Chamarajanagar
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಯಳಂದೂರು ಇಲ್ಲಿಗೆ ಕೊಳ್ಳೇಗಾಲ ವಿಭಾಗದ ಉಪ ವಿಭಾಗಾಧಿಕಾರಿಗಳಾಗಿರುವ ಮಹೇಶ್ ಭೇಟಿ

ಯಳಂದೂರು ಪಟ್ಟಣದ ಶ್ರೀ ವೈ ಎಂ ಮಲ್ಲಿಕಾರ್ಜುನ ಸ್ವಾಮಿ ನೀಡಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡ ಹಾಗೂ ಮೂಲ ಸೌಕರ್ಯಗಳ ಕುರಿತು ಮಾಹಿತಿ ಪಡೆದುಕೊಂಡರು. ಗುಣಮಟ್ಟದ ಶಿಕ್ಷಣದ ಸೌಲಭ್ಯವಿದ್ದರೂ ಸ್ವಂತ ಕಟ್ಟಡವಿಲ್ಲದೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಿಥಿಲಗೊಂಡ ಕಟ್ಟಡಗಳಲ್ಲಿ ತರಗತಿಗಳನ್ನು ನಡೆಸುತ್ತಿದೆ.
ಉಪ ವಿಭಾಗಾಧಿಕಾರಿಗಳು ಪ್ರಾಂಶುಪಾಲರಾದ ವಿಜಯ ಹನೂರ್ ಹಾಗೂ ಅಧ್ಯಾಪಕರೊಡನೆ ತೋಟಗಾರಿಕಾ ಇಲಾಖೆಗೆ ಸೇರಿದ ಜಮೀನನ್ನು ಪರಿಶೀಲಿಸಿದರು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಾಲೇಜಿಗೆ ಸ್ವಂತ ಕಟ್ಟಡ ಕಟ್ಟಿಕೊಳ್ಳುವ ಸಂಬಂಧ ಜಿಲ್ಲಾಧಿಕಾರಿಯವರಿಗೆ ವರದಿ ನೀಡಿ ಸೂಕ್ತ ಜಾಗವನ್ನು ನೀಡುವ ಭರವಸೆಯನ್ನು ಉಪ ವಿಭಾಗಾಧಿಕಾರಿಯವರು ನೀಡಿದರು. ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿಗಳಾದ ಶ್ರೀ ಜಯಪ್ರಕಾಶ್, ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕರ ಕಛೇರಿಯಿಂದ ಹೆಚ್ಚುವರಿ ನಿರ್ದೇಶಕರಾದ ಶ್ರೀ ನಾಗೇಂದ್ರ ಪ್ರಸಾದ್, ವಿಶೇಷ ಅಧಿಕಾರಿಗಳಾಗಿರುವ ಶ್ರೀ ಅರುಣ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿರುವ ಶ್ರೀ ಮಹೇಶ್, ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲರಾಗಿರುವ ನಂಜುಂಡಯ್ಯ, ಅಧ್ಯಾಪಕರಾಗಿರುವ ಡಾ. ಲಿಖಿತ ಎಸ್ ಅನುರಾಧ, ಶ್ವೇತಾ ಕೆ, ಗಿರಿಜಾ ಎಂ, ದಾಕ್ಷಯಣಿ ಬಿ ವಿ, ಪುಷ್ಪ ಕುಮಾರ್ ಎಂ ವಿ, ಸಿಬ್ಬಂದಿಗಳಾದ ನಂಜೇಶ್, ಮಂಜುನಾಥ್ ಹಾಗೂ ಕಛೇರಿ ಸಿಬ್ಬಂದಿಗಳು ಹಾಜರಿದ್ದರು.
Chamarajanagar
ಸುರೇಶ್ ಎನ್. ಋಗ್ವೇದಿ ಅವರಿಗೆ ವಿಪ್ರ ವಿಕಾಸ ಪ್ರಶಸ್ತಿ

ಚಾಮರಾಜನಗರ: ಬ್ರಾಹ್ಮಣ ಮಹಾಸಭಾ ರಾಜ್ಯ ಉಪಾಧ್ಯಕ್ಷರು ಹಾಗೂ ಸಂಸ್ಕೃತಿ ಚಿಂತಕರಾದ ಸುರೇಶ್ ಎನ್ ಋಗ್ವೇದಿ ಅವರಿಗೆ ವಿಪ್ರ ವಿಕಾಸ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸಮಾನ ಮನಸ್ಕರ ಮಾಧ್ಯಮ ಮಿತ್ರರ ವೇದಿಕೆಯ ಸಂಸ್ಥಾಪಕ ಕಾರ್ಯದರ್ಶಿ ಹನುಮೇಶ್ ಕೆ ಯಾವಗಲ್ ತಿಳಿಸಿದ್ದಾರೆ.
ಹಾಸನ ತಾಲೂಕಿನ ಬೇಲೂರಿನಲ್ಲಿ ಸಂಸ್ಕಾರ ಸಂಸ್ಕೃತಿ ಸಂಘಟನೆಗಾಗಿ ವಿಕಾಸ ಸಾರಥ್ಯದಲ್ಲಿ ಬೇಲೂರು ಹಬ್ಬ ಕಾರ್ಯಕ್ರಮವು ಜು.20 ರಂದು ಭಾನುವಾರ ಬೇಲೂರಿನ ಶ್ರೀ ಶೃಂಗೇರಿ ಶಾರದಾ ಪೀಠದ ಶ್ರೀ ಭಾರತಿ ತೀರ್ಥ ಸಭಾ ಭವನದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಉಪಾಧ್ಯಕ್ಷರು ಹಾಗೂ ಸಂಸ್ಕೃತಿ ಚಿಂತಕರಾದ ಸುರೇಶ್ ಎನ್ ಋಗ್ವೇದಿ ಅವರಿಗೆ ವಿಪ್ರ ವಿಕಾಸ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ವಿಪ್ರ ವಿಕಾಸ ಪ್ರಶಸ್ತಿ ಸ್ವೀಕರಿಸಲ್ಲಿರುವ ಸುರೇಶ್ ಎನ್ ಋಗ್ವೇದಿ ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಮೂರು ದಶಕಗಳಿಂದ ರಾಷ್ಟ್ರೀಯ ಚಿಂತನೆ, ಸ್ವದೇಶಿ, ಯುವ ಸಂಘಟನೆ, ಪರಿಸರ ಸಂರಕ್ಷಣೆ, ಸಂಸ್ಕೃತಿ, ಪರಂಪರೆ, ರಾಷ್ಟ್ರೀಯ ಮೌಲ್ಯಗಳ ಪ್ರಸಾರ, ಶಿಕ್ಷಣ, ಕನ್ನಡ ನಾಡು ನುಡಿ ಹಾಗೂ ಸಮಾಜದ ಸಮಗ್ರ ವಿಕಾಸದ ಬೆಳವಣಿಗೆಯಲ್ಲಿ ಅಮೂಲ್ಯ ಸೇವೆಯನ್ನು ಸಲ್ಲಿಸುತ್ತಿದ್ದು ಇವರಿಗೆ ವಿಕಾಸ ಬೇಲೂರು ಹಬ್ಬ 2025 ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ದಿ.ಗರುಡನಗಿರಿ ನಾಗರಾಜ್ ಸ್ಮರಣಾರ್ಥ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.
ಸುರೇಶ್ ಎನ್ ಋಗ್ವೇದಿಯವರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ , ಕರ್ನಾಟಕ ಗಮಕ ಕಲಾ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ, ಜೈ ಹಿಂದ್ ಪ್ರತಿಷ್ಠಾನದ ಅಧ್ಯಕ್ಷರು ಶ್ರೀ ಕೃಷ್ಣ ಪ್ರತಿಷ್ಠಾನದ ಅಧ್ಯಕ್ಷರು ಋಗ್ವೇದಿ ಯೂತ್ ಕ್ಲಬ್ ಗೌರವಾಧ್ಯಕ್ಷರು, ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ವಿವಿಧ ಸಂಘಟನೆಗಳಲ್ಲಿ ಕ್ರಿಯಾಶೀಲರಾಗಿ, ಕಾರ್ಯನಿರ್ವಹಿಸಿದ್ದು, ಇತಿಹಾಸ ಉಪನ್ಯಾಸಕರಾಗಿ ಕಳೆದ 31 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.
Chamarajanagar
ಹಸುಗೂಸನ್ನು ರಸ್ತೆ ಬದಿಯಲ್ಲಿ ಬಿಟ್ಟು ಹೋದ ಪೋಷಕರು

ಚಾಮರಾಜನಗರ: ಒಂದು ವಾರದ ಹಿಂದೆ ಜನಿಸಿರುವ ಹಸುಗೂಸನ್ನು ರಸ್ತೆ ಬದಿಯಲ್ಲಿ ಬಿಟ್ಟು ಹೋಗಿರುವ ಘಟನೆ ಸಂಭವಿಸಿದೆ.
ತಾಲೂಕಿನ ಸಾಗಡೆ ಮತ್ತು ತಮ್ಮಡಹಳ್ಳಿ ಗ್ರಾಮಗಳ ನಡುವಿನ ರಸ್ತೆಯ ಬದಿಯಲ್ಲಿ ಹೆಣ್ಣು ಹಸುಗೂಸನ್ನು ಪೋಷಕರು ಬಿಟ್ಟು ಹೋಗಿದ್ದು, ಸಾಗಡೆ ಗ್ರಾಮದ ಪರಮೇಶ್ ಎಂಬುವವರು ಅದೇ ರಸ್ತೆಯಲ್ಲಿ ನಗರ ಕಡೆ ಸಂಚಾರ ಮಾಡುತ್ತಿದ್ದಾಗ ಹಸುಗೂಸು ಅಳುವ ಶಬ್ಧ ಕೇಳಿಬಂದಿದೆ.
ಸ್ಥಳಕ್ಕೆ ಬಂದು ನೋಡಿದಾಗ ಹೆಣ್ಣು ಮಗುವನ್ನು ರಸ್ತೆ ಬದಿಯಲ್ಲಿ ಬಿಟ್ಟಿರುವುದು ತಿಳಿದು, ಬಳಿಕ ಸಾಗಡೆ ಗ್ರಾಮದ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳಿಗೆ ಕರೆ ಮಾಡಿ ಮಾಹಿತಿ ತಿಳಿಸಿ ಮಗುವನ್ನು ಆಂಬುಲೆನ್ಸ್ ಮೂಲಕ ಚಾ.ನಗರ ಜಿಲ್ಲಾಸ್ಪತ್ರೆಗೆ ಕರೆತಂದಿದ್ದಾರೆ. ಮಗುವಿನ ಪೋಷಕರು ಯಾರು ಎಂಬುದು ಇನ್ನೂ ತಿಳಿದುಬಂದಿಲ್ಲ.
Chamarajanagar
ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವು

ಚಾಮರಾಜನಗರ: ಗುಂಡ್ಲುಪೇಟೆ – ಚಾಮರಾಜನಗರ ಮುಖ್ಯ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ರಾಮಸಮುದ್ರದ ನಿವಾಸಿ ಸಂತೋಷ್ (25) ಮೃತ ದುರ್ದೈವಿ. ಈತ ತೆರಕಣಾಂಬಿಯ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಮೃತ ಸಂತೋಷ್ ಬೈಕ್ ನಲ್ಲಿ ಗುಂಡ್ಲುಪೇಟೆ- ಚಾಮರಾಜನಗರ ಮುಖ್ಯ ರಸ್ತೆಯಲ್ಲಿ ಬರುವಾಗ ಕೆ.ಕೆ ಹುಂಡಿ ಗ್ರಾಮದ ಬಳಿ ವಾಹನವೊಂದು ಹೊಡೆದುಕೊಂಡು ಹೋಗಿರುವ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೃತ ದೇಹವನ್ನು ನಗರದ ಸಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಮುಂದಿನ ಕ್ರಮಕೈಗೊಳ್ಳಲಾಗಿದೆ. ಈ ಸಂಬಂಧ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
State15 hours ago
GST ನೋಟಿಸ್: ನಗದು ವ್ಯವಹಾರದತ್ತ ಮುಖ ಮಾಡಿದ ವರ್ತಕರು; ಗೊಂದಲಗಳಿಗೆ ತೆರಿಗೆ ಇಲಾಖೆ ಕೊಟ್ಟ ಸ್ಪಷ್ಟನೆ, ಸೂಚನೆಗಳೇನು..?
-
Mandya11 hours ago
ಡಿಸಿಎಂ ಡಿ.ಕೆ.ಶಿವಕುಮಾರ್ ಎಸ್ಕಾರ್ಟ್ ವಾಹನ ಪಲ್ಟಿ : ಇಬ್ಬರಿಗೆ ಗಾಯ
-
Chamarajanagar17 hours ago
ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವು
-
Chamarajanagar11 hours ago
ಸುರೇಶ್ ಎನ್. ಋಗ್ವೇದಿ ಅವರಿಗೆ ವಿಪ್ರ ವಿಕಾಸ ಪ್ರಶಸ್ತಿ
-
Mysore13 hours ago
ನಾವು ನಿಮ್ಮ ಬಳಿ ಜೈಕಾರ ಹಾಕಿಸಿಕೊಳ್ಳಲು ಬಂದಿಲ್ಲ ನಿಮ್ಮ ಋಣ ತೀರಿಸಲು ಬಂದಿದ್ದೇವೆ – ಡಿ.ಕೆ.ಶಿವಕುಮಾರ್
-
Special16 hours ago
ನಿಸ್ವಾರ್ಥ ಸೇವೆಯ ಆಯುರ್ವೇದ ತಜ್ಞ ವೈದ್ಯ ಡಾ.ಗುರುಬಸವರಾಜ
-
Kodagu11 hours ago
ಕೊಡಗು ಸೇರಿ ರಾಜ್ಯದ ಮಲೆನಾಡಿನಲ್ಲಿ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ
-
Chamarajanagar11 hours ago
ಹಸುಗೂಸನ್ನು ರಸ್ತೆ ಬದಿಯಲ್ಲಿ ಬಿಟ್ಟು ಹೋದ ಪೋಷಕರು