Chamarajanagar
ಯಳಂದೂರು ತಾಲೂಕು ಘಟಕದ ವತಿಯಿಂದ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿ

ಯಳಂದೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಯಳಂದೂರು ತಾಲ್ಲೂಕು ಘಟಕದ ವತಿಯಿಂದ ನೌಕರರ ನ್ಯಾಯಯುತ ಬೇಡಿಕೆಗಳಾದ
7 ನೇ ವೇತನ ಆಯೋಗ ವರದಿ ಪಡೆದು 40% ಫಿಟ್ಮೆಂಟ್ ನೀಡುವುದು,/NPS ರದ್ದುಪಡಿಸಿ OPS ಜಾರಿ ಮಾಡುವುದು, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸುವುದರ ಈಡೇರಿಕೆಗಾಗಿ ಮುಖ್ಯಮಂತ್ರಿಗಳಿಗೆ ಪತ್ರಬರೆಯುವ ಮೂಲಕ ರಾಜ್ಯ ಸರ್ಕಾರವನ್ನು ಒತ್ತಾಯಿಸುವಂತೆ ಕೋರಿ ಕೊಳ್ಳೇಗಾಲದ ಶಾಸಕ ಎ.ಆರ್ ಕೃಷ್ಣಮೂರ್ತಿರವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷರಾದ ಶ್ರೀ ವೈ.ಎಂ ಮಂಜುನಾಥ್ ನೌಕರರ ಸಂಘದ ಕಾರ್ಯದರ್ಶಿ ಅಮ್ಮನಪುರ ಮಹೇಶ್ ಉಪಾಧ್ಯಕ್ಷರಾದ ಮಹೇಶ ನಂಜುಂಡ , ಶಿಕ್ಷಕರ ಸಂಘದ ಅಧ್ಯಕ್ಷ ಸೋಮಣ್ಣ, ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಅಧ್ಯಕ್ಷ ನಂಜುಂಡಯ್ಯ, ರಾಜ್ಯಪರಿಷತ್ ಸದಸ್ಯರಾದ ಗೋವಿಂದ, ತಾ.ಪಂ ಕಾ.ನಿ. ಅಧಿಕಾರಿಗಳಾದ ಶ್ರೀನಿವಾಸ, ತಹಶಿಲ್ದಾರ್ ಜಯಪ್ರಕಾಶ್, ಬಿ.ಇ.ಒ ಕಾಂತರಾಜು, TSW ರಾಜೇಶ್ , ಸಿಡಿಪಿಒ ಸಕಲೇಶ್ವರ್ ಹಾಗೂ ತಾಲ್ಲೂಕಿನ ವಿವಿಧ ವೃಂದ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.
Chamarajanagar
ಬೈಕ್ ಗಳ ನಡುವೆ ಮುಖಮುಖಿ ಡಿಕ್ಕಿ ಸವಾರಿಗೆ ಗಾಯ

ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಹೋಬಳಿಯ ಬೆಟ್ಟದಮಾದಹಳ್ಳಿ ಹಾಗೂ ಭೋಗಯ್ಯನಹುಂಡಿಯ ಮುಖ್ಯ ರಸ್ತೆಯಲ್ಲಿ ಎರಡು ಸ್ಕೋಟರ್ ಗಳ ನಡುವೆ ಮುಖಮುಖಿ ಡಿಕ್ಕಿ ಹೊಡೆದು ಅಪಘಾತವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತ್ತು.
ಗಾಯಾಳುಗಳಾದ ಭೋಗಯ್ಯನಹುಂಡಿ ಗ್ರಾಮದ ಸುನಿ ಹಾಗೂ ಬೆಟ್ಟದಮಾದಹಳ್ಳಿ ಗ್ರಾಮದ ರಂಗಸ್ವಾಮಿ ಎಂಬುವರ ಬೈಕ್ ಗಳ ನಡುವಿನ ಡಿಕ್ಕಿಯಾಗಿ ಇಬ್ಬರಿಗೂ ತಲೆ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.
Chamarajanagar
ಕರ್ತವ್ಯ ನಿರ್ವಹಿಸುತ್ತಿದ್ದ ನೌಕರ ಹೃದಯಘಾತದಿಂದ ನಿಧನ

ಹನೂರು : ತಾಲೂಕಿನ ರಾಮಾಪುರ ಪೊಲೀಸ್ ಠಾಣೆಯ ಗುಪ್ತ ಮಾಹಿತಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರ ಹೃದಯಘಾತದಿಂದ ನಿಧನ..
ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ನಿವಾಸಿ ಪರಶುರಾಮ್( 32) ಮೃತಪಟ್ಟ ದುರ್ದೈವಿ.
ಕಳೆದ 9 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ್ ಕಳೆದ 2 ವರ್ಷಗಳಿಂದ ರಾಮಾಪುರ ಪೊಲೀಸ್ ಠಾಣೆಯಲ್ಲಿ ಗುಪ್ತ ಮಾಹಿತಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು, ಶನಿವಾರ ಬೆಳಿಗ್ಗೆ ಕುಸಿದು ಬಿದಿದ್ದು ಸಿಬ್ಬಂದಿಗಳು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ, ಮೃತ ವ್ಯಕ್ತಿಯು ರಾಯಚೂರು ಜಿಲ್ಲೆಯವರಾಗಿದ್ದು ಕುಟುಂಸ್ಥರಿಗೆ ರಾಮಾಪುರ ಪೊಲೀಸರು ಮಾಹಿತಿ ನೀಡಿ ಮೃತ ವ್ಯಕ್ತಿಯ ಶವವನ್ನು ಚಾಮರಾಜನಗರದ ಸೀಮ್ಸ್ ಆಸ್ಪತ್ರೆ ಇರಿಸಲಾಗಿದ್ದು, ಕುಟುಂಬಸ್ಥರು ಬಂದಾಗ ಅವರಿಗೆ ಹಸ್ತಾಂತರಿಸಲಾಗುವುದು ಎನ್ನಲಾಗಿದೆ..
ಸಂತಾಪ : ಮೃತ ಪರುಶುರಾಮ್ ಅವರಿಗೆ ಸಾವಿನ ವಿಷಯ ತಿಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕವಿತಾ, ಡಿವೈಎಸ್ಪಿ ಧರ್ಮೇಂದ್ರ, ಇನ್ಸ್ಪೆಕ್ಟರ್ ಚಿಕ್ಕರಾಜಶೆಟ್ಟಿ, ರಾಮಾಪುರ ಠಾಣೆಯ ಸಿಬ್ಬಂದಿ ಮೃತ ವ್ಯಕ್ತಿಗೆ ಸಂತಾಪ ಸೂಚಿಸಿದ್ದಾರೆ…
Chamarajanagar
ಏ.27 ರಂದು ನಗರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಕುಂದು-ಕೊರತೆ ಸಭೆ

ಚಾಮರಾಜನಗರ, ಏಪ್ರಿಲ್ 26: ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮುಖಂಡರ ಕುಂದು-ಕೊರತೆ ಸಭೆಯನ್ನು ಏ.27ರಂದು (ನಾಳೆ) ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ (ಎಸ್.ಸಿ/ಎಸ್.ಟಿ ಜನಾಂಗದವರು) ಮುಖಂಡರು, ಪದಾಧಿಕಾರಿಗಳು ಸಭೆಗೆ ಹಾಜರಾಗಿ ಸದುಪಯೋಗ ಪಡೆಯುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
State9 hours ago
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಆರೋಪಿ ರನ್ಯಾರಾವ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
-
Uncategorized6 hours ago
ಭಾರತ-ಪಾಕ್ ಯುದ್ಧದ ಬಗ್ಗೆ ಸಿಎಂ ಹೇಳಿಕೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್.ಅಶೋಕ್ ವಾಗ್ದಾಳಿ
-
Mysore11 hours ago
ಕೇಂದ್ರ ಸರ್ಕಾರ, ಯುದ್ಧದ ಬದಲು ಪಾಕ್ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ: ಸಿಎಂ ಸಿದ್ದರಾಮಯ್ಯ
-
Mysore9 hours ago
ಬಿಜೆಪಿ ದೇವರು, ಧರ್ಮದ ಹೆಸರಲ್ಲಿ ಬರೀ ಸುಳ್ಳು ಹರಡುತ್ತದೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ
-
Hassan5 hours ago
ಹಾಸನ| ಪ್ರತಿಯೊಬ್ಬರು ಬಾಲ್ಯದಿಂದಲೇ ತಮ್ಮ ಮಕ್ಕಳಿಗೆ ಸಂಸ್ಕಾರ ಕಲಿಸಿಕೊಡುವುದು ಅಗತ್ಯ: ಮಾಜಿ ಶಾಸಕ ಬಿ.ಆರ್. ಗುರುದೇವ್
-
Kodagu6 hours ago
ಪ್ರಧಾನಿ, ಗೃಹ ಸಚಿವರ ರಾಜೀನಾಮೆಗೆ ಆಮ್ ಆದ್ಮಿ ಪಾರ್ಟಿ ಆಗ್ರಹ
-
Hassan2 hours ago
ಜಮೀನು ವಿಚಾಕ್ಕೆ ಕೊಲೆ
-
Kodagu5 hours ago
ಮಡಿಕೇರಿಯಲ್ಲಿ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಉದ್ಘಾಟನೆ