Connect with us

Chamarajanagar

ಸೋಲಿಗರ ಆರಾಧ್ಯ ದೈವ ಶ್ರೀಬಿಳಿಗಿರಿ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

Published

on

ಯಳಂದೂರು ಏಪ್ರಿಲ್ 23

ಸೋಲಿಗರ ಆರಾಧ್ಯ ದೈವ ಶ್ರೀಬಿಳಿಗಿರಿ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ಬೆಳಗ್ಗೆಯಿಂದಲೇ ಶ್ರೀ ಬಿಳಿಗಿರಿ ರಂಗನಾಥ ಸ್ವಾಮಿ ಮತ್ತು ಆಲಮೇಲು ರಂಗನಾಯಕಿ ಅಮ್ಮ ನವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ವೈಖಾನಾಸ ಆಗ ಮೊಕ್ತವಾಗಿ ಪೂರ್ವ ಪದ್ಧತಿಯಂತೆ ವೇದ ಮಂತ್ರಗಳನ್ನು ಉಚ್ಚರಿಸಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ನಂತರ ಚಂಪಕಾರಣ್ಯವಾಸಿ ಶ್ರೀ ಬಿಳಿಗಿರಿರಂಗನಾಥ ಸ್ವಾಮಿಗೆ ವಿಜಯಭ್ಯುದಯ ಶಾಲಿವಾಹನ ಶಕ ೧೯೪೫ನೇ ಶ್ರೀ ಶೋಭಾಕ್ಕೃತ್ ನಾಮ ಸಂವತ್ಸರದ ಉತ್ತರಾಯಣ ವಸಂತ ಋತು ವೈಖಾಸನ ಶುದ್ಧ ಚತುರ್ದಶಿ ತಿಥಿಮಾಸ ಪೂರ್ವ ಪದ್ಧತಿಯಂತೆ ಬೆಳಗ್ಗೆ 4 ಗಂಟೆಗೆ ಕಲ್ಯಾಣೋತ್ಸವ, 6:00ಗೆ ಪ್ರಸನ್ನ ಮಂಟಪೋತ್ಸವ ಗಳು ನಡೆಯಿತು. ನಂತರ ಬೆಳಗ್ಗೆ
10 .53 ರಿಂದ 11. 08ಎಂಟರ ಒಳಗೆ ಸಲ್ಲುವ ಶುಭ ಮಿಥುನ ಲಗ್ನದ ಮೇಷ ಕುಜ ನವಾಂಶದ ಶುಭ ಮುಹೂರ್ತದಲ್ಲಿ ಮಹಾ ರಥೋತ್ಸವಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು.

ರಂಗನಾಥಸ್ವಾಮಿ, ಪದ್ಮಾವತಿ, ತುಳಸಿ ಅಮ್ಮನವರ ಉತ್ಸವ ಮೂರ್ತಿಯನ್ನು ರಂಗನಾಥ ಸ್ವಾಮಿ ದೊಡ್ಡ ರಥೋತ್ಸವದಲ್ಲಿ ಕೂರಿಸಿ ಆಕಾಶದಲ್ಲಿ ಗರುಡ ಪಕ್ಷಿ ದೊಡ್ಡ ರಥೋತ್ಸವವನ್ನು ಮೂರು ಬಾರಿ ಪ್ರದಕ್ಷಿಣೆ ಹಾಕುತ್ತಿದ್ದಂತೆ ಸೋಲಿಗರು ಹಾಗೂ ಭಕ್ತರು ಶ್ರೀ ಬಿಳಿಗಿರಂಗನಾಥನ ನಾಮಸ್ಮರಣೆ ಮಾಡುತ್ತಾ ರಂಗಪ್ಪನ ತೇರು ಎಳೆದು ಹರ್ಷೋದ್ಗಾರ ವ್ಯಕ್ತಪಡಿಸಿದರು.

ಮಜ್ಜಿಗೆ ಪಾನಕ ವಿತರಣೆ.

ಬಿಳಿಗಿರಿ ರಂಗನಾಥ ಸ್ವಾಮಿ ತೆರಿಗೆ ರಾಜ ಬೀದಿಯಲ್ಲಿ ಅರವಟ್ಟಿಕೆಗಳಲ್ಲಿ ಭಕ್ತರು ಮಜ್ಜಿಗೆ ಪಾನಕ ಕೋಸಂಬರಿ ವಿತರಣೆ ಮಾಡಿದರು. ಅಲ್ಲದೆ ಭಕ್ತರಿಗೆ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅನ್ನ ಸಂತರ್ಪಣೆ ಮಾಡಿದರು. ದೇವಾಲಯದ ಆಡಳಿತ ಮಂಡಳಿ ವತಿಯಿಂದ ಸಹ ಜಾತ್ರೆಗೆ ಬರುವ ಎಲ್ಲಾ ಭಕ್ತರಿಗೂ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಊಟದ ವ್ಯವಸ್ಥೆ ಮಾಡಲಾಗಿತ್ತು.

ಪ್ರತಿ ವರ್ಷದಂತೆ ಸಹ ಈ ವರ್ಷವೂ ಬಸ್ಸಿಗೆ ಸಮಸ್ಯೆ ಉಂಟಾಯಿತು. ಈ ಬಾರಿ ಜಿಲ್ಲಾಡಳಿತ 60ಕ್ಕೂ ಹೆಚ್ಚು ಬಸ್ಸುಗಳನ್ನು ಬಿಟ್ಟಿದ್ದರು ಸಹ ಬಸ್ ಬಾರದೆ ಭಕ್ತರು ಚಡಪಡಿಸಿದರು. ದ್ವಿಚಕ್ರ ವಾಹನ ನಿಷೇಧ ಮಾಡಿದ್ದರಿಂದ ಟ್ರಾಫಿಕ್ ಸಮಸ್ಯೆ ಇರಲಿಲ್ಲ. ದಾರಿ ಉದ್ದಕ್ಕೂ ಪೊಲೀಸ್ ಇಲಾಖೆ ಸಿಬ್ಬಂದಿ ನಿಯೋಜನೆಗೊಂಡಿದ್ದರಿಂದ ಕಾನೂನು ಸುವ್ಯವಸ್ಥೆ ಅಚ್ಚುಕಟ್ಟಾಗಿ ನಡೆಯಿತು.

ಬಹುಪರಾಕ್.

ಗ್ರಾಮೀಣ ಜನರು ಅಕ್ಕಿ, ಬೆಲ್ಲ, ಎಳ್ಳು ,ಕಾಯಿ, ಹಸಿಗಡಲೆ, ಕಜ್ಜಾಯ ಪುರಿ ಪಳಾರ ಮಾಡಿ ಬಿಳಿಗಿರಿ ರಂಗನಾಥ ಸ್ವಾಮಿ ದಾಸಯ್ಯರಿಂದ ಬ್ಯಾಟ ಮನೆ ಹಾಕಿಸಿ ಹಾಪರ ಗೋಪರ ಕೂಗಿ ಬಿಳಿಗಿರಿ ರಂಗನಾಥ ಸ್ವಾಮಿಗೆ ಬಹುಪರಾಕ್ ಹಾಕಿಸಿದರು.

ಮಳೆಗಾಗಿ ಪ್ರಾರ್ಥನೆ.

ರಾಜ್ಯದಲ್ಲಿ ಕೆಲವು ದಿನಗಳಿಂದ ಮಳೆ ಬರದೇ ಇರುವುದರಿಂದ ಮೈಸೂರು ಚಾಮರಾಜನಗರ ಮಂಡ್ಯ ಜಿಲ್ಲೆಗಳಿಂದ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ರೈತರು ಉತ್ತಮ ಮಳೆ ಬೆಳೆಯಾಗುವಂತೆ ರಂಗನಾಥ ಸ್ವಾಮಿಯಲ್ಲಿ ಬೇಡಿಕೊಂಡರು.

ನವ ಜೋಡಿಗಳ ಕಲರವ

ಬಣ್ಣ ಬಣ್ಣದ ಉಡುಗೆ ತೊಟ್ಟ ನವ ಜೋಡಿಗಳು ಬಿಳಿಗಿರಿ ರಂಗನಾಥ ಸ್ವಾಮಿ ರಥೋತ್ಸವಕ್ಕೆ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿ ಹಣ್ಣು ಜವನ ಎಸೆದು ಜೀವನ ಸುಖಮಯವಾಗಿರಲಿ ಎಂದು ರಂಗನಾಥ ಸ್ವಾಮಿಯಲ್ಲಿ ಕೋರಿದರು.

ಜಿಲ್ಲೆಯ ನಾನಾ ಭಾಗದ ಸೋಲಿಗ ಸಮುದಾಯದ ಜನರು ಜಾತ್ರೆಗೆ ಬಂದಿದ್ದು, ಬಿಳಿಗಿರಿರಂಗನಾಥ ಸ್ವಾಮಿ ತಮ್ಮದೇ ಸಮುದಾಯದ ಕುಸುಮಲೆಯನ್ನು ವರಿಸಿದ ಎಂಬ ಇತಿಹಾಸ ಇರುವುದರಿಂದ ಸೋಲಿಗರು ರಂಗನಾಥ ಸ್ವಾಮಿಯನ್ನು ರಂಗಾಭಾವ ಎಂದು ಕರೆಯುವ ಪದ್ಧತಿ ಹಿಂದಿನಿಂದಲೂ ಬಂದಿದ್ದು ತೇರಿನ ದಿವಸ ಎಲ್ಲಾ ಸೋಲಿಗರು ಬಿಳಿಗಿರಿರಂಗನ ಬೆಟಕ್ಕೆ ಆಗಮಿಸಿ ರಂಗನಾಥ ಸ್ವಾಮಿ ದರ್ಶನ ಪಡೆಯುತ್ತಾರೆ.

Continue Reading
Click to comment

Leave a Reply

Your email address will not be published. Required fields are marked *

Chamarajanagar

ಡಿ. 9, 10 ರಂದು ನಗರದಲ್ಲಿ ಕಲಾ ಪ್ರತಿಭೋತ್ಸವ ಕಾರ್ಯಕ್ರಮ

Published

on

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಕಲಾ ಪ್ರತಿಭೋತ್ಸವ ಕಾರ್ಯಕ್ರಮವನ್ನು ಡಿ.9 ಮತ್ತು 10 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯ ಸುನೀಲ್ ಬೋಸ್ ಘನ ಉಪಸ್ಥಿತಿ ವಹಿಸುವರು.

ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು. ಜಿ.ಮಾದೇಗೌಡ, ಕೆ. ವಿವೇಕಾನಂದ, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ. ಚಂದ್ರು, ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ ಕವಿತಾ, ಮೈಸೂರು ವಿಭಾಗದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

Continue Reading

Chamarajanagar

ಮಹಾಪರಿನಿರ್ವಾಣ ದಿನ: ಮೊಂಬತ್ತಿ ಮೆರವಣಿಗೆ

Published

on

ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಮೊಂಬತ್ತಿ ಮೆರವಣಿಗೆ ನಡೆಯಿತು.

ತಾಲೂಕಿನ ನಾಗವಳ್ಳಿ ಗ್ರಾಮದಲ್ಲಿ ರಾಜಗಿರಿ ಬುದ್ಧವಿಹಾರ, ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದ ಸಹಯೋಗದಲ್ಲಿ ಹಾಗೂ ಗ್ರಾಮದ ಯಜಮಾನರುಗಳ ಮಾರ್ಗದರ್ಶನದಲ್ಲಿ ಇಂದು ಸಂಜೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೇಣದ ಬತ್ತಿ ಮೆರವಣಿಗೆ ನಡೆಸಲಾಯಿತು.

ಸಂವಿಧಾನ ಪೀಠಿಕೆಯನ್ನು ವಾಚನ ಮಾಡಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಮೊಂಬತ್ತಿ ಮೆರವಣಿಗೆ ಚಾಲನೆ ನೀಡಲಾಯಿತು.

ಇದೇ ಸಂದರ್ಭದಲ್ಲಿ ಗ್ರಾಮದ ಯಜಮಾನರು, ಗ್ರಾಮ ಪಂಚಾಯಿತಿ ಸದಸ್ಯರು, ರಾಜಗಿರಿ ಬೌದ್ಧವಿಹಾರದ ಉಪಾಸಕರು, ಗ್ರಾಮದ ಮುಖಂಡರು, ಯುವಕರು ಹಾಗೂ ಗ್ರಾಮಸ್ಥರು ಹಾಜರಿದ್ದರು.

Continue Reading

Chamarajanagar

ಅಪರಿಚಿತ ಶವ : ವಾರಸುದಾರರ ಪತ್ತೆಗೆ ಸಹಕರಿಸಲು ಮನವಿ

Published

on

ಚಾಮರಾಜನಗರ: ಬೇಡರಪುರ ಗ್ರಾಮದ ಬಳಿಯಿರುವ ಪ್ರೇಸ್ಟೀಜ್ ಫ್ಯಾಕ್ಟರಿಯ ಬಳಿ ಅಪರಿಚಿತ ಶವ ಪತ್ತೆಯಾಗಿದ್ದು, ವಾರಸುದಾರರ ಸುಳಿವಿಗೆ ಸಹಕರಿಸಲು ಕೋರಲಾಗಿದೆ.

ಸುಮಾರು 35 ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯಾಗಿದ್ದು, 158 ಸೆಂ.ಮೀ ಎತ್ತರ, ಕೋಲು ಮುಖ, ತೆಳ್ಳನೆ ಶರೀರ, ಎಣ್ಣೆಗೆಂಪು ಮೈ ಬಣ್ಣ ಹೊಂದಿದ್ದು, ಕುರುಚಲು ಗಡ್ಡ, ಕಪ್ಪು ಮೀಸೆ ಹಾಗೂ ಕಪ್ಪು, ಬಿಳಿ ಮಿಶ್ರಿತ ತಲೆ ಕೂದಲು ಇರುತ್ತದೆ. ಕಪ್ಪು, ಹಸಿರು ಮತ್ತು ಬಿಳಿ ಮಿಶ್ರಿತ ಗೆರೆಗಳುಳ್ಳ ತುಂಬು ತೋಳಿನ ಶರ್ಟ್ ಧರಿಸಿದ್ದು, ಎದೆಯ ಭಾಗದಲ್ಲಿ ಎಸು ಎಂಬ ಹಚ್ಚೆ ಇರುತ್ತದೆ.

ಇವರ ವಾರಸದಾರರು ಇದ್ದಲ್ಲಿ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Continue Reading

Trending

error: Content is protected !!