Hassan
ಎಲ್ಲಾ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಗೆ ನಿರ್ಣಯ
ವಸ್ತ್ರ ಧರಿಸುವ ಕುರಿತು ನಾಮಫಲಕ ಬಿಡುಗಡೆ: ಚಂದ್ರಮೊಗವೀರ
ಹಾಸನ: ದೇವಾಲಯಗಳನ್ನು ಧಾರ್ಮಿಕ ಕೇಂದ್ರಗಳನ್ನಾಗಿ ಮಾಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ದೇವಸ್ಥಾನಗಳಲ್ಲಿ ಭಾರತೀಯ ಸಂಸ್ಕೃತಿಯ ಪ್ರಕಾರ ವಸ್ತ್ರ ಸಂಹಿತೆ ಜಾರಿಗೆ ತರಲು ನಾವುಗಳು ನಿರ್ಣಯವನ್ನು ತೆಗೆದುಕೊಂಡಿದ್ದು, ದೇವಾಲಯಗಳ ಬಳಿ ನಾಮಫಲಕವನ್ನು ಹಾಕುವುದಾಗಿ ಹಿಂದೂ ಜನಜಾಗೃತಿ ಸಮಿತಿಯ ದಕ್ಷಿಣ ಕನ್ನಡದ ಉಸ್ತುವಾರಿ ಚಂದ್ರಮೊಗವೀರ ತಿಳಿಸಿದರು.
ನಗರದ ಗಾಂಧಿ ಬಜಾರ್ ಬಳಿ ಇರುವ ಶ್ರೀ ಕಾಳಿಕಾಂಬ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದಿಂದ ನಡೆದ ಸುದ್ದಿಗೋಷ್ಠಿಯಲ್ಲಿ ನಾಮಫಲಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, ದೇಶದಲ್ಲಿನ ಅನೇಕ ದೇವಸ್ಥಾನಗಳು, ಗುರುದ್ವಾರ, ಚರ್ಚ್, ಮಸೀದಿ ಮತ್ತು ಇತರ ಪ್ರಾರ್ಥನಾ ಸ್ಥಳಗಳು, ಖಾಸಗಿ ಕಂಪನಿ, ಶಾಲಾ-ಕಾಲೇಜು, ನ್ಯಾಯಾಲಯ, ಪೋಲೀಸ್ ಮುಂತಾದ ಎಲ್ಲಾ ಕ್ಷೇತ್ರಗಳಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದೆ. ಜ್ಯೋತಿರ್ಲಿಂಗಗಳಲ್ಲಿ ಒಂದಾದ ಉಜೈನ್ ನ ಶ್ರೀ ಮಹಾಕಾಲೇಶ್ವರ ದೇವಸ್ಥಾನ, ವಾರಾಣಸಿಯ ಶ್ರೀಕಾಶಿ ವಿಶ್ವೇಶ್ವರ ದೇವಸ್ಥಾನ, ತಿರುಪತಿ ಬಾಲಾಜಿ ದೇವಸ್ಥಾನ, ಕೇರಳದ ಪ್ರಸಿದ್ಧ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನ, ಹೀಗೆ ಕೆಲವು ಪ್ರಸಿದ್ಧ ದೇವಸ್ಥಾನಗಳಲ್ಲಿ ಅನೇಕ ವರ್ಷಗಳಿಂದ ಭಕ್ತರಿಗಾಗಿ ಸಾತ್ತಿಕ ವಸ್ತ್ರ ಸಂಹಿತೆ ಜಾರಿಯಿದೆ ಎಂದರು. ಈ ಹಿಂದೆ ಧಾರ್ಮಿಕ ದತ್ತಿ ಇಲಾಖೆಯ ರಾಜ್ಯ ಧಾರ್ಮಿಕ ಪರಿಷತ್ ಸಹ ರಾಜ್ಯದ ೨೧೧ ಎ ಗ್ರೇಡ್ ದೇವಸ್ಥಾನಗಳಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆಯನ್ನು ಅಳವಡಿಸುವ ಬಗ್ಗೆ ಚಿಂತನೆ ನಡೆಸಿತ್ತು. ಈಗಾಗಲೇ ಚಿಕ್ಕಮಗಳೂರಿನ ಇತಿಹಾಸ ಪ್ರಸಿದ್ಧ ದೇವಿರಮ್ಮನ ದೇಗುಲಕ್ಕೆ ಆಗಮಿಸುವ ಭಕ್ತಾದಿಗಳಿಗೆ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನ ಆಡಳಿತ ಮಂಡಳಿ ವಸ್ತ್ರಸಂಹಿತೆ ಜಾರಿ ಮಾಡಿದೆ. ದೇವಿರಮ್ಮನ ದೇವಾಲಯದಲ್ಲಿ ಸ್ಕರ್ಟ್, ಮಿಡಿ, ಸ್ಟೀವೆಸ್ ಡ್ರೆಸ್, ಪ್ಯಾಂಟ್, ಸಾಕ್ಸ್ ಹಾಕಿ ದೇವಾಲಯಕ್ಕೆ ಬರುವಂತಿಲ್ಲ ಅದರ ಆಧಾರದಲ್ಲಿ ದೇವಸ್ಥಾನದ ಪಾವಿತ್ರ್ಯತೆ, ಶಿಷ್ಟಾಚಾರ, ಸಂಸ್ಕೃತಿ ಕಾಪಾಡುವುದಕ್ಕಾಗಿ, ಕರ್ನಾಟಕ ದೇವಸ್ಥಾನ – ಮಠ ಮತ್ತು ಧಾರ್ಮಿಕ ಸಂಸ್ಥೆಗಳ – ಮಹಾಸಂಘದ ಅಧಿವೇಶನದಲ್ಲಿ ರಾಜ್ಯದ ೫೦೦ ಕ್ಕೂ ಅಧಿಕ ದೇವಸ್ಥಾನಗಳಲ್ಲಿ ಮತ್ತು ಹಾಸನದ ೩೦ ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಭಾರತೀಯ ಸಂಸ್ಕೃತಿಯ ಪ್ರಕಾರ ವಸ್ತ್ರ ಸಂಹಿತೆ ಜಾರಿಗೊಳಿಸುವ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
ಪ್ರತೀ ದೇವಸ್ಥಾನಗಳ ಮುಂಭಾಗದಲ್ಲಿ ವಸ್ತ್ರ ಸಂಹೀತೆಯ ಫಲಕಗಳನ್ನು ಹಾಕಿ ಜನಪ್ರಭೋಧನೆ ಮಾಡುವುದು, ದೇವಸ್ಥಾನದ ಪಾವಿತ್ಯತೆಯ ರಕ್ಷಣೆ ಮತ್ತು ಭಾರತೀಯ ಸಂಸ್ಕೃತಿಯ ಪಾಲನೆಯಾಗುವ ಉದ್ದೇಶದಿಂದ ದೇವಸ್ಥಾನಕ್ಕೆ ಬರುವ ಭಕ್ತರು ತುಂಡು ಬಟ್ಟೆ ಧರಿಸುವ ಬದಲು, ಭಾರತೀಯ ಸಂಸ್ಕೃತಿಯ ಪಾಲನೆ ಮಾಡಿ ದೇವಸ್ಥಾನ ವ್ಯವಸ್ಥಾಪನೆಗೆ ಸಹಕರಿಸಲು ಜನಜಾಗೃತಿ ಮೂಡಿಸಲಾಗುವುದು. ಭಾರತೀಯ ಸಾತ್ವಿಕ ಉಡುಪುಗಳು : ಮಹಿಳೆಯರು ಚುಡಿದಾರ, ಲಂಗ-ದಾವಣಿ, ಸಲ್ವಾರ್-ಕುರ್ತಾ ಜೊತೆಗೆ ಸೀರೆ, ಓಡಾಣಿ ಮುಂತಾದ ಪಾರಂಪರಿಕ ಸಾತ್ವಿಕ
ವೇಷಭೂಷಣಗಳನ್ನು ಧರಿಸಬೇಕು ಮತ್ತು ಪುರುಷರು ಕುರ್ತಾ, ಧೋತಿ, ಲುಂಗಿ ಅಥವಾ ಪೈಜಾಮ ಅಥವಾ ಸಾಮಾನ್ಯ ಶರ್ಟ್-ಪ್ಯಾಂಟ್ಗಳನ್ನು ಹಾಕಬೇಕು. ಆಧುನಿಕ ಅಸಾತ್ವಿಕ ಉಡುಪುಗಳು : ಪಾಶ್ಚಿಮಾತ್ಯ ಉಡುಪುಗಳಲ್ಲಿ ಸ್ಕರ್ಟ್, ಮಿಡಿ, ಶಾರ್ಟ್ ಪ್ಯಾಂಟ್, ಸ್ಯಾಂಡೋ ವೆಸ್ಟ್, ಜೀನ್ಸ್ ಸ್ಕರ್ಟ್, ಸ್ಟೀವೆಸ್ ಡ್ರೆಸ್, ನೈಟ್ ಡ್ರೆಸ್, ಸಾಕ್ಸ್ ಇತ್ಯಾದಿ ಉಡುಪುಗಳನ್ನು ಹಾಕಬಾರದೆಂದು ಮನವಿ ಮಾಡಿದರು. ದೇವಸ್ಥಾನಗಳನ್ನು ಧರ್ಮಪ್ರಚಾರ ಕೇಂದ್ರವನ್ನಾಗಿ ಮಾಡುವುದು : ದೇವಸ್ಥಾನಗಳ ಸಂರಕ್ಷಣೆ, ಸಂಘಟನೆಯ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಸ್ಥರದ ಅಧಿವೇಶನಗಳನ್ನು ಮಾಡಿ, ದೇವಸ್ಥಾನಗಳ ಸಂಘಟನೆ ಮಾಡಲಾಗುವುದು. ಅದಲ್ಲದೇ ಹಿಂದೂ ಸಮಾಜಕ್ಕೆ ಹಿಂದೂ ಧರ್ಮದ ಬಗ್ಗೆ ಶಿಕ್ಷಣ ನೀಡಲು ಮುಂದಿನ ದಿನಗಳಲ್ಲಿ ರಾಜ್ಯದ ೫೦ ದೇವಸ್ಥಾನಗಲ್ಲಿ ಮಕ್ಕಳು, ಸ್ತ್ರೀ-ಪುರುಷರಿಗೆ ನಿಯಮಿತಿವಾಗಿ ಹಿಂದೂ ಧರ್ಮದ ಶಿಕ್ಷಣ ನೀಡುವ ವರ್ಗಗಳು ಸಹ ಪ್ರಾರಂಭ ಮಾಡಲಾಗುವುದು. ಇದಕ್ಕೆ ಸಂಬಂದಿಸಿ ಒಂದು ಪಠ್ಯಕೃಮವನ್ನು ಸಹ ರಚಿಸಲಾಗಿದೆ. ಈಗಾಗಲೇ ರಾಜ್ಯದ ೩೦೦ ಸ್ಥಳಗಳಲ್ಲಿ ಈ ವರ್ಗ ಪ್ರಾರಂಭಿಸಲಾಗಿದೆ. ಮುಂದೆ ಪ್ರತಿ ದೇವಸ್ಥಾನಗಳಲ್ಲಿ ಹಿಂದೂ ಧರ್ಮ ಜಾಗೃತಿ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಹಮ್ಮಿಕೊಳ್ಳಲಾಗುವುದು ಎಂದರು. ಇದಲ್ಲದೇ ಕರ್ನಾಟಕದಲ್ಲಿ ಮಾನ್ಯ ಧಾರ್ಮಿಕ ದತ್ತಿ ಇಲಾಖೆಯ ಸಚಿವರನ್ನು ಈಗಾಗಲೇ ಭೇಟಿ ಮಾಡಿ ಸರಕಾರಿ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ, ಧರ್ಮ ಶಿಕ್ಷಣ ಫಲಕಗಳನ್ನು ಅಳವಡಿಸಲು ಮನವಿ ನೀಡಲಾಗಿದೆ. ಮಾನ್ಯ ಸಚಿವರು ಈ ಬಗ್ಗೆ ರಾಜ್ಯ ಧಾರ್ಮಿಕ ಪರಿಷತ್ ನಲ್ಲಿ ಚರ್ಚೆ ಮಾಡಿ ನಿರ್ಣಯ ಕೈಗೊಳ್ಳುವುದಾಗಿ ಸಚಿವರು ತಿಳಿಸಿದ್ದಾರೆ ಎಂದು ವಿಶ್ವಾಸವ್ಯಕ್ತಪಡಿಸಿದರು.
ಶ್ರೀ ರಾಘವಚಾರ್ ಮಾತನಾಡಿ, “ವಸ್ತ್ರ ಸಂಹಿತೆಯೂ ಅನಾದಿ ಕಾಲದಿಂದಲೂ ಇದ್ದು, ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವದಿಂದಾಗಿ ಇದರಲ್ಲಿ ಚ್ಯುತಿ ಬಂದಿದ್ದು ಈಗ ಹಿಂದೂಗಳು ಜಾಗೃತರಾಗಿ ಎಲ್ಲಾ ದೇವಸ್ಥಾನಗಳಲ್ಲೂ ಜಾರಿ ಮಾಡಬೇಕಾಗಿದೆ” ಎಂದು ಕಳಕಳಿ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಶ್ರೀ ಕಾಳಿಕಾಂಬ ದೇವಸ್ಥಾನದ ಟ್ರಸ್ಟಿಗಳಾದ ನಾಗೇಶ್, ಉತ್ತರ ಉತ್ತಿಷ್ಠ ಗಣಪತಿ ದೇವಸ್ಥಾನದ ಟ್ರಸ್ಟಿಗಳಾದ ರಾಘವೇಂದ್ರ ಆಚಾರ್, ರಾಜ ವೆಂಕಟೇಶ್ ಕಾಳಿಕಾಂಬ ದೇವಸ್ಥಾನ ಧರ್ಮದರ್ಶಿಗಳು, ವಿಜಯಲಕ್ಷ್ಮಿ ದೇವಸ್ಥಾನದ ಧರ್ಮದರ್ಶಿಗಳಾದ ಶಶಿಧರ್, ಕೋಟೆಬಾಗಿಲು ಆಂಜನೇಯ ದೇವಸ್ಥಾನದ ಧರ್ಮದರ್ಶಿ ಲವ ಕುಮಾರ್, ಶ್ರೀಪ್ರಸನ್ನ ಗಣಪತಿ ದೇವಸ್ಥಾನದ ಧರ್ಮದರ್ಶಿ ನಾಗೇಂದ್ರ, ಸುಬ್ರಹ್ಮಣ್ಯ ದೇವಸ್ಥಾನ ಧರ್ಮ ದರ್ಶಿಗಳಾದ ಗೋವಿಂದರಾಜು ಸೇರಿದಂತೆ ಹಲವಾರು ದೇವಸ್ಥಾನದ ಟ್ರಸ್ಟಿಗಳು ಇದೆ ವೇಳೆ ಉಪಸ್ಥಿತಿ ಇದ್ದರು.
Hassan
ಈ ಸಲದ ಗಣರಾಜ್ಯೋತ್ಸವ ಸನ್ಮಾನಕ್ಕೆ ಅಪರೂಪದ ವೈದ್ಯ ಡಾ.ನಿತಿನ್ ಆಯ್ಕೆ
ಹಾಸನ: ನಗರದ ಪ್ರತಿಷ್ಠಿತ ರಾಜೀವ್ ಆಯುರ್ವೇದ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಪ್ರಾಂಶುಪಾಲರು ಮತ್ತು ಮುಖ್ಯ ವೈದ್ಯಾಧಿಕಾರಿಗಳಾಗಿರುವ ಡಾ.ಎಸ್.ಎ.ನಿತಿನ್ ಅವರು ಈ ಬಾರಿಯ ಜಿಲ್ಲಾಡಳಿತದ ಗಣರಾಜ್ಯೋತ್ಸವದ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಜಿಲ್ಲಾಡಳಿತ ಅಭಿನಂದಿಸುತ್ತಿದ್ದು, ಈ ಸಲ ವೈದ್ಯಕೀಯ ಕ್ಷೇತ್ರದಿಂದ ಡಾ.ನಿತಿನ್ ಅವರನ್ನು ಆಯ್ಮೆ ಮಾಡಲಾಗಿದೆ. 2001 ರಿಂದ ಆಯುರ್ವೇದ ವೈದ್ಯರಾಗಿ ಜಿಲ್ಲೆಯಲ್ಲಿ ವೃತ್ತಿ ಆರಂಭಿಸಿದ ಇವರು, 25 ವರ್ಷಗಳ ಕಾಲ ಸಾರ್ಥಕ ಸೇವೆ ಸಲ್ಲಿಸಿದ್ದಾರೆ.
ಹಾಸನದ ಪ್ರತಿಷ್ಠಿತ ರಾಜೀವ್ ಶಿಕ್ಷಣ ವಿದ್ಯಾಸಂಸ್ಥೆಯಲ್ಲಿ ವೈದ್ಯರಾಗಿ, ಶೈಕ್ಷಣಿಕ ಸಲಹೆಗಾರರಾಗಿ, ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2018 ರಿಂದ ರಾಜೀವ್ ಆಯುರ್ವೇದ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಪ್ರಾಂಶುಪಾಲರು ಮತ್ತು ಮುಖ್ಯ ವೈದ್ಯಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2024 ರಿಂದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಶೈಕ್ಷಣಿಕ ಮಂಡಳಿ ಸದಸ್ಯರಾಗಿದ್ದಾರೆ.
2017 ರಲ್ಲಿ ರಾಷ್ಟ್ರೀಯ ಜೈನ್ ಯುವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗೆ ಭಾಜರಾಗಿದ್ದಾರೆ,
ವೈದ್ಯ ಸೇವೆ ಜೊತೆಗೆ ಜನಪರ ಕೆಲಸ ಕಾರ್ಯವನ್ನೂ ಮಾಡುತ್ತಿದ್ದಾರೆ. ವಿಶೇಷವಾಗಿ ರೋಗಿಗಳ ಔಷಧ ಚೀಟಿಯನ್ನೂ ಕನ್ನಡದಲ್ಲೇ ಬರೆಯುತ್ತಿರುವುದು ಇವರ ಕನ್ನಡ ಪ್ರೀತಿಗೆ ಹಿಡಿದ ಕನ್ನಡಿ.
ಜಿಲ್ಲೆ ಹಾಗೂ ರಾಜ್ಯಮಟ್ಟದ ಪತ್ರಿಕೆಗಳಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ, ವಿವಿಧ ರೋಗ-ರುಜಿನಗಳ ಬಗ್ಗೆ ಅನುಸರಿಸಬೇಕಾದ ಮುನ್ನೆಚ್ಚರಿಕೆ ಬಗ್ಗೆ ಲೇಖನ ಬರೆದು ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡುತ್ತಿದ್ದಾರೆ. ಈ ರೀತಿಯ 250ಕ್ಕೂ ಹೆಚ್ಚು ಲೇಖನ ಬರೆದಿದ್ದಾರೆ. ಅಲ್ಲದೆ ಈಗಿನ ಸಂದರ್ಭಕ್ಕೆ ಆಯುರ್ವೇದ ಮಹತ್ವದ ಬಗ್ಗೆಯೂ ಹತ್ತಾರು ಲೇಖನ ಬರೆದು ವೈದ್ಯಕೀಯ ಸೇವೆ ಜೊತೆಗೆ ಸಾಮಾಜಿಕ ಅರಿವು, ಜಾಗೃತಿ ಕೆಲಸವನ್ನೂ ಮಾಡುತ್ತಿರುವ ಅಪರೂಪದ ವೈದ್ಯರು. ಜೊತೆಗೆ 200ಕ್ಕೂ ಹೆಚ್ಚು ಹನಿಗವನ, 100ಕ್ಕೂ ಹೆಚ್ಚು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ, 100ಕ್ಕೂ ಹೆಚ್ಚು ಆರೋಗ್ಯ ಮಾಹಿತಿ ಕುರಿತು ಉಪನ್ಯಾಸ, 70ಕ್ಕೂ ಹೆಚ್ಚು ಆರೋಗ್ಯ ಶಿಬಿರ ಮಾಡಿದ್ದಾರೆ. ಜಿಲ್ಲಾಮಟ್ಟದ ಗಣರಾಜ್ಯೋತ್ಸವ ಪುರಸ್ಕಾರಕ್ಕೆ ಭಾಜನರಾಗಿರುವುದಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು ಹಾರ್ದಿಕ ಅಭಿನಂದನೆ ಸಲ್ಲಿಸಿದ್ದಾರೆ.
ಹಿರಿಯ ಪತ್ರಕರ್ತ ಶ್ರವಣಬೆಳಗೊಳದ ಎಸ್.ಎನ್.ಅಶೋಕ್ ಕುಮಾರ್-ಜಿ.ಪಿ.ಶ್ಯಾಮಲಾದೇವಿ ಅವರ ಸುಪುತ್ರರಾದ ನಿತಿನ್ ಅವರು, ಪ್ರಾಥಮಿಕ ಶಿಕ್ಷಣವನ್ನೇ ಶ್ರವಣಬೆಳಗೊಳದಲ್ಲೇ ಮುಗಿಸಿ ಪ್ರೌಢಶಿಕ್ಷಣವನ್ನು ಮಾವಿನಕೆರೆಯ ಜವಾಹರ್ ನವೋದಯ ವಿದ್ಯಾಲಯದಲ್ಲಿ ಪಡೆದರು. ಹಾಸನದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯದಲ್ಲಿ ಬಿಎಎಂಎಸ್, ಎಂಡಿ ಪಡೆದರು. ಬೆಂಗಳೂರು ರಾಜೀವ್ ಗಾಂಧಿ ಆರೋಗ್ಯ ವಿವಿಯಲ್ಲಿ ಪಿಹೆಚ್ಡಿ ಪಡೆದರು.
Hassan
ಅರೇಳ್ಳಿ: ಜ.26 ರಂದು 207ನೇ ಭೀಮ ಕೋರೇಗಾಂವ್ ವಿಜಯೋತ್ಸವ ಆಚರಣೆ
ಹಾಸನ: ಸಂವಿಧಾನ ದಿನಾಚರಣೆ ಅಂಗವಾಗಿ ಜನವರಿ 26ರ ರಂದು ಬೇಲೂರು ತಾಲೂಕಿನ ಅರೇಳ್ಳಿಯಲ್ಲಿ 207ನೇ ಭೀಮ ಕೋರೇಗಾಂವ್ ವಿಜಯೋತ್ಸವ ಆಚರಿಸಲಾಗುವುದು ಎಂದು ದಲಿತ ಮುಖಂಡರಾದ ಅರೆಹಳ್ಳಿ ನಿಂಗರಾಜು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಭೀಮ ಕೋರೆಂಗಾವ್ ಯುದ್ಧ ದಲಿತರ ಸ್ವಾಭಿಮಾನದ ಪ್ರತೀಕವಾಗಿದೆ ಕೇವಲ ೫೦೦ ಜನ ಮಹರ್ ಸೈನಿಕರು ೨೮,೦೦೦ ಪೇಶ್ವೆ ಸೈನಿಕರನ್ನು ಬಗ್ಗುಬಡಿದ ವಿಜಯದ ದಿನವೇ ಭೀಮಾ ಕೋರೇಗಾಂವ್ ವಿಜಯೋತ್ಸವವನ್ನು ಪ್ರತಿ ವರ್ಷವೂ ಹರೇಹಳ್ಳಿಯಲ್ಲಿ ಆಚರಿಸಲಾಗುತ್ತಿದ್ದು ಅದೇ ರೀತಿ ಈ ವರ್ಷವೂ ವಿಜೃಂಭಣೆಯ ಉತ್ಸವ ನಡೆಯಲಿದೆ ಎಂದರು. ಜನವರಿ ೨೬ ರಂದು ಬೆಳಗ್ಗೆ ೧೧ ಗಂಟೆಗೆ ಅಂಬೇಡ್ಕರ್ ವೃತ್ತದ ಬಳಿ ಇರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಹೊರಡಲಿರುವ ಬೃಹತ್ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯ ಅಂಬೇಡ್ಕರ್ ಅಭಿಮಾನಿಗಳು ಹಾಗೂ ಅನುಯಾಯಿಗಳು ಭಾಗವಹಿಸಲಿದ್ದಾರೆ. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಲಿದ್ದು, ಅಂಬೇಡ್ಕರ್ ಭಾವಚಿತ್ರ ಹಾಗೂ ವಿಜಯ ಸ್ತಂಭದ ಮೆರವಣಿಗೆ ನಡೆಯಲಿದೆ ಎಂದರು.
ಅದೇ ದಿನ ಸಂಜೆ ೬ ಸುಮಾರಿಗೆ ಪಟ್ಟಣದ ಪದವಿಪೂರ್ವ ಕಾಲೇಜು ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮಕ್ಕೆ, ಬಾಬಾಸಾಹೇಬ್ ಅಂಬೇಡ್ಕರ್ ವಿಚಾರವಾದಿ ಬಿ.ಗೋಪಾಲ್, ಅಂಬೇಡ್ಕರ್ ಅನುಯಾಯಿ ಹಾಗೂ ನಟ ಚೇತನ್ ಅಹಿಂಸಾ, ಹಾಸ್ಯನಟ ಸಾಧುಕೋಕಿಲ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ವಿಚಾರಧಾರೆಗಳು ಹಾಗೂ ಭೀಮ ಕೋರೆಗಾಂವ್ ವಿಜಯೋತ್ಸವ ವಿಚಾರಗಳನ್ನು ಹಂಚಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಊಟ ಹಾಗೂ ಉಪಕಾರದ ವ್ಯವಸ್ಥೆ ಕಲ್ಪಿಸಲಾಗಿದ್ದು, ನಡೆಯಲಿರುವ ಅದ್ದೂರಿ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯ ಅಂಬೇಡ್ಕರ್ ಅಭಿಮಾನಿಗಳು, ಸಾರ್ವಜನಿಕರು, ಅರೆಹಳ್ಳಿ ಗ್ರಾಮಸ್ಥರು ಹಾಗೂ ಆ ಭಾಗದ ಎಲ್ಲಾ ಮುಖಂಡರು ಜನಪ್ರತಿನಿಧಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ವಿಜಯೋತ್ಸವ ಸಮಿತಿಯ ಅಧ್ಯಕ್ಷ ಎಸ್. ವಿರೂಪಾಕ್ಷ, ಲಿಂಗರಾಜು, ವಿಜಯೋತ್ಸವ ಸಮಿತಿಯ ಉಪಾಧ್ಯಕ್ಷ ಮಲ್ಲಿಕಾರ್ಜುನ್, ರಮೇಶ್, ಸಿದರಾಜು, ದಿನೇಶ್, ಸೋಮಶೇಖರ್ ಕುಮಾರ್ ಇತರರು ಉಪಸ್ಥಿತರಿದ್ದರು.
Hassan
ಸಣ್ಣ ಕೈಗಾರಿಕ ಇಂಡಸ್ಟ್ರೀಯಸ್ ಅಸೋಸಿಯೇಷನ್ ಭವನದ ೨ನೇ ಅಂತಸ್ಥಿನ ಭವನದ ಶಂಕುಸ್ಥಾಪನೆ
ಹಾಸನ: ನಗರದ ಡೈರಿ ವೃತ್ತ, ಅರಸೀಕೆರೆ ರಸ್ತೆ ಬಳಿ ಕೈಗಾರಿಕ ಪ್ರದೇಶದಲ್ಲಿ ಸಣ್ಣ ಕೈಗಾರಿಕ ಇಂಡಸ್ಟ್ರೀಯಸ್ ಅಸೋಸಿಯೇಷನ್ ಭವನದ ೨ನೇ ಅಂತಸ್ಥಿನ ಭವನದ ಶಂಕುಸ್ಥಾಪನೆ ಸಮಾರಂಭಕ್ಕೆ ಶುಕ್ರವಾರದಂದು ಗುದ್ದಲಿ ಪೂಜೆ ಸಲ್ಲಿಸಿ ಕಟ್ಟಡ ನಿರ್ಮಾಣಕ್ಕೆ ನಗರಸಭೆ ಅಧ್ಯಕ್ಷರಾದ ಎಂ. ಚಂದ್ರೇಗೌಡರು ಚಾಲನೆ ನೀಡಿದರು.
ನಂತರ ಮಾಧ್ಯಮದೊಂದಿಗೆ ಮಾತನಾಡಿ, ನಗರಸಭೆ ಅಧ್ಯಕ್ಷರಾದ ಎಂ. ಚಂದ್ರೇಗೌಡ ಮಾತನಾಡಿ, ಎರಡನೇ ಅಂತಸ್ಥಿತನ ನೂತನ ಕಟ್ಟಡ ನಿರ್ಮಾಣಕ್ಕೆ ಈಗಾಗಲೇ ಗುದ್ದಲಿಪೂಜೆ ನೆರವೇರಿದೆ. ಈ ಕಟ್ಟಡ ಸಂಘಕ್ಕೆ ಉಪಯೋಗವಾಗಲಿ ಎಂದು ಶುಭ ಹಾರೈಸುವುದಾಗಿ ಹೇಳಿದರು.
ಎಫ್.ಕೆ.ಸಿ.ಸಿ.ಐ. ಐಟಿ-ಬಿಟಿ ಸಮಿತಿ ಅಧ್ಯಕ್ಷ ಹೆಚ್.ಎ. ಕಿರಣ್ ಮಾತನಾಡಿ, ಸಂಘದ ಎರಡನೇ ಹಂತದ ಶಿಲನ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದ್ದು, ಕಳೆದ ಎರಡು ದಶಕಗಳಿಂದ ನಮ್ಮ ಸಂಘದ ಕಾರ್ಯಕ್ರಮಗಳು ಹಾಗೂ ಕಾರ್ಯವ್ಯಾಪ್ತಿ ಜಿಲ್ಲಾಧ್ಯಂತ ಹರಡಿದೆ. ಎರಡು ಸಾವಿರ ಜನ ಇದ್ದಂತಹ ಉದ್ಯಮಿಗಳು ಜಿಲ್ಲಾಧ್ಯಂತ ಈಗ ೨೦ ಸಾವಿರಕ್ಕೂ ಹೆಚ್ಚುಜನ ಉದ್ಯಮಿಗಳು ಇದ್ದಾರೆ. ಈ ಭಾಗವು ಕೂಡ ನಗರಸಭೆ ವ್ಯಾಪ್ತಿಗೆ ಸೇರಿದ್ದು, ಇ-ಖಾತೆ ವಿಚಾರವಾಗಿಯೂ ಕೂಡ ನಗರಸಭೆ ಅಧ್ಯಕ್ಷರು ಮಾಡಿಕೊಡುವ ಭರವಸೆ ನೀಡಿದ್ದಾರೆ ಎಂದರು.
ನಿರ್ಮಾಣವಾಗುತ್ತಿರುವ ಎರಡನೇ ಅಂತಸ್ಥಿನ ಕಟ್ಟಡವು ಕೈಗಾರಿಕ ಉದ್ಯಮಿಗಳ ಕಾರ್ಯಕ್ರಮಕ್ಕೆ ಮತ್ತು ಇಂಡಸ್ಟ್ರಿಯಲ್ ಕಾರ್ಯಕ್ರಮ ನಡೆಸುವುದಕ್ಕೆ ಒಂದು ಹಾಲ್ ನಿರ್ಮಾಣ ಮಾಡಲಾಗುತ್ತಿದೆ. ಮೊದಲನೇ ಅಂತಸ್ಥನ್ನು ಸ್ಕಿಲ್ ಡೆವಲಪ್ ಮೆಂಟ್ ಗೆ ಈಗಾಗಲೇ ಉದ್ಘಾಟನೆಗೊಂಡಿದೆ. ಉದ್ಯಮಿಗಳ ಹಲವಾರು ಜನರಿಗೆ ಕಾರ್ಯಕ್ರಮವನ್ನು ಸದ್ಯದಲ್ಲೆ ಮಾಡಲಾಗುವುದು ಎಂದು ಹೇಳಿದರು.
ಇದೆ ಸಂದರ್ಭದಲ್ಲಿ ಹೆಚ್.ಎ.ಡಿ.ಎಸ್.ಎಸ್.ಐ.ಎ. ಅಧ್ಯಕ್ಷ ಆರ್. ಶಿವರಾಮ್, ಉಪಾಧ್ಯಕ್ಷ ಪ್ರಕಾಶ್ ಎಸ್. ಯಾಜಿ, ಪ್ರಧಾನ ಕಾರ್ಯದರ್ಶಿ ಎನ್. ಸುದರ್ಶನ್, ಲಘು ಒದ್ಯೋಗ ಭಾರತೀ ಪ್ರಸನ್ನ ಕುಮಾರ್ ಮತ್ತು ಶಿವಾನಂದ್ ಇತರರು ಉಪಸ್ಥಿತರಿದ್ದರು.
-
Mysore24 hours ago
ನಮ್ಮನ್ನ ಟಾರ್ಗೆಟ್ ಮಾಡುತ್ತಿದ್ದಾರೆ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೇಳಿದ್ದೇನು?
-
Mysore9 hours ago
ಹೃದಯಾಘಾತದಿಂದ ಯುವರಾಜ ಕಾಲೇಜಿನ ಪ್ರಾಂಶುಪಾಲ ನಿಧನ
-
Kodagu10 hours ago
ಎ.ಸಿ.ಎಫ್ ಆಗಿ ವಾಟೇರಿರ ಕಾರ್ಯಪ್ಪ ಅಧಿಕಾರ ಸ್ವೀಕಾರ
-
Mysore6 hours ago
ಲೋಕಾಯುಕ್ತ ಸರ್ಕಾರದ ಕೈಗೊಂಬೆ: ಸಿಎಂ ಕ್ಲೀನ್ ಚೀಟ್ಗೆ ಹಳ್ಳಿಹಕ್ಕಿ ಪ್ರತಿಕ್ರಿಯೆ
-
Kodagu10 hours ago
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತರಿಗೆ ದಕ್ಕಬೇಕು
-
Kodagu7 hours ago
ಕಡಂಗ ಪ್ರೀಮಿಯರ್ ಲೀಗ್ ಕ್ರಿಕೆಟ್ ಬಿಡ್ಡಿಂಗ್ ಪ್ರಕ್ರಿಯೆ
-
State24 hours ago
ಬೆಂಗಳೂರು ಅರಮನೆ ಮೈದಾನದ ಜಾಗಕ್ಕೆ ಟಿ.ಡಿ.ಆರ್ ವಿತರಿಸುವುದು ರಾಜ್ಯದ ಹಿತಾಸಕ್ತಿಗೆ ಪ್ರತಿಕೂಲ: ಎಚ್.ಕೆ ಪಾಟೀಲ
-
Mysore7 hours ago
ಮತದಾನದ ಮಹತ್ವ ಸಾರಲು ಪರಿಣಾಮಕಾರಿ ಜನ ಜಾಗೃತಿ ಕಾರ್ಯಕ್ರಮ ಆಯೋಜನೆ ಅವಶ್ಯಕ ಬಿ.ಜಿ.ದಿನೇಶ್