Kodagu
ಕರಡ ಕೀಮಲೆಕಾಡುವಿನ ಮನೆಯ ಸಮೀಪದಲ್ಲಿ ಕಾಡಾನೆ ಮರಿ ಜನ್ಮ .

ನರಿಯಂದಡ ಗ್ರಾಮ ಪಂಚಾಯಿತಿಯ ಕರಡ ಗ್ರಾಮದ ಕೀಮಲೆ ಕಾಡುವಿನಲ್ಲಿ ಕಾಡಾನೆಯೊಂದು ಜನ್ಮ ನೀಡಿದೆ.
ಕೀಮಲೆ ಕಾಡುವಿನ ಮೊಣ್ಣಕುಟ್ಟ0ಡ ಮಂಜು ಅವರ ಮನೆಯ ಬಳಿ ಕಾಡಾನೆಯೊಂದು ನಿನ್ನೆ ರಾತ್ರಿ ಹೆಣ್ಣುಮರಿಗೆ ಜನ್ಮ ನೀಡಿದೆ.
ಕಾಡಾನೆ ಮರಿ ನೋಡಲು ಸ್ಥಳಕ್ಕೆ ತಂಡೊಪ ತಂಡವಾಗಿ ಆಗಮಿಸುತ್ತಿರುವ ಜನ.
ಕಾಡಾನೆ ಮರಿ ಹಾಕಿದ ಸುದ್ದಿ ತಿಳಿದ ಕೂಡಲೇ ಗ್ರಾಮಕ್ಕೆ ತಂಡೊಪ ತಂಡವಾಗಿ ಜನರು ಆಗಮಿಸಿ ಮರಿಯಾನೆಯನ್ನು ವೀಕ್ಷಿಸಿದರು.
ತಾಯಿ ಆನೆ ಸಮೀಪದ ತೋಟದಲ್ಲಿ ಮರಿಯಾನೆಗೆ ಕಾಯುತ್ತಾ ನಿಂತಿದೆ.
ಸ್ಥಳಕ್ಕೆ ಅರಣ್ಯಧಿಕಾರಿ ಭೇಟಿ ವಿಷಯ ತಿಳಿದ ವಿರಾಜಪೇಟೆ ಅರಣ್ಯ ವಲಯಾದಿಕಾರಿಗಳಾದ ಕಳ್ಳಿರ ದೇವಯ್ಯ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.
Kodagu
ನಾಳೆ ಎಲ್ಲೆಲ್ಲಿ ಕರೆಂಟ್ ಇರಲ್ಲ?

ಸೋಮವಾರಪೇಟೆ 66/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಾರ್ಗ ನಿರ್ವಹಣೆ ಕಾಮಗಾರಿ ಕೈಗೊಂಡಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಫ್2 ಶಾಂತಳ್ಳಿ ಮಾರ್ಗದಲ್ಲಿ ಮೇ, 23 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಯಡೂರು, ತಲ್ತಾರೆಶೆಟ್ಟಳ್ಳಿ, ಕಿರಗಂದೂರು, ತಾಕೇರಿ, ಗಿಜಗನಮನೆ, ತೊಳೂರುಶೆಟ್ಟಳ್ಳಿ, ಕೂತಿ, ಹೊಸಬೀಡು, ಕಲ್ಕಂದೂರು, ಬಸವನಕಟ್ಟೆ, ನಗರಳ್ಳಿ, ಹೆಮನಗದ್ದೆ, ಶಾಂತಳ್ಳಿ, ಬೆಟ್ಟದಳ್ಳಿ, ಬೀದಳ್ಳಿ, ಕುಂದಳ್ಳಿ, ಹೆಗ್ಗಡಮನೆ, ಹರಗ, ಕುಂಬಾರಗಡಿಗೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
Kodagu
ಅಯ್ಯಪ್ಪ ದೇವಸ್ಥಾನದಲ್ಲಿ ಬುಡಕಟ್ಟು ಜನರ ಕುದುರೆ ಹಬ್ಬ




Kodagu
ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ‘ಡಿ’ ಗ್ರೂಪ್ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ : ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆಗೆ ಸೇರಿರುವ ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕರ್ತವ್ಯ ನಿರ್ವಹಿಸಲು 03 ‘ಡಿ’ ಗ್ರೂಪ್ ಹುದ್ದೆಗಳು ಖಾಲಿ ಇದ್ದು, ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರ ವಯೋಮಿತಿ 18 ವರ್ಷ ತುಂಬಿರಬೇಕು. 35 ವರ್ಷ ಮೀರಿರಬಾರದು. (ವಯಸ್ಸಿನ ಬಗ್ಗೆ ಶಾಲಾ ದಾಖಲೆ ನೀಡಬೇಕು), ದೇವಾಲಯದ ಹೊರಾಂಗಣದ ನೌಕರರು ‘ಡಿ’ ಗ್ರೂಪ್ ಹುದ್ದೆ-2(ಕಾವಲುಗಾರರು) ವೇತನ ರೂ.9,600 ಮತ್ತು ಇತರೆ. ದೇವಾಲಯದ ಕರ್ತವ್ಯದ ಅವಧಿ ಬೆಳಗ್ಗೆ 7.30 ರಿಂದ ಮಧ್ಯಾಹ್ನ 1 ಗಂಟೆ, ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ.
ದೇವಾಲಯದ ಕೆಲಸ ಕಾರ್ಯಗಳು ಮುಜರಾಯಿ ಇಲಾಖೆ ಸೂಚಿಸಿದ ನಿಯಮಗಳು ಹಾಗೂ ಶಿಸ್ತು ಪಾಲನೆಗೆ ಒಳಪಟ್ಟಿರುತ್ತದೆ. ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯಿಂದ ಪಡೆದ ದೇಹ ದಾಢ್ರ್ಯ ಪ್ರಮಾಣ ಪತ್ರ ಹಾಜರುಪಡಿಸುವುದು. ಯಾವುದೇ ಕ್ರಿಮಿನಲ್ ಮೊಕದ್ದಮೆ ಹಾಗೂ ನ್ಯಾಯಾಲಯದ ಆದೇಶದಂತೆ ಕಾರಾಗೃಹದ ಶಿಕ್ಷೆಗೆ ಒಳಪಟ್ಟಿರಬಾರದು. ಅರ್ಜಿ ಸಲ್ಲಿಸಲು ಜೂನ್, 05 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ದೇವಾಲಯದ ಕಚೇರಿಯ ಸಮಯ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆ ಒಳಗೆ ಭೇಟಿ ನೀಡಬಹುದಾಗಿದೆ ಎಂದು ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ದೇವರಾಜು ಅವರು ತಿಳಿಸಿದ್ದಾರೆ.
-
Hassan19 hours ago
ಮುಹೂರ್ತ ಮುಗಿಸಿ ಪರೀಕ್ಷೆ ಬರೆಯಲು ಬಂದ ವಧು
-
Hassan19 hours ago
ಹಾಸನ : ಹೃದಯಾಘಾತದಿಂದ ಯುವಕ-ಯುವತಿ ಸಾ*ವು
-
Kodagu16 hours ago
ನಂದಿನೆರವಂಡ ಉತ್ತಪ್ಪ ನಿಧನ
-
Mandya15 hours ago
ವ್ಯವಸಾಯದಲ್ಲಿ ಹೊಸ ಪದ್ಧತಿ ಅಳವಡಿಸಿಕೊಳ್ಳಬೇಕಿದೆ : ಕೆ. ಆರ್ ನಂದಿನಿ
-
Hassan14 hours ago
ಸಾಹಿತಿ ಭಾನುಮುಷ್ತಾಕ್ ರವರಿಗೆ ಬೂಕರ್ ಪ್ರಶಸ್ತಿ : ನಗರದಲ್ಲಿ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟದಿಂದ ಸಂಭ್ರಮ
-
Kodagu18 hours ago
ಕೊಡಗು ಜಿಲ್ಲೆಯ ಮಳೆ ವಿವರ(ಮಿಲಿ ಮೀಟರ್ ಗಳಲ್ಲಿ)
-
Kodagu17 hours ago
ಸಮಸ್ಯೆ ಆಲಿಸಿದ ನಗರಸಭೆ ಅಧ್ಯಕ್ಷೆ, ಉಪಾಧ್ಯಕ್ಷ
-
Kodagu16 hours ago
ಜಾತಿಗಣತಿ ಸಮೀಕ್ಷೆ ಲೋಪದೋಷ : ಅಧಿಕಾರಿಗಳಿಗೆ ತಹಸೀಲ್ದಾರ್ ಕ್ಲಾಸ್..!