Education
ಕರ್ನಾಟಕ ಸಿಇಟಿ ರಿಸಲ್ಟ್ ಯಾವಾಗ? ಇಲ್ಲಿದೆ ಸ್ಪಷ್ಟನೆ

ಈಗಾಗಲೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಇದೀಗ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಬರೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ ) ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಇನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪ್ರತಿಕ್ರಿಯಿಸಿದ್ದು, ದ್ವಿತೀಯ P U ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆಯ (CET-24) ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಇಂದು ಸೋಮವಾರ (ಮೇ 20) ಫಲಿತಾಂಶ ಪ್ರಕಟಿಸುತ್ತಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಹರಿದಾಡುತ್ತಿತ್ತು. ಇದರ ಬೆನ್ನಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಪ್ರತಿಕ್ರಿಯಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದುದು. ದ್ವಿತೀಯ P U ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ ನಂತರವೇ ಸಿಇಟಿ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಪರೀಕ್ಷೆಯನ್ನು ಏಪ್ರಿಲ್ 18, 19ರಂದು ನಡೆಸಿತ್ತು. ಇದರ ಫಲಿತಾಂಶವು ಲೋಕಸಭಾ ಚುನಾವಣೆಯ ರಿಸಲ್ಟ್ ಬಳಿಕವೇ ಘೋಷಣೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಸ್ಪಷ್ಟನೆ ನೀಡಿದ್ದು, ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಹೇಳಿದ್ದಾರೆ.
ಜೆಕೆವಿಕೆಯ ಪ್ರಾಯೋಗಿಕ ಪರೀಕ್ಷೆ ಮೇ 25ರಂದು ನಡೆಯಲಿದ್ದು, ಫಲಿತಾಂಶ ಮೇ 30ರಂದು ಪ್ರಕಟವಾಗಲಿದೆ. ಇನ್ನು ದ್ವಿತೀಯ ಪಿಯು ಪರೀಕ್ಷೆ-2ರ ಫಲಿತಾಂಶ ಮೇ 30ರಂದು ಪ್ರಕಟವಾಗುವ ಸಾಧ್ಯತೆಗಳಿವೆ. ಇದಾದ ಬಳಿಕ ಸಿಇಟಿ ರಿಸಲ್ಟ್ ಪ್ರಕಟವಾಗಲಿದೆ. ಈ ಬಾರಿ 3.49 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದಿದ್ದಾರ ಪ್ರತಿ ವರ್ಷ ಮೇ, ಜೂನ್ನಲ್ಲಿ ಪರೀಕ್ಷೆ ನಡೆದರೆ ಈ ಬಾರಿ ಏಪ್ರಿಲ್ನಲ್ಲೇ ಪರೀಕ್ಷೆ ನಡೆಸಲಾಗಿತ್ತು. ಆದರೆ, ಅಧಿಕಾರಿಗಳ ಎಡವಟ್ಟಿನಿಂದ ಫಲಿತಾಂಶ ವಿಳಂಬವಾಗಿದೆ ಎಂಬ ದೂರುಗಳೂ ಕೇಳಿ ಬರುತ್ತಿವೆ.
ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ ಸಿಇಟಿ ರ್ಯಾಂಕ್ಗೆ ಪರಿಗಣನೆ ಮಾಡಲಾಗುವುದು ಎಂದು ಹೇಳಲಾಗಿದೆ. ಹೀಗಾಗಿ ಎರಡನೇ ಪರೀಕ್ಷೆಯ ಫಲಿತಾಂಶಕ್ಕಾಗಿ ಕೆಇಎ ಕಾಯುವುದು ಅನಿವಾರ್ಯವಾಗಿದೆ.
Education
ಮಿಲಿಟರಿ ಶಾಲೆಯಲ್ಲಿ ಪ್ರವೇಶಾತಿಗೆ ಅರ್ಜಿ ಅಹ್ವಾನ : ಈ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು!

Application for RIMC Admission 2025 – ಉತ್ತರಾಖಂಡ ರಾಜ್ಯದ ಡೆಹರಾಡುನಲ್ಲಿರುವಂತಹ ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ 2026ರ ಶೈಕ್ಷಣಿಕ ಸಾಲಿಗೆ ಅರ್ಹ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಈ ಮೊದಲು ಇದಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿತ್ತು, ಆದರೆ ಇದನ್ನು ಇದೀಗ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದ್ದು ಇದಕ್ಕೆ ಅರ್ಜಿ ಸಲ್ಲಿಸಲು ಯಾವ ವಿದ್ಯಾರ್ಥಿಗಳು ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ ಎಂಬ ಇತ್ಯಾದಿ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ರಾಷ್ಟ್ರೀಯ ಮಿಲಿಟರಿ ಶಾಲೆಯ ವಿಶೇಷತೆ ಏನು?
ಇದು ಕೇಂದ್ರ ಸರ್ಕಾರದ ಪ್ರತಿಷ್ಠಿತ ಸೇನಾ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದ್ದು ಈ ಶಾಲೆಗೆ ಆಯ್ಕೆಯಾಗುವಂತಹ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ಭಾರತೀಯ ನೌಕಾಪಡೆ ಅಕಾಡೆಮಿಗೆ ಸೇರಲು ವಿದ್ಯಾರ್ಥಿಗಳನ್ನು ಟ್ರೈನ್ ಮಾಡಲಾಗುವುದು.
ಇದೀಗ ಈ ಶಾಲೆಗೆ 8ನೇ ತರಗತಿ ಪ್ರವೇಶಾತಿಗೆ ಪ್ರಸ್ತುತ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು?
ರಾಷ್ಟ್ರೀಯ ಮಿಲಿಟರಿ ಶಾಲೆಗೆ ಎಂಟನೇ ತರಗತಿಗೆ ಪ್ರವೇಶಾತಿ ಪಡೆಯಲು ಮಾನ್ಯತೆ ಪಡೆದ ಶಾಲೆಯಿಂದ ಏಳನೇ ತರಗತಿ ಪೂರ್ಣಗೊಳಿಸಿರಬೇಕು ಹಾಗೂ 11.5 ವರ್ಷದಿಂದ ಗರಿಷ್ಟ 13 ವರ್ಷದ ಒಳಗಿರಬೇಕು.
ಈ ಶಾಲಿಗೆ ವಿದ್ಯಾರ್ಥಿಗಳನ್ನು ಹೇಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೂರು ಹಂತದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು. ಮೊದಲನೇ ಹಂತದಲ್ಲಿ ಲಿಖಿತಪರೀಕ್ಷೆ ನಂತರದಲ್ಲಿ ಮೌಖಿಕ ಸಂದರ್ಶನ ಹಾಗೂ ಮೂರನೇ ಹಂತದಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಅಂತಿಮ ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?
ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಏಪ್ರಿಲ್ 15, 2025 ಆಗಿರುತ್ತದೆ. ಅರ್ಹತೆಗಳನ್ನು ಹೊಂದಿರುವಂತಹ ವಿದ್ಯಾರ್ಥಿಗಳು ಈ ಕೊನೆಯ ದಿನಾಂಕದ ಒಳಗಾಗಿ ತಮ್ಮ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಾರ್ಯಾಲಯವನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.
ಅಥವಾ ಈ ಕೆಳಗಿನ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ವಿಳಾಸ : ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆಎಮ್ ಕರಿಯಪ್ಪ ರಸ್ತೆ ಬೆಂಗಳೂರು
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣ – https://rimc.gov.in
Education
ಮಾ.21 ರಿಂದ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಿ: ಡಾ.ಕುಮಾರ

ಮಂಡ್ಯ : ಜಿಲ್ಲೆಯಲ್ಲಿ ಮಾಚ್೯21 ರಿಂದ ಏಪ್ರಿಲ್ 04 ರವರೆಗೆ ನಡೆಯಲಿರುವ ಎಸ್.ಎಸ್.ಎಲ್ ಸಿ ಪರೀಕ್ಷೆಗಳ ಕೆಲಸಗಳು ಯಾವುದೇ ಲೋಪವಿಲ್ಲದೆ ಪಾರದರ್ಶಕವಾಗಿ ನಡೆಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ಅವರು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷಾ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಮಾತನಾಡಿ, ಈ ಬಾರಿ ಒಟ್ಟು 20,469 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೊಂದಾಯಿಸಿಕೊಂಡಿದ್ದಾರೆ. ಇವರಲ್ಲಿ 10,661 ಗಂಡು ಮಕ್ಕಳು ಹಾಗೂ 9,835 ಹೆಣ್ಣು ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ ಎಂದರು.
62 ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ಮುಖ್ಯ ಶಿಕ್ಷಕರನ್ನು ಪರೀಕ್ಷಾ ಅಧೀಕ್ಷಕರನ್ನು ಹಾಗೂ ಪೇಪರ್ ಕಸ್ಟೋಡಿಯನ್ ಗಳನ್ನು , ಪ್ರತಿ ಬ್ಲಾಕ್ ಗೆ ಒಬ್ಬರೂ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದರು.
ಪೂರ್ಣ ಪರೀಕ್ಷೆ ವೆಬ್ ಕ್ಯಾಸ್ಟಿಂಗ್
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಪ್ರಕ್ರಿಯೆ ಪಾರದರ್ಶಕವಾಗಿ ನಡೆಸಲು ಪರೀಕ್ಷೆ ನಡೆಯುವ ಎಲ್ಲಾ ಕೊಠಡಿಗಳಿಗೆ ಸಿ.ಸಿ.ಟಿ.ವಿ ಅಳವಡಿಸಲಾಗುವುದು. ಪರೀಕ್ಷೆಯ ಚಲನ- ಕವನಗಳನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತೆರೆಯಲಾಗುವ ಕಂಟ್ರೋಲ್ ರೂಂನಲ್ಲಿ ಅಧಿಕಾರಿಗಳನ್ನು ನೇಮಿಸಿ ವೀಕ್ಷಿಸಲಾಗುವುದು
ಎಂದರು.
ಮೂಲಭೂತ ವ್ಯವಸ್ಥೆಗಳು
ಯಾವುದೇ ವಿದ್ಯಾರ್ಥಿ ನೆಲದ ಮೇಲೆ ಕುಳಿತು ಪರೀಕ್ಷೆ ಬರೆಯಬಾರದು. ಪರೀಕ್ಷೆ ಅಚ್ಚುಕಟ್ಟಾಗಿ ನಡೆಸಲು ಉತ್ತಮ ಬೆಂಚ್ ಮತ್ತು ಡೆಸ್ಕ್ ಇರುವುದನ್ನು ಖಾತ್ರಿ ಪಡಿಸಿಕೊಳ್ಳಿ. ಮಕ್ಕಳಿಗೆ ಕುಡಿಯುವ ನೀರು ಹಾಗೂ ಶೌಚಾಲಯಗಳ ವ್ಯವಸ್ಥೆ ಪರೀಕ್ಷಿಸಿಕೊಳ್ಳಿ ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಬಳಕೆ ಕಡ್ಡಾಯವಾಗಿ ನಿಷೇಧಿಸಲಾಗಿದೆ. ಈ ಹಿನ್ನಲೆಯಲ್ಲಿ ಶಿಕ್ಷಕರು ಸಹ ಮೊಬೈಲ್ ನ್ನು ಪರೀಕ್ಷಾ ಕೊಠಡಿಗಳಿಗೆ ತೆಗೆದುಕೊಂಡು ಹೋಗಬಾರದು.
ಪರೀಕ್ಷೆ ನಡೆಯುವ ದಿನದಂದು
ಕೆ.ಎಸ್.ಆರ್.ಟಿ.ಸಿ ಬಸ್ ಗಳು ಸರಿಯಾದ ಸಮಯದಲ್ಲಿ ನಿಗದಿಪಡಿಸಿರುವ ರೀತಿ ಟ್ರಿಪ್ ಗಳಲ್ಲಿ ಸಂಚರಿಸಬೇಕು. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದರು.
ಜಿಲ್ಲೆಯಲ್ಲಿ ಯಾವುದೇ ಸೂಕ್ಷ್ಮ, ಅತಿಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಇರುವುದಿಲ್ಲ. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು. ಈ ವ್ಯಾಪ್ತಿಯಲ್ಲಿ ಪರೀಕ್ಷೆ ನಡೆಯುವ ದಿನಗಳಂದು ಜೆರಾಕ್ಸ್ ಅಂಗಡಿಗಳು ಹಾಗೂ ಸೈಬರ್ ಸೆಂಟರ್ ಗಳು ತೆರೆಯಲು ಅವಕಾಶವಿರುವುದಿಲ್ಲ ಎಂದರು.
ಆರೋಗ್ಯ ಇಲಾಖೆ ಅವರು ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಿಬ್ಬಂದಿಗಳನ್ನು ನೇಮಕ ಮಾಡಿ ಅಗತ್ಯ ಔಷಧಿಗಳು ಹಾಗೂ ಒ.ಆರ್. ಎಸ್ ಗಳನ್ನು ವ್ಯವಸ್ಥೆ ಮಾಡಿಕೊಳ್ಳಲು ತಿಳಿಸಿದರು.
ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿ
ವಿದ್ಯಾರ್ಥಿಗಳೊಂದಿಗೆ ಮುಖ್ಯ ಶಿಕ್ಷಕರು ಸಂಪರ್ಕದಲ್ಲಿದ್ದು, ಅವರಲ್ಲಿ ಪರೀಕ್ಷೆಯ ಬಗ್ಗೆ ಯಾವುದೇ ಭಯ ಬೇಡ. ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಲು ಸಜ್ಜುಗೊಳಿಸಿ. ಯಾವುದಾದರೂ ಪರೀಕ್ಷಾ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಗೊಂದಲ ಇದ್ದರೆ ಪರಿಹರಿಸಿ ಎಂದರು.
ಸಭೆಯಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರ ಸ್ವಾಮಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವರಾಮೇಗೌಡ, ಡಯಟ್ ಪ್ರಾಂಶುಪಾಲ ಪುರುಷೋತ್ತಮ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Education
10th ಪಾಸಾದವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ 491 ಹುದ್ದೆಗಳ ಭರ್ತಿ

Anganawadi Jobs 2025 : 10ನೇ ತರಗತಿ ಹಾಗು ದ್ವಿತೀಯ ಪಿಯುಸಿ ಪಾಸಾದ ಮಹಿಳೆಯರು ಉದ್ಯೋಗ ಹುಡುಕುತ್ತಿದ್ದರೆ ಅಂತವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾ ಅಡಿಯಲ್ಲಿ 491 ಹುದ್ದೆಗಳು ಖಾಲಿ ಇವೆ.
ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕ್ಕೆ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 04ರವರೆಗೆ ಅವಕಾಶವಿದೆ.
ನೇಮಕಾತಿ ಹುದ್ದೆಗಳ ಮಾಹಿತಿ :
ಈ ನೇಮಕಾತಿಯನ್ನು ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳ ಅಡಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಮಾಡಿಕೊಳ್ಳಲಾಗುತ್ತಿದ್ದು ಖಾಲಿ ಇರುವ ಹುದ್ದೆಗಳ ವಿಂಗಡಣೆ ಹೀಗಿದೆ.
• ಅಂಗನವಾಡಿ ಸಹಾಯಕಿಯರು – 376 ಹುದ್ದೆಗಳು
• ಅಂಗನವಾಡಿ ಕಾರ್ಯಕರ್ತೆಯರು – 491 ಹುದ್ದೆಗಳು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯೋಮಿತಿ ಮತ್ತು ಶೈಕ್ಷಣಿಕ ಅರ್ಹತೆಗಳು :
ಒಂದು ವೇಳೆ ನೀವು ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವುದಾದರೆ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು. ಅದೇ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವುದಾದರೆ ನೀವು ಹತ್ತನೇ ತರಗತಿ ಪಾಸ್ ಆಗಿರಬೇಕು.
ವಯೋಮಿತಿ – ಕನಿಷ್ಠ 19 ರಿಂದ 35 ವರ್ಷದ ಒಳಗಿನ ಅಭ್ಯರ್ಥಿಗಳಾಗಿರಬೇಕು.
ಈ ಹುದ್ದೆಗಳಿಗೆ ಹೇಗೆ ಆಯ್ಕೆ ಮಾಡಿಕೊಳ್ಳಲಾಗುವುದು?
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳು, ಈ ನೇಮಕಾತಿಯಲ್ಲಿ ನಿಗದಿಪಡಿಸಿರುವಂತಹ ಶೈಕ್ಷಣಿಕ ಅರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಹೇಗೆ ಸಲ್ಲಿಸಬೇಕು?
ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದಲ್ಲಿ ಈ ಕೆಳಗೆ ನೀಡಿರುವ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ವೆಬ್ಸೈಟ್ – https://karnemakaone.kar.nic.in/abcd/
-
State11 hours ago
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಆರೋಪಿ ರನ್ಯಾರಾವ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
-
Uncategorized7 hours ago
ಭಾರತ-ಪಾಕ್ ಯುದ್ಧದ ಬಗ್ಗೆ ಸಿಎಂ ಹೇಳಿಕೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್.ಅಶೋಕ್ ವಾಗ್ದಾಳಿ
-
Hassan4 hours ago
ಜಮೀನು ವಿಚಾಕ್ಕೆ ಕೊಲೆ
-
Mysore10 hours ago
ಬಿಜೆಪಿ ದೇವರು, ಧರ್ಮದ ಹೆಸರಲ್ಲಿ ಬರೀ ಸುಳ್ಳು ಹರಡುತ್ತದೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ
-
Mysore12 hours ago
ಕೇಂದ್ರ ಸರ್ಕಾರ, ಯುದ್ಧದ ಬದಲು ಪಾಕ್ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ: ಸಿಎಂ ಸಿದ್ದರಾಮಯ್ಯ
-
Hassan6 hours ago
ಹಾಸನ| ಪ್ರತಿಯೊಬ್ಬರು ಬಾಲ್ಯದಿಂದಲೇ ತಮ್ಮ ಮಕ್ಕಳಿಗೆ ಸಂಸ್ಕಾರ ಕಲಿಸಿಕೊಡುವುದು ಅಗತ್ಯ: ಮಾಜಿ ಶಾಸಕ ಬಿ.ಆರ್. ಗುರುದೇವ್
-
Kodagu7 hours ago
ಮಡಿಕೇರಿಯಲ್ಲಿ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಉದ್ಘಾಟನೆ
-
Kodagu7 hours ago
ಪ್ರಧಾನಿ, ಗೃಹ ಸಚಿವರ ರಾಜೀನಾಮೆಗೆ ಆಮ್ ಆದ್ಮಿ ಪಾರ್ಟಿ ಆಗ್ರಹ