Chamarajanagar
75 ನೇ ಗಣರಾಜ್ಯೋತ್ಸವಕ್ಕೆ ಆದ್ಯತೆ ನೀಡದೆ ಅಯೋಧ್ಯೆ ಬಗ್ಗೆ ಆದ್ಯತೆ ನೀಡಿದ ಕೇಂದ್ರಸರಕಾರ- ಶಾಸಕ ಎ ಆರ್ ಕೆ

ಯಳಂದೂರು: ಪಟ್ಟಣದ ಪದವಿ ಪೂರ್ವ ಕಾಲೇಜು ಆವರಣದಲ್ಲಿ ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ 75 ನೇ ಗಣರಾಜ್ಯೋತ್ಸವ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.
ಬೆಳಿಗ್ಗೆ 8.30 ರಂದು ತಹಸೀಲ್ದಾರ್ ಜಯಪ್ರಕಾಶ್ ರವರು ಧ್ವಜಾರೋಹಣ ನೆರವೇರಿಸಿದರು.
ಶಾಸಕ ಎ ಆರ್ ಕೃಷ್ಣಮೂರ್ತಿ ರವರು ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಮಸ್ತ ಜನತೆ ಶುಭಾಶಯ ಕೋರಿದರು.
ನಂತರ ಮಾತನಾಡಿ .ಭಾರತ ವಿಶ್ವದಲ್ಲಿಯೇ ಮಾದರಿ ರಾಷ್ಟ್ರವಾಗಿದೆ. ಅನೇಕ ಸಂಸ್ಕೃತಿ, ಧರ್ಮ, ಭಾಷೆಗಳನ್ನು ಹಾಗೂ ವೈವಿಧ್ಯತೆಯಲ್ಲಿಯೂ ಏಕತೆಯನ್ನು ಹೊಂದಿರುವಂತಹ ರಾಷ್ಟ್ರವಾಗಿದೆ. ಈ ಏಕತೆ ಕಾಣಲು ನಮ್ಮ ಸಂವಿಧಾನ ಕಾರಣ. ಸಂವಿಧಾನವೆಂದರೆ ನೀತಿ ನಿಯಮಗಳ ಸಂಗ್ರಹವೆಂದು ಕರೆಯಲಾಗುತ್ತದೆ. ಭಾರತದ ಅಖಂಡತೆಯನ್ನು ಸಂವಿಧಾನ ಚೌಕಟ್ಟಿನಲ್ಲಿ ಒಂದೂಗೂಡಿಸಿದ್ದು ನಮ್ಮ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ರವರು. ವಿವಿಧ ರಾಷ್ಟ್ರಗಳ ಸಂವಿಧಾನವನ್ನು ಆಳವಾಗಿ ಅಧ್ಯಯನ ಮಾಡಿ ಈ ಬಹುಸಂಸ್ಕೃತಿಯನ್ನು ಹೊಂದಿರುವ ರಾಷ್ಟ್ರಕ್ಕೆ ಹೊಂದುವಂತಹ ಬೃಹತ್ ಸಂವಿಧಾನವನ್ನು ರಚಿಸಿಕೊಟ್ಟಿದ್ದಾರೆ. ಸಂವಿಧಾನದಡಿಯಲ್ಲಿ ಸರ್ವರು ಸಮಾನರು, ಪ್ರಜೆಗಳು ಸ್ವಾವಲಂಬಿಯಾಗಿ, ಸ್ವಾಭಿಮಾನದಿಂದ ಬದುಕು ಸಾಗಿಸಿ ಅಂತ ತಿಳಿಸಿದ್ದಾರೆ. ಮೂಲ ಸಂವಿಧಾನದಲ್ಲಿ 395 ವಿಧಿಗಳು, 8 ಅನುಸೂಚಿ, 22 ಭಾಗಗಳನ್ನು ಒಳಗೊಂಡಿದೆ.ಈ ವಿಶ್ವದಲ್ಲಿಯೇ ನಮ್ಮ ಸಂವಿಧಾನ ಬೃಹತ್ ಸಂವಿಧಾನವಾಗಿದೆ ಹಾಗೂ ಮಾದರಿಯಾಗಿದೆ. ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವಂತೆ ಜೀವನ ನಡೆಸಬೇಕಾಗಿದೆ. ಪ್ರತಿಯೊಬ್ಬ ನಾಗರೀಕರು ಸಂವಿಧಾನದ ಬಗ್ಗೆ ತಿಳಿದು ಕೊಳ್ಳಬೇಕು. ಈ ದೇಶದ ಮೂಲಭೂತ ಕಾನೂನಾಗಿದೆ ಪ್ರತಿಯೊಬ್ಬರೂ ಪಾಲಿಸಬೇಕು. ಈ ದೇಶದ ಮಹಿಳೆಯರು ಅಂಬೇಡ್ಕರ್ ರವರನ್ನು ಪೂಜಿಸಬೇಕು ಏಕೆಂದರೆ ಶತಮಾನಗಳಿಂದಲೂ ಶೋಷಣೆಗೆ ಒಳಗಾಗಿದ್ದ ಮಹಿಳೆಯರನ್ನು ಸಂವಿಧಾನದಡಿಯಲ್ಲಿ ಮುಕ್ತಿಯನ್ನು ತೋರಿಸಿಕೊಟ್ಟರು. ಹೆಣ್ಣು ಸ್ವಾವಲಂಬಿಯಾಗಿ ಬದುಕಬೇಕು ಎಂದು ತೋರಿಸಿಕೊಟ್ಟರು. ಜನವರಿ 26 – 1950 ರಂದು ನಮ್ಮ ಸಂವಿಧಾನ ಅಧಿಕೃತವಾಗಿ ಜಾರಿಯಾಯಿತು. ಈ ಹಬ್ಬವನ್ನು ಪ್ರತಿ ಮನೆಯಲ್ಲಿಯೂ ಆಚರಿಸಬೇಕು ಎಂದು ತಿಳಿಸಿದರು.
75 ನೇ ಗಣರಾಜೋತ್ಸವನ್ನು ಕೇಂದ್ರ ಸರಕಾರ ಅರ್ಥಪೂರ್ಣವಾಗಿ ಆಚರಿಸಿದೆ ಆಯೋಧ್ಯದಲ್ಲಿ ರಾಮನ ಮೂರ್ತಿ ಸ್ಥಾಪನೆಗೆ ಹೆಚ್ಚಿನ ಗಮನಹರಿಸಿದ್ದಾರೆ ಅದೇ ನಮ್ಮ ರಾಜ್ಯ ಸರಕಾರ 75 ನೇ ಗಣರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲು ಸಂವಿಧಾನ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮವನ್ನು ನಡೆಸಿಕೊಂಡು ಬಂದಿದೆ ಎಂದು ತಿಳಿಸಿದರು.
ಮುಖ್ಯ ಭಾಷಣಕಾರಾಗಿ ಉಪನ್ಯಾಸಕಿ ಶ್ವೇತಾ ಕೆ ರವರು ಗಣರಾಜ್ಯೋತ್ಸವದ ಬಗ್ಗೆ ಅರ್ಥಪೂರ್ಣವಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಜಯಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜು, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ್, ಸಮಾಜ ಕಲ್ಯಾಣ ಅಧಿಕಾರಿ ರಾಜೇಶ್, ಸಿಡಿಪಿಒ ಸಕಲೇಶ್, ದುಗ್ಗಹಟ್ಟ ವೀರಭದ್ರಪ್ಪ ಪಟ್ಟಣ ಪಂಚಾಯತಿ ಸದಸ್ಯರಾದ ಶಾಂತಮ್ಮ ಲಿಂಗರಾಜು, ಲಕ್ಷ್ಮೀ, ಮಹೇಶ್,ಮಹದೇವನಾಯಕ, ಪಪಂ ಮುಖ್ಯಾಧಿಕಾರಿ ಮಹೇಶ್ ಕುಮಾರ್ ಮಾಜಿ ಜಿಪಂ ಉಪಾಧ್ಯಕ್ಷ ಜೆ ಯೋಗೇಶ್, ಹೊಂಗನೂರು ಚಂದ್ರು ಹಾಗೂ ವಿವಿಧ ಇಲಾಖೆಯ ಮುಖ್ಯಸ್ಥರು ಹಾಗೂ ಇತರರು ಹಾಜರಿದ್ದರು.
Chamarajanagar
ತಲೆಯಲ್ಲಿ ಕೂದಲಿಲ್ಲ ಎಂದು ನಿಂದಿಸಿದ ಪತ್ನಿ: ಮನನೊಂದ ಪತಿ ಆತ್ಮ*ಹತ್ಯೆ

ಚಾಮರಾಜನಗರ: ತಲೆಯಲ್ಲಿ ಕೂದಲು ಇಲ್ಲದ ಕಾರಣಕ್ಕೆ ಪತ್ನಿ ಕಿರುಕುಳ ನೀಡಿದ್ದರಿಂದ ಮನನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ನಡೆದಿದೆ.
ತಾಲ್ಲೂಕಿನ ಉಡಿಗಾಲ ಗ್ರಾಮದ ನಿವಾಸಿ ಪರಶಿವಮೂರ್ತಿ (32) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಪರಶಿವಮೂರ್ತಿಗೆ ತಲೆಯಲ್ಲಿ ಕೂದಲು ಕಡಿಮೆ ಇದ್ದು, ಕೂದಲು ನಾಟಿ ಮಾಡಿಸಿಕೊಳ್ಳುವಂತೆ ಪತ್ನಿ ಒತ್ತಾಯಿಸುತ್ತಿದ್ದಳು ಬೋಳು ತಲೆ ಎಂದು ಪದೇಪದೇ ನಿಂದಿಸುತ್ತಿದ್ದಳು. ಇದರಿಂದ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನೆ ಮಾಹಿತಿ ತಿಳಿದ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chamarajanagar
ಸಾಮಾಜಿಕ ಭದ್ರತಾ ಯೋಜನೆಗಳ ಮೆಗಾ ಲಾಗಿನ್ ಕಾರ್ಯಕ್ರಮ

ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ಲೀಡ್ ಬ್ಯಾಂಕ್ ಚಾಮರಾಜನಗರ ಮತ್ತು ಧಾನ್ ಫೌಂಡೇಶನ್ ಸಂಸ್ಥೆಯು ಹಾಗೂ ಭೀಮನಬೀಡು ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಭೀಮನಬೀಡು ಗ್ರಾಮದ
ವಿವಿಧ ಬ್ಯಾಂಕ್ ಖಾತೆದಾರೆರೆಲ್ಲರಿಗೂ ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆ ಮತ್ತು ಪ್ರಧಾನಮಂತ್ರಿ ಜೀವನ ಜ್ಯೋತಿ ಭೀಮ್ ಯೋಜನೆ ಎಂಬ ಎರಡು ಸಾಮಾಜಿಕ ಭದ್ರತಾ ಯೋಜನೆಗಳಿಗೆ ಗ್ರಾಮದ ಒಟ್ಟು ಪಿ ಎಮ್ ಎಸ್ ಬಿ ವೈ ಯೋಜನೆಗೆ 271 ಖಾತೆದಾರರು ಹಾಗೂ ಪಿ ಎಂ ಜೆ ಜೆ ಬಿ ವೈ ಯೋಜನೆಗೆ 200 ಬ್ಯಾಂಕ್ ಖಾತೆದಾರರನ್ನು ಸೇರ್ಪಡೆ ಗೊಳಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪಿಡಿಒ ಭೋಜೇಶ್ ರವರು ತಮ್ಮ ಗ್ರಾಮದ ಜನರಿಗೆ ಅರ್ಜಿಗಳನ್ನು ಬರೆವುದರ ಮೂಲಕ ನೋಂದಣಿ ಮಾಡಿಸಿದರು.
ಈ ಸಂದರ್ಭದಲ್ಲಿ
ಮಹದೇವೇಗೌಡ
ಧಾನ್ ಫೌಂಡೇಶನ್ ಸಿ ಎಫ್ ಎಲ್ ಗೋವಿಂದರಾಜು
ಆರ್ಥಿಕ ಸಹಾಯಕರು ವಸಂತ ಜ್ಯೋತಿ ಮತ್ತು ಮಮತಾ
ಪಂಚಾಯಿತಿ ಸದಸ್ಯರು ಸ್ವಾಮಿ. ಮತ್ತು ಸಿಬ್ಬಂದಿಗಳು ಗ್ರಾಮಸ್ಥರು ಮಹಿಳೆಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು
Chamarajanagar
ಸಾಮಾಜಿಕ ಭದ್ರತಾ ಯೋಜನೆಗಳ ಮೆಗಾ ಲಾಗಿನ್ ಕಾರ್ಯಕ್ರಮ

ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ಲೀಡ್ ಬ್ಯಾಂಕ್ ಚಾಮರಾಜನಗರ ಮತ್ತು ಧಾನ್ ಫೌಂಡೇಶನ್ ಸಂಸ್ಥೆಯು ಹಾಗೂ ಭೀಮನಬೀಡು ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಭೀಮನಬೀಡು ಗ್ರಾಮದ
ವಿವಿಧ ಬ್ಯಾಂಕ್ ಖಾತೆದಾರೆರೆಲ್ಲರಿಗೂ ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆ ಮತ್ತು ಪ್ರಧಾನಮಂತ್ರಿ ಜೀವನ ಜ್ಯೋತಿ ಭೀಮ್ ಯೋಜನೆ ಎಂಬ ಎರಡು ಸಾಮಾಜಿಕ ಭದ್ರತಾ ಯೋಜನೆಗಳಿಗೆ ಗ್ರಾಮದ ಒಟ್ಟು ಪಿ ಎಮ್ ಎಸ್ ಬಿ ವೈ ಯೋಜನೆಗೆ 271 ಖಾತೆದಾರರು ಹಾಗೂ ಪಿ ಎಂ ಜೆ ಜೆ ಬಿ ವೈ ಯೋಜನೆಗೆ 200 ಬ್ಯಾಂಕ್ ಖಾತೆದಾರರನ್ನು ಸೇರ್ಪಡೆ ಗೊಳಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪಿಡಿಒ ಭೋಜೇಶ್ ರವರು ತಮ್ಮ ಗ್ರಾಮದ ಜನರಿಗೆ ಅರ್ಜಿಗಳನ್ನು ಬರೆವುದರ ಮೂಲಕ ನೋಂದಣಿ ಮಾಡಿಸಿದರು.
ಈ ಸಂದರ್ಭದಲ್ಲಿ
ಮಹದೇವೇಗೌಡ
ಧಾನ್ ಫೌಂಡೇಶನ್ ಸಿ ಎಫ್ ಎಲ್ ಗೋವಿಂದರಾಜು
ಆರ್ಥಿಕ ಸಹಾಯಕರು ವಸಂತ ಜ್ಯೋತಿ ಮತ್ತು ಮಮತಾ
ಪಂಚಾಯಿತಿ ಸದಸ್ಯರು ಸ್ವಾಮಿ. ಮತ್ತು ಸಿಬ್ಬಂದಿಗಳು ಗ್ರಾಮಸ್ಥರು ಮಹಿಳೆಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು
-
Chamarajanagar20 hours ago
ಕಾಂಗ್ರೆಸ್ ಗೆ ಭರ್ಜರಿ ಗೆಲುವು
-
Uncategorized19 hours ago
ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿ: ಪುಂಡಾನೆ ಸೆರೆ ಹಿಡಿದ ಕ್ಯಾಪ್ಟನ್ ಪ್ರಶಾಂತ್ ಅಂಡ್ ಟೀಮ್
-
Chamarajanagar21 hours ago
ಕಾರು ಅಪಘಾತ ಇಬ್ಬರು ಸ್ಥಳದಲ್ಲೇ ಮೃತ
-
Chikmagalur23 hours ago
ಹತ್ತು ಲಕ್ಷ ಮೌಲ್ಯದ 11 ಬೈಕ್ ಕದ್ದಿದ್ದ ಕಳ್ಳನ ಬಂಧನ
-
National - International12 hours ago
ಪಾಕ್ನ 90 ಮಂದಿ ಸೈನಿಕರನ್ನು ಹತ್ಯೆ ಮಾಡಿದ್ದೇವೆ ಎಂದ ಬಲೂಚ್ ಲಿಬರೇಶನ್ ಆರ್ಮಿ
-
Kodagu14 hours ago
ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಬಾಲಕಿ ಮೃ*ತ
-
Mandya17 hours ago
ಮಳವಳ್ಳಿ ವಸತಿ ಶಾಲೆಯ ದುರ್ಘಟನೆ : ಎಚ್ಡಿಕೆ ಕಳವಳ
-
Chamarajanagar15 hours ago
ತಲೆಯಲ್ಲಿ ಕೂದಲಿಲ್ಲ ಎಂದು ನಿಂದಿಸಿದ ಪತ್ನಿ: ಮನನೊಂದ ಪತಿ ಆತ್ಮ*ಹತ್ಯೆ