆರಂಭಿಸಲು ಈ ಯೋಜನೆಯ ಸದುಪಯೋಗಪಡಿಸಿಕೊಳ್ಳಬೇಕು.

Continue Reading

State

ಬೆಸ್ಕಾಂನಲ್ಲಿ 520 ಹುದ್ದೆಗಳಿಗೆ ನೇರ ನೇಮಕಾತಿ!

Published

on

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ತನ್ನ 2025–26ನೇ ಸಾಲಿನ ಅಪ್ರೆಂಟೀಸ್‌ಶಿಪ್ ನೇಮಕಾತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ನೇಮಕಾತಿಯಲ್ಲಿ ಒಟ್ಟು 520 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಮುಖ ದಿನಾಂಕಗಳು
* ಅಧಿಸೂಚನೆ ಪ್ರಕಟಣೆ: 06 ಫೆಬ್ರವರಿ 2026
* ಆನ್‌ಲೈನ್ ಅರ್ಜಿ ಆರಂಭ: 12 ಫೆಬ್ರವರಿ 2026
* ಕೊನೆಯ ದಿನಾಂಕ: 02 ಮಾರ್ಚ್ 2026

ಹುದ್ದೆಗಳ ವಿವರ:
•ಹುದ್ದೆ ಶ್ರೇಣಿ: ಎಂಜಿನಿಯರಿಂಗ್ ಗ್ರಾಜುಯೇಟ್ (E&E)
* ಹುದ್ದೆಗಳ ಸಂಖ್ಯೆ: 130
* ಬೇರೆ ಎಂಜಿನಿಯರಿಂಗ್ ಹಾಗೂ ಸಾಮಾನ್ಯ ಪದವಿ ಗ್ರಾಜುಯೇಟ್: 315
* ಡಿಪ್ಲೊಮಾ ಹೋಲ್ಡರ್ಸ್: 75
* ಒಟ್ಟು ಹುದ್ದೆಗಳು: 520

ಅರ್ಹತಾ ಮಾನದಂಡ
* ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸಿನವರಾಗಿರಬೇಕು.
* ಅಭ್ಯರ್ಥಿಗಳು 2021 ನಂತರ ಶಿಕ್ಷಣ ಪೂರ್ಣಗೊಳಿಸಿರುವವರಾಗಿರಬೇಕು.

ಸ್ಟೈಪೆಂಡ್:
ಗ್ರಾಜುಯೇಟ್ ಅಪ್ರೆಂಟಿಸ್‌ಗಳಿಗೆ ₹9,000/-
ಡಿಪ್ಲೊಮಾ ಅಪ್ರೆಂಟಿಸ್‌ಗಳಿಗೆ ₹8,000/-
(ಪ್ರತಿ ತಿಂಗಳಿಗೆ)

ಆಯ್ಕೆ ಮಾಪನ:
ಯಾವುದೇ ಲಿಖಿತ ಪರೀಕ್ಷೆ ಇಲ್ಲ; ಆಯ್ಕೆ ಮೆರಿಟ್ ಆಧಾರಿತ, ಅಂದರೆ ಪದವಿ/ಡಿಪ್ಲೊಮಾ ಅಂಕಗಳನ್ನು ಆಧರಿಸಿ.
ಆಯ್ಕೆಯಾಗಿದ್ದವರಿಗೆ ದಾಖಲೆ ಪರಿಶೀಲನೆ ನಡೆಯುತ್ತದೆ.

ಅರ್ಜಿ ಸಲ್ಲಿಸುವ ವಿಧಾನ
* ಆಸಕ್ತ ಅಭ್ಯರ್ಥಿಗಳು BESCOM ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್ ಅರ್ಜಿಯನ್ನು ಭರ್ತಿ ಮಾಡಬೇಕು. ಅರ್ಜಿಯಲ್ಲಿ ನಿಮ್ಮ ವಿದ್ಯಾರ್ಹತೆ, ಗುರುತಿನ ದಾಖಲೆಗಳು, ಫೋಟೋ ಮತ್ತು ಸಹಿ ದಾಖಲೆಗಳನ್ನು ಸರಿಯಾಗಿ ಅಪ್‌ಲೋಡ್ ಮಾಡಬೇಕು.
•ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಉದ್ಯೋಗಕ್ಕಾಗಿ ಹಾತೊರೆಯುತ್ತಿರುವ ಯುವಕರಿಗೆ ಈ ನೇಮಕಾತಿ ಅದ್ಭುತ ಅವಕಾಶವಾಗಿದ್ದು, ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಕೆಲಸವನ್ನು ಪಡೆಯುವ ಸುವರ್ಣಾವಕಾಶ ಇದಾಗಿದೆ.

Continue Reading

Trending

error: Content is protected !!