Education
ಯುವನಿಧಿ ಯೋಜನೆಯ ಅರ್ಜಿ ಸಲ್ಲಿಕೆ ಕುರಿತು ಸರ್ಕಾರದಿಂದ ಹೊಸ ಆದೇಶ : ಅರ್ಜಿ ಸಲ್ಲಿಸಿ ಪಡೆದುಕೊಳ್ಳಿ ಮಾಸಿಕ 3,000ರೂ.

Yuva Nidhi Scheme 2025 – ಕರ್ನಾಟಕ ಸರ್ಕಾರ, ಕಾಂಗ್ರೆಸ್ ಪಕ್ಷದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಯುವ ನಿಧಿ” ಯೋಜನೆಯ ಅರ್ಜಿ ಅಹ್ವಾನದ ಕುರಿತು ಕರ್ನಾಟಕ ಸರ್ಕಾರವು ನೂತನ ಪ್ರಕಟಣೆಯನ್ನು ಹೊರಡಿಸಿದ್ದು, ಇದರ ಮಾಹಿತಿ ಇಲ್ಲಿದೆ..
ಪ್ರಕಟಣೆಯಲ್ಲಿ ಏನಿದೆ?
2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 5,27,273 ಅಭ್ಯರ್ಥಿಗಳ ಮಾಹಿತಿ ನ್ಯಾಡ್ ಪೋರ್ಟಲ್ ನಲ್ಲಿ ಅಪ್ಲೋಡ್ ಆಗಿದ್ದರೂ ಕೂಡ ಬಹಳಷ್ಟು ಅರ್ಹತೆ ಹೊಂದಿರುವ ಯುವಜನರು ಯುವನಿಧಿ ಯೋಜನೆಯ ಲಾಭ ಪಡೆದುಕೊಳ್ಳುತ್ತಿಲ್ಲ.
ಆದ್ದರಿಂದ ಯುವನಿಧಿ ಯೋಜನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲಿ ಎಂಬ ಉದ್ದೇಶದಿಂದ ಕರ್ನಾಟಕ ಕಾಲೇಜು ಶಿಕ್ಷಣ ಇಲಾಖೆಯು “ಯುವನಿಧಿ ವಿಶೇಷ ನೋಂದಣಿ ಅಭಿಯಾನ” ವನ್ನು ಜನವರಿ 06, 2025 ರಿಂದ ಜನವರಿ 20, 2025 ರವರೆಗೆ ಹಮ್ಮಿಕೊಳ್ಳಲಾಗುತ್ತಿದೆ.
ಕಾಲೇಜು ಮತ್ತು ಸ್ಥಳೀಯ ಪ್ರದೇಶಗಳಲ್ಲಿ ಬ್ಯಾನರ್, ಪೋಸ್ಟರ್ ಸೇರಿದಂತೆ ವಿವಿಧ ಮಾಧ್ಯಮದ ಮುಕಾಂತರ ವ್ಯಾಪಾಕ ಪ್ರಚಾರ ಮಾಡಲು ಸೂಚಿಸಿದೆ. ಇದರಿಂದ ಹೆಚ್ಚು ವಿದ್ಯಾರ್ಥಿಗಳಿಗೆ ಈ ಯೋಜನೆಯ ಸಿಗಲಿ ಎಂಬ ಉದ್ದೇಶ ಶಿಕ್ಷಣ ಇಲಾಖೆಯದ್ದಾಗಿದೆ.
ಈ ಯೋಜನೆಯಲ್ಲಿ ಯಾರಿಗೆ ಎಷ್ಟು ರೂ. ಹಣ ಸಿಗಲಿದೆ?
2023 ಹಾಗೂ 2024ನೇ ಶೈಕ್ಷಣಿಕ ಸಾಲಿನಲ್ಲಿ ತೇರ್ಗಡೆ ಹೊಂದಿದ ಡಿಪ್ಲೋಮ ನಿರುದ್ಯೋಗಿ ಅಭ್ಯರ್ಥಿಗಳಿಗೆ ಮಾಸಿಕ 1,500ರೂ. ಹಾಗೂ ಪದವಿ ಮುಗಿಸಿದ ನಿರುದ್ಯೋಗಿ ಅಭ್ಯರ್ಥಿಗಳಿಗೆ ಮಾಸಿಕ 3,000ರೂ. ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆಗೆ ಬೇಕಾಗುವ ಮುಖ್ಯ ದಾಖಲೆಗಳು :
• ನಿರುದ್ಯೋಗ ಪ್ರಮಾಣ ಪತ್ರ
• ಪದವಿ ಅಥವಾ ಡಿಪ್ಲೋಮ ಪ್ರಮಾಣ ಪತ್ರ
• ಆಧಾರ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್
ಸೇವಾ ಸಿಂಧು ಪೋರ್ಟಲ್ ಮುಕಾಂತರ ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ – https://sevasindhuservices.karnataka.gov.in/directApply.do?serviceId=2079
Education
ಎಚ್ಚರ! ನಿಮ್ಮ ಹೆಸರಿನಲ್ಲಿ ಯಾರಾದರೂ ನಕಲಿ ಸಿಮ್ ಖರೀದಿಸಿದ್ದಾರಾ? ಈಗಲೇ ಪರಿಶೀಲಿಸಿಕೊಳ್ಳಿ

ನಿಮಗೆ ಗೊತ್ತಿರುವ ಹಾಗೆ ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೆ ಇವೆ. ಹಲವಾರು ಕದಿಮರು ಅಥವಾ ಇತರೆ ಅಪರಾಧ ಎಸಗುವವರು ನಿಮಗೆ ಗೊತ್ತಿಲ್ಲದೇ ನಿಮ್ಮ ಹೆಸರಿನಲ್ಲಿ ಸಿಮ್ ಕಾರ್ಡ್ ಖರೀದಿಸಿ ಅನಧಿಕೃತ ಕರ್ತವ್ಯಕ್ಕೆ ಬಳಸುತ್ತಿರಬಹುದು.
ಕೇಂದ್ರ ದೂರ ಸಂಪರ್ಕ ಇಲಾಖೆಯ ಅಧಿಕೃತ ಮಾಹಿತಿಯ ಪ್ರಕಾರ ದೇಶದಲ್ಲಿ 55 ಲಕ್ಷಕ್ಕೂ ಹೆಚ್ಚು ನಕಲಿ ಸಿಮ್ ಕಾರ್ಡ್ ಗಳ ಸಂಪರ್ಕಗಳನ್ನು ಕಡಿತಗೊಳಿಸಲಾಗಿದೆ. ಅದೇ ರೀತಿ ಸರ್ಕಾರವು ಇದಕ್ಕೆ ಸಂಬಂಧಿಸಿದಂತೆ ದೂರಸಂಪರ್ಕ ಕಾಯ್ದೆಯನ್ನು ಜನವರಿ 01, 2025ರಂದು ಜಾರಿಗೆಗೊಳಿಸಿದ್ದು ನಕಲಿ ಸಿಮ್ ನ ಅಪರಾಧದಲ್ಲಿ ಸಿಕ್ಕಿ ಬಿದ್ದರೆ ಕಾನೂನು ಶಿಕ್ಷೆ ಜೊತೆಗೆ 10 ಲಕ್ಷ ರೂ. ದಂಡ ವಿಧಿಸುತ್ತದೆ.
ಆದ್ದರಿಂದ ನಿಮ್ಮ ಹೆಸರಿನಲ್ಲಿ ಯಾರಾದರೂ ಸಿಮ್ ಖರೀದಿಸಿದ್ದರೆ ಅದನ್ನು ನೀವು ನಿಮ್ಮ ಮೊಬೈಲ್ ನಲ್ಲಿಯೇ ಸರ್ಕಾರದ ಅಧಿಕೃತ ಜಾಲತಾಣದ ಮುಖಾಂತರ ಪರಿಶೀಲಿಸಿ ಕೊಳ್ಳಬಹುದು. ಅದು ಹೇಗೆ ಎಂಬ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ.
ನಕಲಿ ಸಿಮ್ ಮಾಹಿತಿಯನ್ನು ನಿಮ್ಮ ಮೊಬೈಲ್ ನಲ್ಲಿ ಪರಿಶೀಲಿಸುವುದು ಹೇಗೆ?
ಇದನ್ನು ನೀವು ಪರಿಶೀಲಿಸಲು ಸರ್ಕಾರದ ಅಧಿಕೃತ ಜಾಲತಾಣವಾಗಿರುವಂತಹ “ಟೆಲಿಕಾಂ ಅನಾಲಿಟಿಕ್ಸ್ ಫಾರ್ ಫ್ರೊಡ್ ಮ್ಯಾನೇಜ್ಮೆಂಟ್ ಆಂಡ್ ಕಂಜುಮರ್ ಪ್ರೊಟೆಕ್ಷನ್ ” (TAFCOP) ಕ್ಕೆ ಭೇಟಿ ನೀಡಿ ಅಥವಾ ನಾವು ಕೆಳಗೆ ನೀಡಿರುವ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ ಮುಂದುವರೆಯಿರಿ.
ನಂತರದಲ್ಲಿ ನಿಮ್ಮ ಮೊಬೈಲ್ ನಂಬರ್ ಎಂಟರ್ ಮಾಡಿ ನಿಮ್ಮ ನಂಬರಗೆ ಬರುವ ಓಟಿಪಿ ಎಂದು ನಮೂದಿಸಿ ಲಾಗಿನ್ ಆಗಿರಿ. ಲಾಗಿನ್ ಆದ ಬಳಿಕ ನಿಮ್ಮ ಹೆಸರಿನಲ್ಲಿ ಒಟ್ಟು ಎಷ್ಟು ಸಿಮ್ ಖರೀದಿಸಲಾಗಿದೆ ಎಂಬ ಮಾಹಿತಿ ಮತ್ತು ಅದರ ನಂಬರ್ ಕೂಡ ಅಲ್ಲಿ ತೋರಿಸುತ್ತದೆ. ಅವು ನಿಮ್ಮದಾಗಿರದೆ ಇದ್ದರೆ ನೀವು ರಿಪೋರ್ಟ್ ಮಾಡಿ ವಂಚನೆಯಿಂದ ಪಾರಾಗಿರಿ.
TAFCOP ಅಧಿಕೃತ ಜಾಲತಾಣ – https://tafcop.sancharsaathi.gov.in/telecomUser/
Education
ಕೇಂದ್ರ ಸರ್ಕಾರದಿಂದ ಪ್ರತಿ ವರ್ಷ 50,000ರೂ. ವಿದ್ಯಾರ್ಥಿವೇತನ : ಮೊಬೈಲ್ ನಲ್ಲೆ ಅರ್ಜಿ ಸಲ್ಲಿಸಿ

AICTE Yashasvi Scholarship 2025 – ವಿದ್ಯಾರ್ಥಿಗಳ ಶಿಕ್ಷಣವನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಯೋಜನೆಯನ್ನು ಅನುಷ್ಠಾಗೊಳಿಸಿದೆ. ಇದರಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅಧ್ಯಯನಕ್ಕಾಗಿ ಬೇಕಾಗುವ ಆರ್ಥಿಕ ಸಹಾಯವನ್ನು ನೀಡಿ ಶಿಕ್ಷಣವನ್ನು ಮುಂದುವರೆಸಲು ಸಹಾಯ ಮಾಡುತ್ತದೆ.
AICTE – (All India Council for Technical Education) – ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯು ಯಶಸ್ವಿ ವಿದ್ಯಾರ್ಥಿವೇತನ ಎಂಬ ಹೆಸರಿನಲ್ಲಿ ಆರ್ಥಿಕ ಸಹಾಯ ನೀಡಲಿದೆ.
ಈ ವಿದ್ಯಾರ್ಥಿ ವೇತನದ ಅಡಿಯಲ್ಲಿ ಒಟ್ಟು 5,200 ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಸಿಗಲಿದೆ. ಅದರಲ್ಲಿ 2,593 ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ 2,607 ಡಿಪ್ಲೋಮ್ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿಂಗಡಿಸಲಾಗಿದೆ. ವಿಶೇಷವೇನೆಂದರೆ ಇದರಲ್ಲಿ 276 ಕರ್ನಾಟಕದ ವಿದ್ಯಾರ್ಥಿಗಳಿಗಾಗಿ ಮಿಸಲಿಡಲಾಗಿದೆ.
ಯಾವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಬಹುದು?
AICTE ಯಿಂದ ಮಾನ್ಯತೆ ಪಡೆದಿರುವ ಕಾಲೇಜುಗಳಲ್ಲಿ ಯಾವುದೇ ವಿಷಯದಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ಪದವಿ ಅಥವಾ ಡಿಪ್ಲೋಮಾ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅದೇ ರೀತಿ ಡಿಪ್ಲೊಮೊ ಮುಗಿಸಿ 2ನೇ ವರ್ಷದ ಲ್ಯಾಟರಲ್ ಎಂಟ್ರಿ ಆಗಿ 2ನೇ ವರ್ಷದ ಪದವಿ ಓದುತ್ತಿರುವವರು ಕೂಡ ಅರ್ಜಿ ಸಲ್ಲಿಸಬಹುದು.
ಶೈಕ್ಷಣಿಕ ಅರ್ಹತೆಯನ್ನು ಹೊರತುಪಡಿಸಿ ವಿದ್ಯಾರ್ಥಿಗಳ ಕುಟುಂಬ ವಾರ್ಷಿಕ ಆಧಾಯವು 8 ಲಕ್ಷ ರೂ. ಒಳಗಿರಬೇಕು.
ಯಾರಿಗೆ ಎಷ್ಟು ವಿದ್ಯಾರ್ಥಿವೇತನ?
• ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 50,000ರೂ.
• ಡಿಪ್ಲೋಮ ಓದುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 30,000ರೂ.
ಅರ್ಜಿ ಸಲ್ಲಿಕೆಗಾಗಿ ಕೊನೆಯ ದಿನಾಂಕ ಇರುವುದಿಲ್ಲ.
ಅರ್ಜಿ ಸಲ್ಲಿಸುವ ಅಧಿಕೃತ ಜಾಲತಾಣದ ಲಿಂಕ್ – https://yashasvi.aicte.gov.in/login.php
Education
Free Coaching : ಮಾಸಿಕ 5,000ರೂ. ಜೊತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕರ್ನಾಟಕ ಸರ್ಕಾರದಿಂದ ಉಚಿತ ತರಬೇತಿ

Free Coaching for KAS, Banking, SSC 2025 – ಸಮಾಜ ಕಲ್ಯಾಣ ಇಲಾಖೆಯಿಂದ ಸರ್ಕಾರಿ ನೌಕರಿಗಾಗಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲಾಗುತ್ತಿದ್ದು, ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
2024-25ನೇ ಸಾಲಿಗೆ ಸಂಪೂರ್ಣ ಉಚಿತ ತರಬೇತಿಯನ್ನು ಅರ್ಹ ಅಭ್ಯರ್ಥಿಗಳಿಗೆ ನೀಡುತ್ತಿದ್ದು, ಅರ್ಜಿ ಸಲ್ಲಿಸುವ ಹಾಗೂ ಉಚಿತ ತರಬೇತಿಗೆ ಆಯ್ಕೆ ಮಾಡಿಕೊಳ್ಳುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಯಾವ ಯಾವ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು?
ಈ ಯೋಜನೆಯ ಅಡಿಯಲ್ಲಿ KAS, SSC, Banking, ರೈಲ್ವೆ, ನ್ಯಾಯಾಂಗ ಸೇವೆ ಸೇರಿದಂತೆ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಇಲಾಖೆಯಿಂದ ಉಚಿತ ತರಬೇತಿ ನೀಡಲಾಗುತ್ತದೆ. ಇದರ ಜೊತೆಗೆ ಮಾಸಿಕ 5,000ರೂ. ಆರ್ಥಿಕ ಸಹಾಯ ನೀಡಲಾಗುವುದು.
ಯಾವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು?
SC ಹಾಗೂ ST ವರ್ಗಕ್ಕೆ ಸೇರಿದವರಾಗಿದ್ದು, ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆಧಾಯವು 5 ಲಕ್ಷ ರೂ. ಒಳಗೆ ಇರಬೇಕು ಹಾಗೂ ಅಭ್ಯರ್ಥಿಯ ವಯಸ್ಸು 21 ರಿಂದ 37 ವರ್ಷದ ಒಳಗಿರಬೇಕು.
ಆಯ್ಕೆ ಮಾಡಿಕೊಳ್ಳುವ ವಿಧಾನ – ಸಾಮಾನ್ಯ ಪ್ರವೇಶ ಪರೀಕ್ಷೆ ಮುಕಾಂತರ
2024-25ನೇ ಸಾಲಿಗೆ ಸಮಾಜ ಕಲ್ಯಾಣ ವತಿಯಿಂದ SC / ST ವಿದ್ಯಾರ್ಥಿಗಳಿಗಾಗಿ KAS / Banking / IBPS / SSC / Judicial Services & Group-C ಪರೀಕ್ಷೆಗಳಿಗೆ Free Coaching ನೀಡಲು ಇದೀಗ ಅರ್ಜಿ ಆಹ್ವಾನಿಸಲಾಗಿದೆ.!!
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 20 ಫೆಬ್ರವರಿ 2025:
ಅರ್ಜಿ ಸಲ್ಲಿಸಲು ಜಾಲತಾಣದ ವಿಳಾಸ : https://swdservices.karnataka.gov.in/IGCCD
-
Mysore20 hours ago
ಲೋಕಾಯುಕ್ತ ಬಲೆಗೆ ಬಿದ್ದ ಬೆಟ್ಟದಪುರ ಸಬ್ ಇನ್ಸ್ಪೆಕ್ಟರ್ ಶಿವಶಂಕರ್
-
Kodagu21 hours ago
ಸುಗ್ರಿವಾಜ್ಞೆ ಅನುಷ್ಠಾನಕ್ಕೂ ಮೊದಲು ಬಡವರ ಸಾಲಮನ್ನಾ ಮಾಡಲಿ: ಯುವ ಜೆಡಿಎಸ್ ಆಗ್ರಹ
-
Kodagu24 hours ago
ಯುವ ಕಾಂಗ್ರೆಸ್ಗೆ ನೀಡಿದ್ದ ರಾಜೀನಾಮೆ ಹಿಂಪಡೆದ ಅನೂಪ್ ಕುಮಾರ್
-
Mysore21 hours ago
ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಆಡಳಿತದಲ್ಲಿ ಬಳಕೆ ಮಾಡಬೇಕು: ಪುರುಷೋತ್ತಮ ಬಿಳಿಮಲೆ
-
Mandya22 hours ago
ಸಕ್ಕರೆ ಕಾರ್ಖಾನೆಗಳು ರೈತರಿಗೆ 14 ದಿನದೊಳಗಾಗಿ ಹಣ ಪಾವತಿ ಮಾಡಿ: ಡಾ.ಕುಮಾರ
-
Mandya21 hours ago
ಮತ್ತತ್ತಿ: ಕಾವೇರಿ ನದಿಯಲ್ಲಿ ಮುಳುಗಿ ಯುವತಿಯರು ಸಾ**ವು
-
Tech14 hours ago
ಅತ್ಯಂತ ಶಕ್ತಿಶಾಲಿ ಕ್ಯಾಮೆರಾ ಹೊಂದಿರುವ ಮಧ್ಯಮ ಬೆಲೆಯ ವಿವೋ ಕಂಪನಿಯ Vivo V50 ಹೊಸ ಫೋನ್ ಬಿಡುಗಡೆ : ಬೆಲೆ ಎಷ್ಟು?
-
Hassan19 hours ago
ಹಾಸನ ವಿಮಾನ ನಿಲ್ದಾಣದ ಬಗ್ಗೆ ಸುದೀರ್ಘ ಚರ್ಚೆ ಮಾಡಿದ್ದೇವೆ: ಎಚ್ಡಿ ಕುಮಾರಸ್ವಾಮಿ